AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Vegan Day 2021: ಸಸ್ಯಹಾರದಲ್ಲಿ ಪ್ರೋಟೀನ್ ತುಂಬಿರುವ ಪದಾರ್ಥಗಳು ಯಾವುವು? ತಿಳಿಯಲೇಬೇಕು

ಆಹಾರ, ಅದರ ಪ್ರಯೋಜನಗಳು, ಆರೋಗ್ಯಕ್ಕೆ ಎಷ್ಟು ಅವಶ್ಯಕ ಮತ್ತು ಇದರ ಪ್ರಾಮುಖ್ಯತೆಯನ್ನು ತಿಳಿಸುವ ಉದ್ದೇಶದೊಂದಿಗೆ ವಿಶ್ವ ಸಸ್ಯಾಹಾರಿ ದಿನವನ್ನು ಪ್ರತೀ ವರ್ಷ ಆಚರಿಸಲಾಗತ್ತದೆ.

World Vegan Day 2021: ಸಸ್ಯಹಾರದಲ್ಲಿ ಪ್ರೋಟೀನ್ ತುಂಬಿರುವ ಪದಾರ್ಥಗಳು ಯಾವುವು? ತಿಳಿಯಲೇಬೇಕು
ಸಂಗ್ರಹ ಚಿತ್ರ
TV9 Web
| Edited By: |

Updated on:Nov 01, 2021 | 12:04 PM

Share

ಸಸ್ಯಾಹಾರವೆಂದರೆ ಕೇವಲ ಆಹಾರದ ಆಯ್ಕೆ ಮಾತ್ರವಲ್ಲ, ಇದು ಜೀವನದ ಒಂದು ವಿಧಾನವೂ ಹೌದು. ನವೆಂಬರ್ 1 ರಂದು ವಿಶ್ವ ಸಸ್ಯಾಹಾರಿ ದಿನವೆಂದು ಆಚರಿಸಲಾಗುತ್ತದೆ. ಈ ದಿನದಂದು ಆಹಾರ, ಅದರ ಪ್ರಯೋಜನಗಳು, ಆರೋಗ್ಯಕ್ಕೆ ಎಷ್ಟು ಅವಶ್ಯಕ ಮತ್ತು ಇದರ ಪ್ರಾಮುಖ್ಯತೆಯನ್ನು ತಿಳಿಸುವ ಉದ್ದೇಶದೊಂದಿಗೆ ವಿಶ್ವ ಸಸ್ಯಾಹಾರಿ ದಿನವನ್ನು ಪ್ರತೀ ವರ್ಷ ಆಚರಿಸಲಾಗತ್ತದೆ. ಸಸ್ಯಾಹಾರದಲ್ಲಿ ಯಾವೆಲ್ಲಾ ಪದಾರ್ಥಗಳು ಹೆಚ್ಚು ಪ್ರೋಟೀನ್​ ಯುಕ್ತವಾಗಿದೆ, ಯಾವುದು ಆರೋಗ್ಯವನ್ನು ಸುಧಾರಿಸಲು ಸಹಾಯಕ ಎಂಬೆಲ್ಲಾ ವಿಷಯಗಳನ್ನು ತಿಳಿಯೋಣ.

ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿನ ಬದಲಾವಣೆಯು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಿರುವಾಗ ಸಸ್ಯಹಾರಿಗಳು ಯಾವೆಲ್ಲಾ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು? ಮತ್ತು ಯಾವುದು ಪ್ರೋಟೀನ್​ ಸಮೃದ್ಧವಾಗಿರುವ ಪದಾರ್ಥಗಳು ಎಂಬುದು ಈ ಕೆಳಗಿನಂತಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಸಸ್ಯಾಹಾರಿ ಪ್ರೋಟೀನ್ ಮೂಲಗಳು ಕಡಲೆ ಕಡಲೆ ಅರೋಗ್ಯಕ್ಕೆ ತುಂಬಾ ಪ್ರಯೋಜವನ್ನು ನೀಡುತ್ತದೆ. ಇದು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ರಕ್ತದ ಕೊಲೆಸ್ಟ್ರಾಲ್​ ಆರೋಗ್ಯಕರ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಜೊತೆಗೆ ಮಧುಮೇಹವನ್ನು ನಿಯಂತ್ರಿಸಲು ಸಹಾಯಕವಾಗಿದೆ.

ಬೀಜಗಳು ಪ್ರೋಟೀನ್ ಒದಗಿಸುವ ಉತ್ತಮ ಮೂಲವೆಂದರೆ ಬೀಜಗಳು. ಬೀಜಗಳಲ್ಲಿ ಒಮೆಗಾ 3 ಕೊಬ್ಬಿನಾಮ್ಲ, ಜೀವಸತ್ವಗಳು ಮತ್ತು ಕೊಬ್ಬುಗಳ ಮೂಲವಾಗಿವೆ. ಬೀಜಗಳ ಸೇವನೆಯು ತೂಕ ನಿಯಂತ್ರಣಕ್ಕೆ ಸಹಾಯಕವಾಗಿದೆ. ನೆನಪಿನ ಶಕ್ತಿ ಮತ್ತು ಚಟುವಟಿಕೆಯನ್ನು ಹೆಚ್ಚಿಸಲು ಸಹಾಯಕ. ಆರೋಗ್ಯಕರ ಸ್ನಾಯುಗಳು ಮತ್ತು ಮೂಳೆಗಳನ್ನು ಆರೋಗ್ಯವಾಗಿಡಲು ನೀವು ಪ್ರೋಟೀನ್ ಭರಿತ ಬೀಜಗಳನ್ನು ಸೇವಿಸಬೇಕು.

ಕುಂಬಳಕಾಯಿ ಬೀಜಗಳು ಆರೋಗ್ಯಕರ ಜೀವನ ಶೈಲಿಯಲ್ಲಿ ಕುಂಬಳಕಾಯಿ ಬೀಜ ಸೇವನೆ ನಿಮಗೆ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕುಂಬಳಕಾಯಿ ಬೀಜ ನಿಮಗೆ ಪ್ರೋಟೀನ್ ಒದಗಿಸುತ್ತದೆ. ಉತ್ಕರ್ಷಣ ನಿರೋಧಕಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಇತರ ಪೋಷಕಾಂಶಗಳ ಉತ್ತಮ ಮೂಲವಾಗಿದೆ.

ಬೇಳೆ ಕಾಳುಗಳು ಸಸ್ಯಹಾರಿಗಳಿಗೆ ಬೇಳೆಕಾಳುಗಳು ಉತ್ತಮ ಪೋಷಕಾಂಶವನ್ನು ನೀಡುತ್ತದೆ. ಬೇಳೆಕಾಳುಗಳು ಕಬ್ಬಿಣ, ಮ್ಯಾಂಗನೀಸ್, ಪೊಟ್ಯಾಷಿಯಂ, ಪಾಸ್ಪರಸ್ ಹೀಗೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತವೆ. ನಿಮ್ಮ ಹೃದಯ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಸಹ ಬೇಳೆಕಾಳುಗಳು ಸಹಾಯಕ. ಹೆಸರು ಬೇಳೆ, ಹುರುಳಿ, ಉದ್ದು, ತೊಗರಿ ಸೇರಿದಂತೆ ಇತರ ಬೇಳೆ ಕಾಳುಗಳನ್ನು ನಿಮ್ಮ ಆಹಾರ ಪದ್ದತಿಯಲ್ಲಿ ಸೇರಿಸಿಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಉತ್ತಮ ಪ್ರೋಟೀನ್ಅನ್ನು ಒದಗಿಸುತ್ತದೆ.

ಇದನ್ನೂ ಓದಿ:

Eye Care: ಸುಡುವ ಬಿಸಿಲಿನಲ್ಲಿ ನಿಮ್ಮ ಕಣ್ಣುಗಳ ಆರೋಗ್ಯ ರಕ್ಷಣೆ ಹೇಗೆ? ಇಲ್ಲಿದೆ ತಜ್ಞರ ಸಲಹೆಗಳು

Health Tips: ಕಹಿಯಾಗಿದ್ದರೂ ಆರೋಗ್ಯಕರ ಗುಣಗಳನ್ನು ಹೊಂದಿರುವ ಈ 5 ಪದಾರ್ಥಗಳ ಬಗ್ಗೆ ತಿಳಿಯಿರಿ

Published On - 11:55 am, Mon, 1 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ