AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?

ವಿಶ್ವದಾದ್ಯಂತ ಅನೇಕ ಪ್ರಭೇದಗಳ ಆಮೆಗಳಿವೆ. ಆದರೆ ಬಹುತೇಕ ಆಮೆಗಳ ಪ್ರಭೇದಗಳು ಅಳಿವಿನಂಚಿನಲ್ಲಿದೆ. ಈ ಪ್ರಭೇಧಗಳನ್ನು ರಕ್ಷಿಸಲು ಹಾಗೂ ಈ ಬಗ್ಗೆ ಜನರಲ್ಲಿ ಈ ಕುರಿತು ಅರಿವು ಮೂಡಿಸಲು ಪ್ರತಿ ವರ್ಷ ಮೇ 23 ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?
ಸಾಯಿನಂದಾ
| Edited By: |

Updated on: May 23, 2024 | 11:17 AM

Share

ವಿಶ್ವದ ಅತ್ಯಂತ ಹಳೆಯ ಸರೀಸೃಪ ಗುಂಪುಗಳಿಗೆ ಸೇರಿದ ಆಮೆಗಳು ಶಾಂತ ಸ್ವಭಾವದ ಜೀವಿಗಳು. ಪ್ರಪಂಚದಲ್ಲಿ ಸುಮಾರು 350ಕ್ಕೂ ಹೆಚ್ಚಿನ ವಿವಿಧ ಆಮೆಯ ಸಂತತಿಗಳಿವೆ. ಈ ಭೂಮಿಯ ಮೇಲಿನ ಜೀವಿಗಳಲ್ಲಿ ಆಮೆಯ ಜೀವಿತಾವಧಿ ದೀರ್ಘವಾಗಿದೆ. 150-200 ವರ್ಷಗಳ ಕಾಲ ಬದುಕುವ ಈ ಸರೀಸೃಪಗಳ ಸಂತತಿಯನ್ನು ಕಾಣುವುದೇ ಅಪರೂಪವಾಗಿದೆ. ಸಮುದ್ರದಲ್ಲಿ ವಾಸಿಸುವ ಜೀವಿಯಾಗಿರುವ ಈ ಆಮೆಗಳ ಕೆಲ ಪ್ರಭೇದಗಳು ಕಣ್ಮರೆಯಾಗುತ್ತಿದೆ. ಇದಕ್ಕೆ ಒಂದು ಮೂಲ ಕಾರಣವೇ ಮಾನವನ ಬೇಟೆಯ ಪ್ರವೃತ್ತಿಯಾಗಿದ್ದು, ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳಬೇಟೆಯಾಡುತ್ತಾರೆ. ಈ ಸರೀಸೃಪಗಳ ಸಂತತಿಯನ್ನು ಉಳಿಸುವ ಹಾಗೂ ಅವುಗಳ ಆವಾಸಸ್ಥಾನಗಳನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ.

ವಿಶ್ವ ಆಮೆ ದಿನದ ಇತಿಹಾಸ

ಅಮೇರಿಕಾದ ಆಮೆ ರಕ್ಷಣಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ 2000 ಇಸವಿಯಲ್ಲಿ ಈ ದಿನವನ್ನು ಆಚರಣೆಗೆ ತರಲಾಯಿತು. ಅಂದಿನಿಂದ ಪ್ರತೀ ವರ್ಷ ಮೇ 23ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ನೋ ಫೋನ್, ನೋ ಲ್ಯಾಪ್‌ಟಾಪ್‌, ಡಿಜಿಟಲ್​​​ ಒತ್ತಡದಿಂದ ದೂರವಿರಲು ಡಿಜಿಟಲ್ ಡಿಟಾಕ್ಸ್

ವಿಶ್ವ ಆಮೆ ದಿನದ ಮಹತ್ವ ಹಾಗೂ ಆಚರಣೆ

ಆಮೆಗಳ ಕೆಲವು ಪ್ರಭೇದಗಳು ಅಳಿವಿನಂಚಿಗೆ ತಲುಪಿದೆ. ಹೀಗಾಗಿ ಈ ಆಮೆಗಳನ್ನು ರಕ್ಷಿಸಲು ಹಾಗೂ ಅವುಗಳ ಕಣ್ಮರೆಯಾಗುತ್ತಿರುವ ಆವಾಸಸ್ಥಾನಗಳನ್ನು ಸಂರಕ್ಷಿಸಲು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸುವ ಉದ್ದೇಶವನ್ನು ಹೊಂದಿದೆ. ಈ ವಿಶ್ವ ಆಮೆ ದಿನವನ್ನು ಜಗತ್ತಿನಾದ್ಯಂತ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಆಮೆಗಳಂತೆ ಉಡುಗೆ ತೊಟ್ಟು ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತವೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ