AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Vegan day 2024: ದೇಶದಲ್ಲೇ ಅತೀ ಹೆಚ್ಚು ಸಸ್ಯಾಹಾರವನ್ನು ಯಾವ ನಗರದ ಜನರು ಸೇವಿಸುತ್ತಾರೆ ಗೊತ್ತಾ? ಇಲ್ಲಿದೆ ಮಾಹಿತಿ

ಬಹುತೇಕರಿಗೆ ಈ ಸಸ್ಯಾಹಾರವೆಂದರೆ ಅಷ್ಟಕಷ್ಟೆ. ಈ ಸಸ್ಯ ಆಧಾರಿತ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಲು ಹಾಗೂ ಪರಿಸರವನ್ನು ರಕ್ಷಿಸುವ ಜೊತೆಗೆ ಶುದ್ಧ ಸಸ್ಯಾಹಾರಿ ಆಹಾರಗಳ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಲುವಾಗಿವಾಗಿ ನವೆಂಬರ್ 1 ರಂದು ವಿಶ್ವ ಸಸ್ಯಾಹಾರಿ (ವೇಗನ್) ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯೂ ಯಾವಾಗ ಪ್ರಾರಂಭವಾಯಿತು? ಏನಿದರ ಮಹತ್ವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Vegan day 2024: ದೇಶದಲ್ಲೇ ಅತೀ ಹೆಚ್ಚು ಸಸ್ಯಾಹಾರವನ್ನು ಯಾವ ನಗರದ ಜನರು ಸೇವಿಸುತ್ತಾರೆ ಗೊತ್ತಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 01, 2024 | 9:10 AM

Share

ಇತ್ತೀಚೆಗಿನ ದಿನಗಳಲ್ಲಿ ಸೆಲೆಬ್ರಿಟಿಗಳಿಂದ ಹಿಡಿದು ಜನ ಸಾಮಾನ್ಯವರೆಗೂ ಈ ಸಸ್ಯಾಹಾರ ಆಹಾರ ಪದ್ಧತಿಯನ್ನು ಹೆಚ್ಚು ಅಳವಡಿಸಿಕೊಂಡಿದ್ದಾರೆ. ಸಸ್ಯಾಹಾರಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಹೆಚ್ಚಿನವರು ಹಸಿರು ತರಕಾರಿಗಳು, ಸೊಪ್ಪುಗಳನ್ನು ಹೆಚ್ಚು ಸೇವಿಸುತ್ತಿದ್ದಾರೆ. ಈ ಸಸ್ಯಾಹಾರಿ ಆಹಾರ ಪದ್ಧತಿಯ ಮಹತ್ವದ ಬಗ್ಗೆ ತಿಳಿಸಲು, ಈ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಲು ಜನರನ್ನು ಪ್ರೇರೇಪಿಸಲು ಈ ವಿಶ್ವ ಸಸ್ಯಾಹಾರಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಸಸ್ಯಾಹಾರಿ ದಿನದ ಇತಿಹಾಸ

1994 ರಲ್ಲಿ ಇಂಗ್ಲೇಂಡಿನಲ್ಲಿರುವ ದಿ ವೇಗನ್ ಸೊಸೈಟಿಯ ಆಗಿನ ಅಧ್ಯಕ್ಷರಾದ ಲೂಯಿಸ್ ವಾಲಿಸ್ ಅವರು ಈ ಸಂಸ್ಥೆಯ ಸ್ಥಾಪನೆಯ 50 ನೇ ವಾರ್ಷಿಕೋತ್ಸವದ ನೆನಪಿಗಾಗಿ ವಿಶ್ವ ಸಸ್ಯಾಹಾರಿ ದಿನದ ಆಚರಣೆಯನ್ನು ಪ್ರಾರಂಭಿಸಿದರು. ಅಂದಿನಿಂದ ಪ್ರತಿವರ್ಷ ನವೆಂಬರ್ 1 ರಂದು ವಿಶ್ವದಾದ್ಯಂತ ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಸಸ್ಯಾಹಾರಿ ದಿನದ ಮಹತ್ವ

ಶುದ್ಧ ಸಸ್ಯಾಹಾರದಲ್ಲಿ ಹೆಚ್ಚು ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ದೇಹಕ್ಕೆ ಪ್ರಯೋಜನಕಾರಿಯಾದ ಪೊಟ್ಯಾಸಿಯಂ, ಮೆಗ್ನೇಸಿಯಂ, ಫೋಲೇಟ್, ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಇದ್ದು, ಈ ಈ ಎಲ್ಲಾ ಖನಿಜಗಳು ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಸೇವನೆ ಯೂ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಈ ವೇಗನ್ ಜೀವನಶೈಲಿಯನ್ನು ಅನುಸರಿಸಲು ಜನರನ್ನು ಪ್ರೇರೇಪಿಸುವುದು ಹಾಗೂ ಈ ಆಹಾರ ಪದ್ಧತಿಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ದಿನವು ಮಹತ್ವದ್ದಾಗಿದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಸರಳವಾಗಿ ಪರಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನದಲ್ಲಿ ಯುವತಿಯರು

ಅತೀ ಹೆಚ್ಚು ಸಸ್ಯಾಹಾರವನ್ನು ಸೇವಿಸುವ ನಗರಗಳಿವು

ಇತ್ತೀಚೆಗಷ್ಟೇ ಆನ್​ಲೈನ್​ ಮೂಲಕ ಆಹಾರ ವಿತರಣೆ ಮಾಡುವ ಸ್ವಿಗ್ಗಿ ಕಂಪನಿಯೂ ಯಾವ ನಗರದ ಜನರು ಅತಿಹೆಚ್ಚು ವೆಜ್​ ಆರ್ಡರ್​ಗಳನ್ನು ಮಾಡುತ್ತಾರೆ ಎನ್ನುವ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿದೆ. ದೇಶದಲ್ಲಿಯೇ ಅತಿ ಹೆಚ್ಚು ಸಸ್ಯಾಹಾರವನ್ನು ಸೇವಿಸುವ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೂ ಕರ್ನಾಟಕದ ಬೆಂಗಳೂರು ನಗರದ ಜನರು ಇದ್ದಾರೆ. ಇಲ್ಲಿನ ಸಸ್ಯಾಹಾರಿಗಳು ಹೆಚ್ಚಾಗಿ ಮಸಾಲಾ ದೋಸೆ, ಪನ್ನೀರ್ ಬಿರಿಯಾನಿ ಮತ್ತು ಪನ್ನೀರ್ ಬಟರ್ ಮಸಾಲಾವನ್ನೇ ಹೆಚ್ಚು ಆರ್ಡರ್ ಮಾಡುತ್ತಾರೆ. ಮಾಯಾನಗರಿ ಬೆಂಗಳೂರಿಗರೇ ದೇಶದಲ್ಲಿಯೇ ಅತಿಹೆಚ್ಚು ಸಸ್ಯಾಹಾರ ಆರ್ಡರ್​ಗಳನ್ನು ಮಾಡುತ್ತಾರೆ. ಇನ್ನೂ ಉಳಿದಂತೆ ಸಸ್ಯಾಹಾರ ಆರ್ಡರ್​ ಮಾಡುವ ನಗರವಾಗಿ ಮಹಾರಾಷ್ಟ್ರದ ಮುಂಬೈಗೆ ಎರಡನೇ ಸ್ಥಾನಕ್ಕೆ ದೊರೆತರೆ, ಮೂರನೇ ಹೈದರಾಬಾದ್ ಸ್ಥಾನಗಳಿಸಿಕೊಂಡಿದೆ ಎನ್ನುವುದು ಅಂಕಿಅಂಶದಿಂದ ತಿಳಿದುಬಂದಿದೆ.

ಕನ್ನಡ ರಾಜ್ಯೋತ್ಸವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್