AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lip Filler : ತುಟಿಯ ಅಂದ ಹೆಚ್ಚಿಸಲು ಲಿಪ್ ಫಿಲ್ಲರ್ ಚಿಕಿತ್ಸೆಗೊಳಗಾದ ಯುವತಿ, ಮುಂದೇನಾಯಿತು?

ಎಲ್ಲರಿಗೂ ಕೂಡ ತಾವು ಚೆನ್ನಾಗಿ ಕಾಣಬೇಕೆಂಬ ಆಸೆ. ಹೀಗಾಗಿ ಹೆಂಗಳೆಯರು ಸೌಂದರ್ಯಕ್ಕೆ ಹೆಚ್ಚು ಗಮನ ಕೊಡುವ ಮೂಲಕ ನಾನಾ ರೀತಿಯ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಮುಖದ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿಯಂತಹ ಕೆಲಸಕ್ಕೂ ಕೈ ಹಾಕುತ್ತಾರೆ. ಇದೀಗ ವಿದೇಶಿ ಯುವತಿಯೊಬ್ಬಳು ಲಿಪ್ ಫಿಲ್ಲರ್ ಮಾಡಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಚಿಕಿತ್ಸೆಯ ಪಡೆದ ಬಳಿಕ ಸಾಕಷ್ಟು ಅಡ್ಡಪರಿಣಾಮಗಳಾಗಿವೆ.

Lip Filler : ತುಟಿಯ ಅಂದ ಹೆಚ್ಚಿಸಲು ಲಿಪ್ ಫಿಲ್ಲರ್ ಚಿಕಿತ್ಸೆಗೊಳಗಾದ ಯುವತಿ, ಮುಂದೇನಾಯಿತು?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 27, 2024 | 4:56 PM

ಇತ್ತೀಚೆಗಿನ ದಿನಗಳಲ್ಲಿ ಕೃತಕವಾಗಿ ತಮ್ಮ ಬಾಹ್ಯ ಸೌಂದರ್ಯವನ್ನು ಹೆಚ್ಚಿಸಲು ಹೋಗಿ ಪ್ರಾಣ ಕಳೆದುಕೊಂಡ ಅದೆಷ್ಟೋ ನಿದರ್ಶನಗಳು ನಮ್ಮ ಸುತ್ತಲಿನಲ್ಲಿ ಕಾಣಬಹುದು. ಕಳೆದ ಕೆಲವು ವರ್ಷಗಳಿಂದ ಲಿಪ್ ಫಿಲ್ಲರ್ ಅಂದರೆ ಲಿಪ್ ಸರ್ಜರಿಯ ಟ್ರೆಂಡ್ ಕೂಡ ಸಾಕಷ್ಟು ಹೆಚ್ಚಾಗಿದೆ. ಲಿಪ್ ಫಿಲ್ಲರ್ ಶಸ್ತ್ರಚಿಕಿತ್ಸೆಗೆ ಒಳಗಾದ ಅನೇಕ ಮಹಿಳೆಯರನ್ನು ನೀವು ಪ್ರಪಂಚದಾದ್ಯಂತ ಕಾಣಬಹುದು. ಈ ಸರ್ಜರಿಯಿಂದ ಮುಖದ ಅಂದವನ್ನೇ ಕಳೆದುಕೊಂಡವರು ಇದ್ದಾರೆ. ಇಂತಹದೊಂದು ಘಟನೆಯೊಂದು ಬೆಳಕಿಗೆ ಬಂದಿದೆ.

ಶೌನ್ನ ಎನ್ನುವವಳು ವಿದೇಶಿ ಯುವತಿಯು ಲಿಪ್ ಫಿಲ್ಲರ್ ಚಿಕಿತ್ಸೆಗೆ ಒಳಗಾಗಿದ್ದಾಳೆ. ಎರಡು ಬಾರಿ ಚಿಕಿತ್ಸೆ ಪಡೆದಿದ್ದ ಯುವತಿಯು ಮೂರನೇ ಬಾರಿ ಚಿಕಿತ್ಸೆಯ ಬಳಿಕ ಮುಖವು ಸಂಪೂರ್ಣವಾಗಿ ವಿಕಾರವಾಗಿದೆ. ಲಿಪ್ ಫಿಲ್ಲರ್ ನ ಅಡ್ಡಪರಿಣಾಮದಿಂದಾಗಿ ಕೆಲವೇ ಕೆಲವು ನಿಮಿಷಗಳಲ್ಲಿ ಕಣ್ಣು, ಮುಖ ಹಾಗೂ ತುಟಿಯು ಊದಿಕೊಂಡು ಮುಖದ ಅಂದವೇ ಹಾಳಾಗಿದೆ.

ಕೊನೆಗೆ ಈ ವಿಕಾರವಾದ ಮುಖವನ್ನು ಪರೀಕ್ಷಿಸಿದ ವೈದ್ಯರು ಲಿಪ್ ಫಿಲ್ಲರ್ ತೆಗೆದುಕೊಂಡದ್ದರ ಪರಿಣಾಮವಾಗಿ ಅಲರ್ಜಿಯಾಗಿದೆ ಎಂದಿದ್ದಾರೆ. ಆ ಬಳಿಕ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಆಕೆಗೆ ಡ್ರಿಪ್ಸ್ ನೀಡಲಾಗಿದೆ. ಈ ಯುವತಿಯು ಉಸಿರಾಟದ ತೊಂದರೆಯಿಂದ ತಾನು ಬದುಕುವುದು ಕಷ್ಟ ಎಂದೇ ಭಾವಿಸಿದ್ದಾಳೆ. ಈ ಯುವತಿಯು ಸಹಜ ಸ್ಥಿತಿಗೆ ಮರಳಲು ಒಂದು ವಾರ ತೆಗೆದುಕೊಂಡಿದ್ದು ಅಪಾಯದಿಂದ ಪಾರಾಗಿದ್ದಾಳೆ.

ಇದನ್ನೂ ಓದಿ: ಕಾಮಕಸ್ತೂರಿ ಬೀಜದಲ್ಲಿದೆ ಆರೋಗ್ಯ ಕರಾಮತ್ತು, ಇಲ್ಲಿದೆ ಸರಳ ಮನೆ ಮದ್ದುಗಳು

ಲಿಪ್ ಫಿಲ್ಲರ್‌ ಗಳಿಂದಾಗುವ ತೊಂದರೆಗಳೇನು?

ಲಿಪ್ ಫಿಲ್ಲರ್‌ಗಳು ಸ್ವತಃ ಅಪಾಯಕಾರಿ ವಿಧಾನವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರ ವಹಿಸುವುದು ಅಗತ್ಯ. ಈ ಚಿಕಿತ್ಸೆಯಿಂದ ಅಡ್ಡಪರಿಣಾಮಗಳಾಗುವ ಸಾಧ್ಯತೆಯು ಅಧಿಕವಾಗಿದೆ. ಕೆಲವೊಮ್ಮೆ ನರಗಳ ಮೇಲೆ ನೇರವಾಗಿ ಪರಿಣಾಮ ಬೀರಬಹುದು. ಇಲ್ಲವಾದರೆ ತುಟಿಗಳು ಮತ್ತು ಮುಖದ ವಿಪರೀತ ಊತ, ತಲೆನೋವು, ವಾಕರಿಕೆ ಮತ್ತು ವಾಂತಿ, ಉಸಿರಾಟದ ತೊಂದರೆ, ದೀರ್ಘಕಾಲದ ತುರಿಕೆ ಹಾಗೂ ಕೆಂಪಾದ ಚರ್ಮ ಹೀಗೆ ನಾನಾ ರೀತಿಯ ತೊಂದರೆಗಳನ್ನು ಎದುರಿಸಬೇಕಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

​​​​

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ