AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವರ್​ನಲ್ಲಿ ಸ್ನಾನ ಮಾಡುವ ಅಭ್ಯಾಸ ಇದೆಯೇ? ಬಿಸಿ ಮತ್ತು ತಣ್ಣೀರಿನಲ್ಲಿ ಯಾವುದು ಉತ್ತಮ ತಿಳಿಯಿರಿ

ಉತ್ತಮ ಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ಇದು ನೀಡುತ್ತದೆ. ತಣ್ಣೀರಿನಿಂದ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತ ಪೂರೈಕೆ ಸರಾಗವಾಗಿ ಆಗುತ್ತದೆ. ಸುಂದರವಾದ ಚರ್ಮ ಹೊಂದಲು ಸಹಕಾರಿಯಾಗುತ್ತದೆ. ಹಲವು ಅಧ್ಯಯನಗಳ ನಂತರ ವಿಜ್ಞಾನಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶವರ್​ನಲ್ಲಿ ಸ್ನಾನ ಮಾಡುವ ಅಭ್ಯಾಸ ಇದೆಯೇ? ಬಿಸಿ ಮತ್ತು ತಣ್ಣೀರಿನಲ್ಲಿ ಯಾವುದು ಉತ್ತಮ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 02, 2021 | 9:19 AM

Share

ಶವರ್​ನಲ್ಲಿ ಸ್ನಾನ ಮಾಡುವ ಅಭ್ಯಾಸ ಅನೇಕರಿಗೆ ಇರುತ್ತದೆ. ಅದರಲ್ಲೂ ಶವರ್​ನಲ್ಲಿ ಬಿಸಿ ನೀರಿಗೆ ಬದಲಾಗಿ ತಣ್ಣೀರಿನಲ್ಲಿ ಸ್ನಾನ ಮಾಡುವವರು ಇರುತ್ತಾರೆ. ಹೀಗೆ ಸ್ನಾನ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಉತ್ತಮ ಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ಇದು ನೀಡುತ್ತದೆ. ತಣ್ಣೀರಿನಿಂದ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತ ಪೂರೈಕೆ ಸರಾಗವಾಗಿ ಆಗುತ್ತದೆ. ಸುಂದರವಾದ ಚರ್ಮ ಹೊಂದಲು ಸಹಕಾರಿಯಾಗುತ್ತದೆ. ಹಲವು ಅಧ್ಯಯನಗಳ ನಂತರ ವಿಜ್ಞಾನಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರಂಭದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡಿದರೂ, ಕೊನೆಯಲ್ಲಿ 30 ಸೆಕೆಂಡುಗಳ ಕಾಲ ತಣ್ಣೀರು ನೆತ್ತಿಯ ಮೇಲೆ ಸುರಿದುಕೊಳ್ಳುವುದರಿಂದ ಆರೋಗ್ಯ ಪ್ರಯೋಜನಗಳು ಹೆಚ್ಚಾಗುತ್ತದೆ.

ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ ದೇಹವು ತಂಪಾಗಿರುವಾಗ, ಹೆಚ್ಚಿನ ಬಿಳಿ ರಕ್ತ ಕಣಗಳು ಉತ್ಪತ್ತಿಯಾಗುತ್ತವೆ ಎಂದು ಅಧ್ಯಯನಗಳು ತಿಳಿಸಿವೆ. ಇದರಿಂದ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯೂ ಹೆಚ್ಚುತ್ತದೆ. ಬಿಸಿನೀರಿನಿಂದ ಸ್ನಾನ ಮಾಡಿದ ನಂತರ ಕೊನೆಯಲ್ಲಿ 30 ಸೆಕೆಂಡ್ ತಣ್ಣೀರಿನಿಂದ ಸ್ನಾನ ಮಾಡಿದರೆ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ.

ಖಿನ್ನತೆಯನ್ನು ನಿವಾರಿಸಬಹುದು ತಣ್ಣೀರು ಚರ್ಮದಲ್ಲಿ ನರ ಗ್ರಾಹಕಗಳನ್ನು ಉತ್ತೇಜಿಸುತ್ತದೆ. ಆ ಮೂಲಕ ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸುತ್ತದೆ. ಇದು ಖಿನ್ನತೆಯಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವೈದ್ಯರಾದ ಮಿಚೆಲ್ ಗ್ರೀನ್ ಹೇಳಿದ್ದಾರೆ.

ದಿನವಿಡಿ ಉತ್ಸಾಹದಿಂದ ಇರಲು ಸಹಕಾರಿ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ದೇಹವು ಹೆಚ್ಚು ಚೈತನ್ಯದಿಂದ ಕೂಡಿರುತ್ತದೆ. ಇದು ನರಮಂಡಲವನ್ನು ಪ್ರಚೋದಿಸುತ್ತದೆ. ಪರಿಣಾಮವಾಗಿ ವ್ಯಕ್ತಿಯು ದಿನವಿಡೀ ಹರ್ಷಚಿತ್ತದಿಂದ ಮತ್ತು ಉತ್ಸಾಹದಿಂದ ಇರುತ್ತಾನೆ.

ಕೂದಲು ಆರೋಗ್ಯಕರವಾಗಿರುತ್ತದೆ ಕೂದಲ ರಕ್ಷಣೆಗೆ ಬಿಸಿ ನೀರಿಗಿಂತ ತಣ್ಣೀರು ಉತ್ತಮ ಎಂದು ಡಾ. ದೇಬ್ರಾ ಜಾಲಿಮಾನ್ ಹೇಳಿದ್ದಾರೆ. ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಕೂದಲಿನ ಹೊಳಪು, ನೈಸರ್ಗಿಕ ಕಾಂತಿ ಕಡಿಮೆಯಾಗುತ್ತದೆ. ಇದರಿಂದ ಕೂದಲು ಉದುರುವ ಅಪಾಯವಿದೆ. ಅದೇ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಕೂದಲು ಹೊಳೆಯುತ್ತದೆ ಮತ್ತು ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ.

ಒಣ ಚರ್ಮದಿಂದ ಪರಿಹಾರ ಕೆಲವರಿಗೆ ತೆಳು, ಬಿರುಕು ಬಿಟ್ಟ ಚರ್ಮವಿರುತ್ತದೆ. ಇಂತಹ ವಿಷಯಗಳಿಂದ ಪರಿಹಾರ ಪಡೆಯಲು ವಿಶೇಷವಾಗಿ ಬಿಸಿ ನೀರಿನಿಂದ ಸ್ನಾನ ಮಾಡುವುದನ್ನು ನಿಲ್ಲಿಸಬೇಕು. ಉಗುರುಬೆಚ್ಚನೆಯ ನೀರಿನಿಂದ ಸ್ನಾನ ಮಾಡುವುದರಿಂದ ತ್ವಚೆ ಒಣಗುವುದಿಲ್ಲ ಮತ್ತು ಮುಖವು ಕಾಂತಿಯುತವಾಗಿ ಕಾಣುತ್ತದೆ. ಇದಲ್ಲದೆ, ಇದು ಮುಖದ ಮೇಲೆ ಉರಿಯೂತ, ಗುಳ್ಳೆ ಕಡಿಮೆ ಮಾಡುತ್ತದೆ.

ವ್ಯಾಯಾಮದ ನಂತರ ತಣ್ಣೀರು ಸ್ನಾನ ಶ್ರಮದಾಯಕ ವ್ಯಾಯಾಮದ ನಂತರ ಸ್ನಾಯುಗಳು ದಣಿದಿರುತ್ತದೆ. ತಣ್ಣೀರಿನಿಂದ ಸ್ನಾನ ಮಾಡುವುದು ಇಂತಹ ಸ್ಥಿತಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಉಗುರುಬೆಚ್ಚನೆಯ ನೀರಿನಿಂದ ಸ್ನಾನ ಮಾಡುವುದರಿಂದ ಆಯಾಸ ಕಡಿಮೆಯಾಗುತ್ತದೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.

ತಣ್ಣೀರಿನಿಂದ ಸ್ನಾನ ಮಾಡಿದರೆ ಅಪಾಯ ಕೂಡ ಇದೆ! ಹೃದಯ ಸಂಬಂಧಿ ಕಾಯಿಲೆ, ಅಧಿಕ ರಕ್ತದೊತ್ತಡ ಇರುವವರು ತಣ್ಣೀರಿನಿಂದ ಸ್ನಾನ ಮಾಡುವ ಮುನ್ನ ಎಚ್ಚರ ವಹಿಸಬೇಕು ಎನ್ನುತ್ತಾರೆ ತಜ್ಞರು. ಬಿಸಿ ನೀರಿನಿಂದ ಸ್ನಾನ ಮಾಡಿ ಕೊನೆಗೆ 30 ಸೆಕೆಂಡ್ ತಣ್ಣೀರಿನಿಂದ ಸ್ನಾನ ಮಾಡಿದರೆ ಅಪಾಯಕಾರಿ ಎದುರಾಗಬಹುದು. ಹೃದ್ರೋಗ ಹೊಂದಿರುವ ಜನರು 10 C ಗಿಂತ ಕಡಿಮೆ ಇರುವ ನೀರಿನಲ್ಲಿ ಸ್ನಾನ ಮಾಡಬಾರದು ಮತ್ತು ಹಾಗೆ ಮಾಡಲು ಬಯಸಿದರೆ ತಜ್ಞರನ್ನು ಸಂಪರ್ಕಿಸುವುದು ಉತ್ತಮ.

ಇದನ್ನೂ ಓದಿ: Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ