AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ

ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜುಲೈ 6 ರಂದು ವಿಶ್ವ ಝೂನೋಸ್ ದಿನ ಅಥವಾ ವಿಶ್ವ ಪ್ರಾಣಿಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ. ಝುನೋಟಿಕ್ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ
ವಿಶ್ವ ಝೂನೋಸಸ್ ದಿನ
ಸಾಯಿನಂದಾ
| Edited By: |

Updated on: Jul 05, 2024 | 2:52 PM

Share

ಝೂನೋಸಸ್ ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಬಹುಬೇಗನೇ ಹರಡುತ್ತವೆ. ಒಂದು ವೇಳೆ ಈ ಸೋಂಕಿತ ಪ್ರಾಣಿಯ ರಕ್ತ, ಮೂತ್ರ ಲೋಳೆ, ಮಲ ಅಥವಾ ದೇಹದ ಇತರ ದ್ರವಗಳೊಂದಿಗೆ ನೇರವಾಗಿ ಇಲ್ಲವಾದರೆ ಪರೋಕ್ಷವಾಗಿ ಸಂಪರ್ಕದಿಂದಾಗಿ ಕಾಯಿಲೆಯೂ ಹರಡುವ ಸಾಧ್ಯತೆಯಿದೆ. ರೇಬಿಸ್, ಎಬೋಲಾ, ಹಂದಿ ಜ್ವರ, ಫ್ಲೂ, ಹಕ್ಕಿ ಜ್ವರ ಇವೆಲ್ಲವೂ ಝೂನೋಟಿಕ್ ಕಾಯಿಲೆಗಳ ಸಾಲಿಗೆ ಸೇರುತ್ತದೆ. ಈ ರೋಗಗಳು ಬಾರದಂತೆ ತಡೆಗಟ್ಟಲು ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜುಲೈ 6 ರಂದು ವಿಶ್ವ ಝೂನೋಸಸ್ ದಿನ ಅಥವಾ ವಿಶ್ವ ಪ್ರಾಣಿ ಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಝೂನೋಸಸ್ ದಿನದ ಇತಿಹಾಸ

ಪ್ರತಿ ವರ್ಷ ಜುಲೈ 6 ರಂದು, ಮೊದಲನೇ ಝೂನೋಟಿಕ್ ಕಾಯಿಲೆಯ ಲಸಿಕೆಯಾದ ‘ರೇಬಿಸ್ ಲಸಿಕೆಯ’ ಅಭಿವೃದ್ಧಿಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. 1885 ರಲ್ಲಿ ಜೂಯಿಸ್ ಪಾಶ್ಚರ್ ಅವರು ಝೂನೋಟಿಕ್ ಕಾಯಿಲೆಯಾದ ರೇಬಿಸ್ ವಿರುದ್ಧ ಮೊದಲ ಲಸಿಕೆಯನ್ನು ಕಂಡುಹಿಡಿದ ದಿನವನ್ನು ನೆನಪಿಸುವ ದಿನವಾಗಿದೆ. 2007 ರಲ್ಲಿ ಈ ಲಸಿಕೆ ನೂರನೇ ವರ್ಷದ ವಾರ್ಷಿಕೋತ್ಸವದ ದಿನದಂದು ಮೊದಲ ವಿಶ್ವ ಝೂನೋಟಿಕ್ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಝೂನೋಸಸ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಆರೋಗ್ಯಕ್ಕೆ ಹಿತ ದೊಡ್ಡ ಪತ್ರೆ ಎಲೆಯ ಬಜ್ಜಿ, ರೆಸಿಪಿಯ ವಿಧಾನ ಇಲ್ಲಿದೆ

ವಿಶ್ವ ಝೂನೋಸಸ್ ದಿನದ ಮಹತ್ವ

ಝೂನೋಟಿಕ್ ಕಾಯಿಲೆಯ ಹರಡುವಿಕೆಯನ್ನು ತಡೆಗಟ್ಟಲು, ಈ ಕಾಯಿಲೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ದಿನವೂ ಮಹತ್ವಕಾರಿಯಾಗಿದೆ. ಈ ದಿನದಂದು ಸರ್ಕಾರ ಸೇರಿದಂತೆ ಸಂಘ ಸಂಸ್ಥೆಗಳು ರೋಗಗಳ ಕಾರಣಗಳು ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳನ್ನು ಆಯೋಜಿಸುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​