AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?

ವಿಶ್ವದಾದ್ಯಂತ ಅನೇಕ ಪ್ರಭೇದಗಳ ಆಮೆಗಳಿವೆ. ಆದರೆ ಬಹುತೇಕ ಆಮೆಗಳ ಪ್ರಭೇದಗಳು ಅಳಿವಿನಂಚಿನಲ್ಲಿದೆ. ಈ ಪ್ರಭೇಧಗಳನ್ನು ರಕ್ಷಿಸಲು ಹಾಗೂ ಈ ಬಗ್ಗೆ ಜನರಲ್ಲಿ ಈ ಕುರಿತು ಅರಿವು ಮೂಡಿಸಲು ಪ್ರತಿ ವರ್ಷ ಮೇ 23 ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?
ಸಾಯಿನಂದಾ
| Edited By: |

Updated on: May 23, 2024 | 11:17 AM

Share

ವಿಶ್ವದ ಅತ್ಯಂತ ಹಳೆಯ ಸರೀಸೃಪ ಗುಂಪುಗಳಿಗೆ ಸೇರಿದ ಆಮೆಗಳು ಶಾಂತ ಸ್ವಭಾವದ ಜೀವಿಗಳು. ಪ್ರಪಂಚದಲ್ಲಿ ಸುಮಾರು 350ಕ್ಕೂ ಹೆಚ್ಚಿನ ವಿವಿಧ ಆಮೆಯ ಸಂತತಿಗಳಿವೆ. ಈ ಭೂಮಿಯ ಮೇಲಿನ ಜೀವಿಗಳಲ್ಲಿ ಆಮೆಯ ಜೀವಿತಾವಧಿ ದೀರ್ಘವಾಗಿದೆ. 150-200 ವರ್ಷಗಳ ಕಾಲ ಬದುಕುವ ಈ ಸರೀಸೃಪಗಳ ಸಂತತಿಯನ್ನು ಕಾಣುವುದೇ ಅಪರೂಪವಾಗಿದೆ. ಸಮುದ್ರದಲ್ಲಿ ವಾಸಿಸುವ ಜೀವಿಯಾಗಿರುವ ಈ ಆಮೆಗಳ ಕೆಲ ಪ್ರಭೇದಗಳು ಕಣ್ಮರೆಯಾಗುತ್ತಿದೆ. ಇದಕ್ಕೆ ಒಂದು ಮೂಲ ಕಾರಣವೇ ಮಾನವನ ಬೇಟೆಯ ಪ್ರವೃತ್ತಿಯಾಗಿದ್ದು, ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳಬೇಟೆಯಾಡುತ್ತಾರೆ. ಈ ಸರೀಸೃಪಗಳ ಸಂತತಿಯನ್ನು ಉಳಿಸುವ ಹಾಗೂ ಅವುಗಳ ಆವಾಸಸ್ಥಾನಗಳನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ.

ವಿಶ್ವ ಆಮೆ ದಿನದ ಇತಿಹಾಸ

ಅಮೇರಿಕಾದ ಆಮೆ ರಕ್ಷಣಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ 2000 ಇಸವಿಯಲ್ಲಿ ಈ ದಿನವನ್ನು ಆಚರಣೆಗೆ ತರಲಾಯಿತು. ಅಂದಿನಿಂದ ಪ್ರತೀ ವರ್ಷ ಮೇ 23ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ನೋ ಫೋನ್, ನೋ ಲ್ಯಾಪ್‌ಟಾಪ್‌, ಡಿಜಿಟಲ್​​​ ಒತ್ತಡದಿಂದ ದೂರವಿರಲು ಡಿಜಿಟಲ್ ಡಿಟಾಕ್ಸ್

ವಿಶ್ವ ಆಮೆ ದಿನದ ಮಹತ್ವ ಹಾಗೂ ಆಚರಣೆ

ಆಮೆಗಳ ಕೆಲವು ಪ್ರಭೇದಗಳು ಅಳಿವಿನಂಚಿಗೆ ತಲುಪಿದೆ. ಹೀಗಾಗಿ ಈ ಆಮೆಗಳನ್ನು ರಕ್ಷಿಸಲು ಹಾಗೂ ಅವುಗಳ ಕಣ್ಮರೆಯಾಗುತ್ತಿರುವ ಆವಾಸಸ್ಥಾನಗಳನ್ನು ಸಂರಕ್ಷಿಸಲು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸುವ ಉದ್ದೇಶವನ್ನು ಹೊಂದಿದೆ. ಈ ವಿಶ್ವ ಆಮೆ ದಿನವನ್ನು ಜಗತ್ತಿನಾದ್ಯಂತ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಆಮೆಗಳಂತೆ ಉಡುಗೆ ತೊಟ್ಟು ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತವೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ