AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Workouts: ವ್ಯಾಯಾಮದ ಬಳಿಕ ನೀವು ಈ ತಪ್ಪುಗಳನ್ನು ಮಾಡಲೇಬೇಡಿ, ದೇಹಕ್ಕೆ ಹಾನಿ ಮಾಡುವ ಅಭ್ಯಾಸಗಳ ಬದಲಿಸಿಕೊಳ್ಳಿ

ಉತ್ತಮ ಆರೋಗ್ಯಕ್ಕಾಗಿ ನೀವು ನಿತ್ಯ ವ್ಯಾಯಾಮ ಮಾಡುತ್ತಿರಬಹುದು, ಆದರೆ ವ್ಯಾಯಾಮದ ಬಳಿಕ ನೀವು ಮಾಡುವ ಕೆಲವು ಅಭ್ಯಾಸಗಳಿಂದ ನಿಮ್ಮ ದೇಹಕ್ಕೆ ಹಾನಿಯಾಗಬಹುದು.

Workouts: ವ್ಯಾಯಾಮದ ಬಳಿಕ ನೀವು ಈ ತಪ್ಪುಗಳನ್ನು ಮಾಡಲೇಬೇಡಿ, ದೇಹಕ್ಕೆ ಹಾನಿ ಮಾಡುವ ಅಭ್ಯಾಸಗಳ ಬದಲಿಸಿಕೊಳ್ಳಿ
ವ್ಯಾಯಾಮ
TV9 Web
| Edited By: |

Updated on: Jan 12, 2023 | 7:00 AM

Share

ಉತ್ತಮ ಆರೋಗ್ಯಕ್ಕಾಗಿ ನೀವು ನಿತ್ಯ ವ್ಯಾಯಾಮ ಮಾಡುತ್ತಿರಬಹುದು, ಆದರೆ ವ್ಯಾಯಾಮದ ಬಳಿಕ ನೀವು ಮಾಡುವ ಕೆಲವು ಅಭ್ಯಾಸಗಳಿಂದ ನಿಮ್ಮ ದೇಹಕ್ಕೆ ಹಾನಿಯಾಗಬಹುದು. ನೀವು ಬೆಳಗ್ಗೆ ಜಾಗಿಂಗ್ ಹೋದರೆ ಮನೆಗೆ ಹೋಗಿ ಏನು ಮಾಡುತ್ತೀರಿ, ಸ್ನಾನ ಮಾಡಿ ನಿಮ್ಮ ದಿನನಿತ್ಯದ ಕೆಲಸಕ್ಕೆ ಕೂರುತ್ತೀರಿ ಅಲ್ಲವೇ? ನಾವೆಲ್ಲರೂ ನಮ್ಮ ಜೀವನದಲ್ಲಿ ಕಾರ್ಯನಿರತರಾಗಿದ್ದರೂ ಮತ್ತು ಅದಕ್ಕೆ ಅನುಗುಣವಾಗಿ ನಮ್ಮ ದಿನಗಳನ್ನು ಯೋಜಿಸುತ್ತಿದ್ದರೂ, ಓಡಿದ ಬಳಿಕ ಕೆಲವು ಚಟುವಟಿಕೆಗಳನ್ನು ಮಾಡುವುದು ನಿಮ್ಮ ವ್ಯಾಯಾಮದ ಪ್ರಯತ್ನಗಳಿಗೆ ಅಡ್ಡಿಯಾಗಬಹುದು.

ಯಾವುದೇ ರೀತಿಯ ದೈಹಿಕ ಚಟುವಟಿಕೆಯನ್ನು ಮಾಡುವ ಮೊದಲು ನೀವು ಅನುಸರಿಸುವ ನಿಯಮವೆಂದರೆ ವ್ಯಾಯಾಮಕ್ಕೆ ಮೊದಲು ಮತ್ತು ನಂತರ ದೇಹವನ್ನು ಹೈಡ್ರೀಕರಿಸುವುದು. ಈ ಪ್ರಮುಖ ಹಂತವನ್ನು ತಪ್ಪಿಸಿಕೊಂಡರೆ ನಿಮ್ಮ ವ್ಯಾಯಾಮದ ಅವಧಿಯನ್ನು ಕಡಿಮೆ ಪರಿಣಾಮಕಾರಿಯಾಗಿ ಮಾಡಬಹುದು.

ವ್ಯಾಯಾಮದ ನಂತರ, ನಮ್ಮ ಶಕ್ತಿಯು ಕಡಿಮೆಯಾಗುತ್ತದೆ ಮತ್ತು ನಾವು ಬೆವರುವಿಕೆಯಿಂದ ದೇಹದಲ್ಲಿ ನೀರಿನ ಅಂಶವನ್ನು ಕಳೆದುಕೊಳ್ಳುತ್ತೇವೆ. ಪೌಷ್ಟಿಕ ಆಹಾರ ಮತ್ತು ಕುಡಿಯುವ ನೀರು ನಿಮ್ಮ ಓಟದ ಸಮಯದಲ್ಲಿ ಸ್ನಾಯುಗಳನ್ನು ಮರುನಿರ್ಮಾಣ ಮಾಡಲು ಮತ್ತು ಇಂಧನ ತುಂಬಲು ಸಹಾಯ ಮಾಡುತ್ತದೆ.

ಹೆಚ್ಚು ಆಹಾರ ಸೇವಿಸಬೇಡಿ

ಹೆಚ್ಚು ಆಹಾರವನ್ನು ಸೇವಿಸುವುದನ್ನು ತಪ್ಪಿಸಿ ಏಕೆಂದರೆ ಅದು ನಿಮ್ಮ ವ್ಯಾಯಾಮದ ಮೇಲೂ ಪರಿಣಾಮ ಬೀರಬಹುದು. ವ್ಯಾಯಾಮದ ನಂತರ ವಿಶ್ರಾಂತಿ ಪಡೆಯುವುದು ನಿಮ್ಮ ಹೃದಯ ಬಡಿತ ಹಾಗೂ ಉಸಿರಾಟವನ್ನು ಸಮತೋಲನಕ್ಕೆ ತರುವಲ್ಲಿ ಸಹಾಯ ಮಾಡುತ್ತದೆ.

ಅದೇ ಬಟ್ಟೆಯಲ್ಲಿ ಇರಬೇಡಿ ವ್ಯಾಯಾಮ ಅಥವಾ ಜಾಗಿಂಗ್ ಬಳಿಕ ಸ್ವಲ್ಪ ಆಲಸ್ಯ ಅನುಭವಿಸುವುದು ಸಹಜ, ಆದರೆ ಅದೇ ಬೆವರುವ ಬಟ್ಟೆಯಲ್ಲಿ ಉಳಿಯುವುದು ಒಳ್ಳೆಯದಲ್ಲ. ನಿಮ್ಮ ವ್ಯಾಯಾಮದ ನಂತರ ನಿಮ್ಮ ಬಟ್ಟೆಗಳನ್ನು ಆವರಿಸುವ ಬೆವರು ಬ್ಯಾಕ್ಟೀರಿಯಾಗಳು ಚರ್ಮದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅದೇ ಒದ್ದೆ ಬಟ್ಟೆಯನ್ನು ದೀರ್ಘಕಾಲ ಧರಿಸುವುದರಿಂದ ಶೀತವೂ ಉಂಟಾಗುತ್ತದೆ. ಆದ್ದರಿಂದ, ನೀವು ಮನೆಗೆ ಬಂದ ತಕ್ಷಣ ನಿಮ್ಮ ವ್ಯಾಯಾಮದ ಬಟ್ಟೆಗಳನ್ನು ಲಾಂಡ್ರಿ ಬ್ಯಾಗ್‌ನಲ್ಲಿ ಎಸೆಯಿರಿ.

ಒಂದೊಮ್ಮೆ ನೀವು ಹೆಚ್ಚು ಬೆವರಿಲ್ಲದಿದ್ದರೂ, ಒದ್ದೆಯಾದ ಬಟ್ಟೆಗಳು ಬ್ಯಾಕ್ಟೀರಿಯಾದ ಬೆಳವಣಿಗೆಗೆ ಕಾರಣವಾಗಬಹುದು, ಹಾಗಾಗಿ ನೀವು ತಕ್ಷಣ ಸ್ನಾನ ಮಾಡದಿದ್ದರೂ ಬಟ್ಟೆಗಳನ್ನು ಬದಲಾಯಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?