AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Veterinary Day 2024: ಮೂಕ ಜೀವಿಗಳ ನೋವನ್ನು ಅರಿಯುವ ಪಶು ವೈದ್ಯರ ನಿಸ್ವಾರ್ಥ ಸೇವೆಗಿರಲ್ಲೊಂದು ಸಲಾಂ!

ಮನುಷ್ಯನ ಆರೋಗ್ಯದ ಸ್ವಲ್ಪ ವ್ಯತ್ಯಾಸವಾದರೂ ವೈದ್ಯರನ್ನು ಭೇಟಿಯಾಗಿ ಸರಿಯಾದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತೇವೆ. ಪ್ರಾಣಿಗಳು ಕೂಡ ನಮ್ಮಂತೆ ಜೀವಿಯಾಗಿದ್ದರೂ ತಮಗಾಗುವ ನೋವು ಸಂಕಟವನ್ನು ಹೇಳಿಕೊಳ್ಳಲು ಆಗದು. ಅವುಗಳ ಆರೋಗ್ಯವು ಹದಗೆಟ್ಟಾಗ ಸರಿಯಾದ ಚಿಕಿತ್ಸೆ ನೀಡುವವರೇ ಈ ಪಶು ವೈದ್ಯರು. ಪ್ರತಿವರ್ಷವು ಏಪ್ರಿಲ್ ತಿಂಗಳ ಕೊನೆಯ ಶನಿವಾರದಂದು ವಿಶ್ವ ಪಶುವೈದ್ಯಕೀಯ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಆ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Veterinary Day 2024: ಮೂಕ ಜೀವಿಗಳ ನೋವನ್ನು ಅರಿಯುವ ಪಶು ವೈದ್ಯರ ನಿಸ್ವಾರ್ಥ ಸೇವೆಗಿರಲ್ಲೊಂದು ಸಲಾಂ!
World Veterinary Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 26, 2024 | 7:54 PM

ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ಬಿಡಿಸಲಾರದ ಅನುಬಂಧ. ಮಾತು ಬಾರದ ಪ್ರಾಣಿಗಳು ಕೂಡ ಮನುಷ್ಯನ ಭಾವನೆಗೆ ಸ್ಪಂದಿಸುತ್ತದೆ. ಹೀಗಾಗಿ ಅವುಗಳಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಸರಿಯಾದ ಚಿಕಿತ್ಸೆ ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರತೀವರ್ಷ ಎಪ್ರಿಲ್ ತಿಂಗಳ ಕೊನೇ ಶನಿವಾರ ವನ್ನು ವಿಶ್ವ ಪಶುವೈದ್ಯಕೀಯ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಪಶುವೈದ್ಯಕೀಯ ದಿನದ ಇತಿಹಾಸ:

1863 ರಲ್ಲಿ ಜರ್ಮನಿಯ ಹ್ಯಾಂಬರ್ಗ್‌ನಲ್ಲಿ ಎಡಿನ್‌ಬರ್ಗ್‌ನ ಪಶುವೈದ್ಯಕೀಯ ಕಾಲೇಜು ಪ್ರೊಫೆಸರ್ ಜಾನ್ ಗಮ್ಗೀ ಅವರು ಅಂತಾರಾಷ್ಟ್ರೀಯ ಪಶುವೈದ್ಯಕೀಯ ಕಾಂಗ್ರೆಸ್ ಸಭೆಯನ್ನು ನಡೆಸಿ, ಇದರಲ್ಲಿ ಎಪಿಜೂಟಿಕ್‌ ಅಥವಾ ಪ್ರಾಣಿ ಸಾಂಕ್ರಾಮಿಕ ರೋಗಗಳು ಮತ್ತು ಯುರೋಪಿನಲ್ಲಿ ಜಾನುವಾರು ವ್ಯಾಪಾರದ ಪ್ರಮಾಣಿತ ನಿಯಮಗಳ ಕುರಿತು ಚರ್ಚಿಸಲಾಯಿತು. ಆ ಬಳಿಕ ಅಂತಾರಾಷ್ಟ್ರೀಯ ಪಶುವೈದ್ಯಕೀಯ ಕಾಂಗ್ರೆಸ್ ಅನ್ನು ವಿಶ್ವ ಪಶುವೈದ್ಯಕೀಯ ಕಾಂಗ್ರೆಸ್ ಎನ್ನುವ ಹೆಸರಿನಿಂದ ಕರೆಯಲಾಯಿತು. ಅಂದಿನಿಂದ ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಹೆಚ್ಚು ನೀಡುವ ಮೂಲಕ ವಿಶ್ವ ಪಶುವೈದ್ಯಕೀಯ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಪಶುವೈದ್ಯಕೀಯ ದಿನದ ಮಹತ್ವ:

ವಿಶ್ವ ಪಶುವೈದ್ಯಕೀಯ ಸಂಘವು ಪ್ರಾಣಿಗಳ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಅದರೊಂದಿಗೆ ಜಾನುವಾರುಗಳನ್ನು ಸಾಕಲು ಅಗತ್ಯವಾದ ನೈಸರ್ಗಿಕ ಸಂಪನ್ಮೂಲಗಳ ಲಭ್ಯತೆ ಹಾಗೂ ಉಚಿತ ಆರೋಗ್ಯ ಸೇವೆಗಳನ್ನು ನೀಡುವುದನ್ನು ಪ್ರೋತ್ಸಾಹಿಸಲಾಗುತ್ತದೆ. ವೈದ್ಯಕೀಯ ವೃತ್ತಿಯಲ್ಲಿ ನಿಸ್ವಾರ್ಥ ಸೇವೆಸಲ್ಲಿಸುತ್ತಿರುವ ವೈದ್ಯರನ್ನು ಈ ದಿನದಂದು ಸ್ಮರಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್