AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Peanut Butter: ಕಡಲೆಕಾಯಿಯಲ್ಲೂ ಬೆಣ್ಣೆ ತಯಾರಿಸಬಹುದು; ಇದು ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ

ಕಡಲೆಕಾಯಿಯಿಂದ ತಯಾರಿಸಿದ ಬೆಣ್ಣೆ ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Peanut Butter: ಕಡಲೆಕಾಯಿಯಲ್ಲೂ ಬೆಣ್ಣೆ ತಯಾರಿಸಬಹುದು; ಇದು ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ
ಕಡಲೆಕಾಯಿ ಬೆಣ್ಣೆ
TV9 Web
| Edited By: |

Updated on: Sep 01, 2021 | 7:23 AM

Share

ಕಡಲೆಕಾಯಿ ಬೆಣ್ಣೆಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿ ಫೈಬರ್ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಕಡಲೆಕಾಯಿಯಿಂದ ತಯಾರಿಸಿದ ಬೆಣ್ಣೆ ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕಡಲೆಕಾಯಿ ಬೆಣ್ಣೆ ಇನ್ನು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದು ಯಾವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ತೂಕ ಇಳಿಕೆಗೆ ಸಹಾಯ ಮಾಡುತ್ತದೆ ಕಡಲೆಕಾಯಿ ಬೆಣ್ಣೆಯಲ್ಲಿ ಹೆಚ್ಚಿನ ಫೈಬರ್ ಇರುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ, ಕೊಬ್ಬು ಮತ್ತು ಸೋಡಿಯಂ ಇರುತ್ತದೆ. ಇದನ್ನು ಸಮತೋಲಿತ ಪ್ರಮಾಣದಲ್ಲಿ ತೆಗೆದುಕೊಳ್ಳುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಕೆಲವು ಅಧ್ಯಯನಗಳ ಪ್ರಕಾರ ಕಡಲೆಕಾಯಿ ಬೆಣ್ಣೆಯು ಕರುಳಿನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದು ರಾಡಿಕಲ್​ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸುತ್ತದೆ. ಕಡಲೆಕಾಯಿಯಲ್ಲಿರುವ ವಿಟಮಿನ್, ಕೊಲೊನ್, ಶ್ವಾಸಕೋಶ, ಲಿವರ್ ಮತ್ತು ಇತರ ಕ್ಯಾನ್ಸರ್‌ಗಳಿಂದ ರಕ್ಷಿಸುತ್ತದೆ.

ಆರೋಗ್ಯಕರ ಹೃದಯಕ್ಕೆ ಸೂಕ್ತ ಕಡಲೆಕಾಯಿ ಬೆಣ್ಣೆಯು ಪಿ -ಕೋರಿಕ್ ಆಮ್ಲದಿಂದ ಸಮೃದ್ಧವಾಗಿದೆ. ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರ ಹೊರತಾಗಿ ಇದು ಉತ್ತಮ ಕೊಬ್ಬನ್ನು ಹೊಂದಿದ್ದು, ಇದು ಎಲ್​ಡಿಎಲ್​ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯನ್ನು ತಿನ್ನುವುದರಿಂದ ಹೃದಯರಕ್ತನಾಳದ ಮತ್ತು ಹೃದಯ ಸಂಬಂಧಿ ಕಾಯಿಲೆಯ ಅಪಾಯ ಕಡಿಮೆಯಾಗುತ್ತದೆ.

ಬಲವಾದ ಮೂಳೆಗಳಿಗೆ ಸಹಕಾರಿ ಕಡಲೆಕಾಯಿ ಬೆಣ್ಣೆಯಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಇರುತ್ತದೆ. ಆರೋಗ್ಯಕರ ಮೂಳೆಗಳಿಗೆ ಇವು ಒಳ್ಳೆಯದು.

ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಕಡಲೆಕಾಯಿ ಬೆಣ್ಣೆಯನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯ ನಿಯಮಿತ ಸೇವನೆಯು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ, ವಿಶೇಷವಾಗಿ ಟೈಪ್ 2 ಮಧುಮೇಹವನ್ನು ನಿಯಂತ್ರಿಸುತ್ತದೆ.

ಪಿತ್ತಜನಕಾಂಗದಲ್ಲಿನ ಕಲ್ಲು ನಿವಾರಣೆ ಅನೇಕ ಅಧ್ಯಯನಗಳ ಪ್ರಕಾರ, ಕಡಲೆಕಾಯಿ ಬೆಣ್ಣೆಯನ್ನು ಸೇವಿಸುವುದರಿಂದ ಪಿತ್ತಗಲ್ಲುಗಳ ಅಪಾಯವನ್ನು ಕಡಿಮೆ ಮಾಡಬಹುದು. ಕಡಲೆಕಾಯಿ ಬೆಣ್ಣೆಯು ಎಲ್​ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ಸೂರ್ಯಕಾಂತಿ ಬೀಜಗಳ ಸೇವನೆಯ ಆರೋಗ್ಯ ಪ್ರಯೋಜನಗಳು; ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಉತ್ತಮ ಮಾರ್ಗ

Pumpkin Seeds: ಚೀನಿಕಾಯಿ ಬೀಜದ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ ಒಂದು ಬೀಜವನ್ನು ಹಾಳುಮಾಡುವುದಿಲ್ಲ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?