AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rudra Veena from Vehicle Scrap: ವಾಹನಗಳ ಬಿಡಿಭಾಗಳಿಂದ ತಯಾರಿಸಲಾಗಿದೆ ವಿಶ್ವದ ಅತಿ ದೊಡ್ಡ ರುದ್ರ ವೀಣೆ

ಮಧ್ಯಪ್ರದೇಶದ ಕಲಾವಿದರ ಗುಂಪೊಂದು ವಾಹನದ ಬಿಡಿಭಾಗಗಳನ್ನು(Vehicle Scrap) ಬಳಸಿ ವಿಶ್ವದ ಅತಿದೊಡ್ಡ ರುದ್ರ ವೀಣೆಯನ್ನು ಆರು ತಿಂಗಳಲ್ಲಿ ನಿರ್ಮಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಹೊಸ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಲಾವಿದರು ಈ ಬೃಹತ್ ವೀಣೆ ತಯಾರಿ ಮಾಡಿದ್ದಾರೆ.

Rudra Veena from Vehicle Scrap: ವಾಹನಗಳ ಬಿಡಿಭಾಗಳಿಂದ ತಯಾರಿಸಲಾಗಿದೆ ವಿಶ್ವದ ಅತಿ ದೊಡ್ಡ ರುದ್ರ ವೀಣೆ
ವಿಶ್ವದ ಅತಿ ದೊಡ್ಡ ರುದ್ರ ವೀಣೆImage Credit source: ANI
TV9 Web
| Edited By: |

Updated on:Dec 17, 2022 | 2:36 PM

Share

ಭೋಪಾಲ್: ಮಧ್ಯಪ್ರದೇಶದ ಕಲಾವಿದರ ಗುಂಪೊಂದು ವಾಹನದ ಬಿಡಿಭಾಗಗಳನ್ನು(Vehicle Scrap) ಬಳಸಿ ವಿಶ್ವದ ಅತಿದೊಡ್ಡ ರುದ್ರ ವೀಣೆಯನ್ನು ಆರು ತಿಂಗಳಲ್ಲಿ ನಿರ್ಮಿಸಿದ್ದಾರೆ. ಭಾರತೀಯ ಸಂಸ್ಕೃತಿ(Indian Culture)ಯ ಬಗ್ಗೆ ಹೊಸ ಪೀಳಿಗೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ  ಈ ಬೃಹತ್ ವೀಣೆಯನ್ನು ತಯಾರಿಸಲಾಗಿದೆ ಎಂದು ತಂಡದ ಸದಸ್ಯ ಪವನ್ ದೇಶಪಾಂಡೆ  ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಈ ವೀಣೆಯು 28 ಅಡಿ ಉದ್ದ, 10 ಅಡಿ ಅಗಲ ಮತ್ತು 12 ಅಡಿ ಎತ್ತರವಿದೆ. ಸುಮಾರು 10 ಲಕ್ಷ ರೂ ವೆಚ್ಚದಲ್ಲಿ ಆರು ತಿಂಗಳಲ್ಲಿ ತಯಾರಿಸಲಾಗಿದೆ. ಚೈನ್, ಗೇರ್, ಬಾಲ್-ಬೇರಿಂಗ್, ವೈರ್ ಮುಂತಾದ ವಾಹನಗಳ ಬಿಡಿ ಭಾಗಳಿಂದ ಸುಮಾರು 28 ಅಡಿ ಉದ್ದ, 10 ಅಡಿ ಅಗಲ ಮತ್ತು 12 ಅಡಿ ಎತ್ತರದ ವಿಶ್ವದ ಅತಿ ದೊಡ್ಡ ರುದ್ರ ವೀಣೆಯನ್ನು ತಯಾರಿಸಲಾಗಿದೆ.

ರುದ್ರ ವೀಣೆಯು ಚೈನ್, ಗೇರ್, ಬಾಲ್-ಬೇರಿಂಗ್, ವೈರ್ ಮುಂತಾದ ವಾಹನಗಳ ಅವಶೇಷಗಳಿಂದ ಮಾಡಲ್ಪಟ್ಟಿದೆ. ಇದು ವಿಶ್ವದ ಅತಿದೊಡ್ಡ ರುದ್ರ ವೀಣೆ. ಒಟ್ಟು 15 ಕಲಾವಿದರು ಶ್ರಮ ಇದರಲ್ಲಿದೆ ಎಂದು ವೀಣೆ ತಯಾರಿಸಿದ ತಂಡ ಹೇಳಿಕೊಂಡಿದೆ. ನಮ್ಮ ಯುವ ಪೀಳಿಗೆಯು ಭಾರತೀಯ ಸಂಸ್ಕೃತಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಈ ಥೀಮ್‌ ನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ

ಜನರು ಇದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬಹುದಾದ ಸ್ಥಳದಲ್ಲಿ ಇದನ್ನು ಇರಿಸಲಾಗುವುದು.  ಜೊತೆಗೆ ಇದರಲ್ಲಿ ಮ್ಯೂಸಿಕಲ್ ಸಿಸ್ಟಮ್ ಮತ್ತು ಲೈಟ್‌ಗಳನ್ನು ಅಳವಡಿಸುತ್ತೇವೆ. ಇದು ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಜೊತೆಗೆ ಯುವಕರು ಇಂತಹ ಕೆಲಸಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು  ದೇಶಪಾಂಡೆ ತಿಳಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 2:11 pm, Sat, 17 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ