AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nerve Pain Home Remedies: ನರಗಳಲ್ಲಿ ಉಂಟಾಗುವ ನೋವನ್ನು ನಿವಾರಿಸಲು ಇಲ್ಲಿದೆ ಸರಳ ಮಾರ್ಗ

ನಿಮ್ಮ ನರಗಳಲ್ಲಿ ನೋವಿನ ಹಿಂದೆ ಹಲವು ಕಾರಣಗಳಿರಬಹುದು. ನರಗಳ ನೋವಿಗೆ ಚಿಕಿತ್ಸೆ ನೀಡಲು ಹಲವು ವಿಧಾನಗಳಿದ್ದರೂ, ನೋವು ತೀವ್ರವಾಗಿಲ್ಲದಿದ್ದರೆ ನೀವು ಮನೆಮದ್ದುಗಳನ್ನು ಪ್ರಯತ್ನಿಸಬಹುದು. ನೀವು ಯಾವ ಸುಲಭ ಮತ್ತು ಪರಿಣಾಮಕಾರಿ ಮನೆಮದ್ದುಗಳನ್ನು ಪ್ರಯತ್ನಿಸಬಹುದು ಎಂಬುವುದಕ್ಕೆ ಇಲ್ಲಿದೆ ಉತ್ತರ.

Nerve Pain Home Remedies: ನರಗಳಲ್ಲಿ ಉಂಟಾಗುವ ನೋವನ್ನು ನಿವಾರಿಸಲು ಇಲ್ಲಿದೆ ಸರಳ ಮಾರ್ಗ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on: Feb 21, 2022 | 8:32 AM

Share

ನರಗಳಲ್ಲಿ ಆಗಾಗ ನೋವು ಉಂಟಾಗುವುದು ಸಾಮಾನ್ಯ ವಿಷಯ. ಇದು ನಮ್ಮ ದಿನಚರಿಯನ್ನು ಹಾಳುಮಾಡಬಹುದು. ನರಗಳ ನೋವು ನರಗಳ ಮೇಲೆ ಪರಿಣಾಮ ಬೀರುವ ಆರೋಗ್ಯ ಸ್ಥಿತಿಯಾಗಿದೆ. ಇದು ಸಂಭವಿಸುವ ಹಿಂದೆ ಹಲವು ಕಾರಣಗಳಿರಬಹುದು. ಇವುಗಳಲ್ಲಿ ಮೆದುಳು(Brain), ಬೆನ್ನುಮೂಳೆ ಅಥವಾ ನರಗಳಿಗೆ ಗಾಯ, ಅತಿಯಾದ ಮದ್ಯಪಾನ, ಯಾವುದೇ ಔಷಧಿ, ವಿಟಮಿನ್ ಬಿ 12(Vitamin B 12) ಅಥವಾ ಬಿ 1 ಕೊರತೆ, ನರಗಳಿಗೆ ಕಡಿಮೆ ರಕ್ತ ಪೂರೈಕೆ, ಮಧುಮೇಹ, ಹೃದಯಾಘಾತ ಮತ್ತು ಸೋಂಕು ಸೇರಿವೆ. ನಿಮ್ಮ ನರಗಳಲ್ಲಿ(Nerve) ನೋವಿನ ಹಿಂದೆ ಹಲವು ಕಾರಣಗಳಿರಬಹುದು. ನರಗಳ ನೋವಿಗೆ ಚಿಕಿತ್ಸೆ ನೀಡಲು ಹಲವು ವಿಧಾನಗಳಿದ್ದರೂ, ನೋವು ತೀವ್ರವಾಗಿಲ್ಲದಿದ್ದರೆ ನೀವು ಮನೆಮದ್ದುಗಳನ್ನು ಪ್ರಯತ್ನಿಸಬಹುದು. ನೀವು ಯಾವ ಸುಲಭ ಮತ್ತು ಪರಿಣಾಮಕಾರಿ ಮನೆಮದ್ದುಗಳನ್ನು ಪ್ರಯತ್ನಿಸಬಹುದು ಎಂಬುವುದಕ್ಕೆ ಇಲ್ಲಿದೆ ಉತ್ತರ.

ಸ್ನಾನ ಮಾಡುವಾಗ ಕಲ್ಲು ಉಪ್ಪನ್ನು ಬಳಸಿ

ನರಶೂಲೆಯ ಚಿಕಿತ್ಸೆಯಲ್ಲಿ ಕಲ್ಲು ಉಪ್ಪು ಪ್ರಯೋಜನಕಾರಿಯಾಗಿದೆ. ಉಪ್ಪಿನಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿದೆ. ಸ್ನಾನದ ನೀರಿಗೆ 2 ಕಪ್ ಕಲ್ಲು ಉಪ್ಪು ಸೇರಿಸಿ. ಚೆನ್ನಾಗಿ ಬೆರೆಸಿ. ಉಪ್ಪು ಸಂಪೂರ್ಣವಾಗಿ ಕರಗಿದ ನಂತರ, ನೋವಿನ ಪ್ರದೇಶವನ್ನು ಸುಮಾರು 30 ನಿಮಿಷಗಳ ಕಾಲ ಉಪ್ಪು ನೀರಿನಿಂದ ನೆನೆಸಿದಂತೆ ಮಾಡಿ. ಇದು ನಿಮ್ಮ ನೋವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ನಿಮ್ಮ ಆಹಾರದಲ್ಲಿ ಅರಿಶಿಣವನ್ನು ಸೇರಿಸಿ

ಅರಿಶಿಣವು ಔಷಧೀಯ ಗುಣಗಳನ್ನು ಹೊಂದಿದೆ. ಆದ್ದರಿಂದ ಆಯುರ್ವೇದದಲ್ಲಿ ಇದು ಪ್ರಮುಖ ಸ್ಥಾನವನ್ನು ಹೊಂದಿದೆ. ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ಈ ಸಾಮಾನ್ಯ ಮಸಾಲೆ ನರಶೂಲೆಗೆ ಚಿಕಿತ್ಸೆ ನೀಡಲು ಪ್ರಯೋಜನಕಾರಿ ಎಂದು ನಂಬಲಾಗಿದೆ. ಅರಿಶಿಣವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಅದು ನರಗಳ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನರಗಳ ನೋವಿಗೆ ಅರಿಶಿಣವನ್ನು ಬಳಸುವುದು ಸುಲಭವಾದ ಮಾರ್ಗವಾಗಿದೆ. ಇದನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಒಂದು ಲೋಟ ಹಾಲಿಗೆ ಅರ್ಧ ಟೀ ಚಮಚ ಅರಿಶಿಣ ಪುಡಿಯನ್ನು ಮಿಶ್ರಣ ಮಾಡಿ. ಜೊತೆಗೆ ಒಂದು ಚಿಟಿಕೆ ಕರಿಮೆಣಸಿನ ಪುಡಿಯನ್ನು ಸೇರಿಸಿ. ಈ ಹಾಲನ್ನು ಬಿಸಿ ಮಾಡಿ ಕುಡಿಯಿರಿ. ವಾರದಲ್ಲಿ ದಿನಕ್ಕೆ ಒಮ್ಮೆ ಕುಡಿಯಿರಿ.

ಆ್ಯಪಲ್​ ಸೈಡರ್ ವಿನೆಗರ್ ಕುಡಿಯಿರಿ

ಆ್ಯಪಲ್ ಸೈಡರ್ ವಿನೆಗರ್ ನರಶೂಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಆ್ಯಪಲ್ ವಿನೆಗರ್ ಮೆಗ್ನೀಸಿಯಮ್, ಫಾಸ್ಫರಸ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇದು ನರಶೂಲೆಯಿಂದ ಪರಿಹಾರವನ್ನು ಪಡೆಯಲು ಅವಶ್ಯಕವಾಗಿದೆ. ಇದಲ್ಲದೆ, ಆ್ಯಪಲ್ ಸೈಡರ್ ವಿನೆಗರ್ ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದೆ. ಇದು ನರಗಳ ನೋವನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ, 2-3 ಚಮಚ ಆ್ಯಪಲ್ ಸೈಡರ್ ವಿನೆಗರ್ ಅನ್ನು ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ. ರುಚಿಗೆ 1 ಟೀ ಚಮಚ ಜೇನುತುಪ್ಪ ಸೇರಿಸಿ. ಇದನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸಿ. ಒಂದು ವಾರದವರೆಗೆ ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ನರಶೂಲೆ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಬರಿಗಾಲಿನಲ್ಲಿ ವಾಕ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ; ಇದರಿಂದಾಗುವ ಆರೋಗ್ಯಯುತ ಬದಲಾವಣೆ ಇಲ್ಲಿದೆ ನೋಡಿ

ಮನೆಯಲ್ಲಿ ನಿಮ್ಮ ಆರೋಗ್ಯ ಕಾಪಡುವುದು ಹೇಗೆ? ಇಲ್ಲಿದೆ ಉತ್ತಮ ಸಲಹೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?