AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Depression: ಖಿನ್ನತೆಗೆ ಒಳಗಾಗುವ ಯುವಕರಿಗೆ ಹೃದ್ರೋಗದ ಅಪಾಯ ಹೆಚ್ಚು, ಅಧ್ಯಯನ ಇನ್ನೇನು ಹೇಳುತ್ತೆ, ತಿಳಿಯಿರಿ

ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿರುವ ಯುವಕರು ಹೃದ್ರೋಗದ ಅಪಾಯವನ್ನು ಹೊಂದಿರಬಹುದು. ಹೊಸ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

Depression: ಖಿನ್ನತೆಗೆ ಒಳಗಾಗುವ ಯುವಕರಿಗೆ ಹೃದ್ರೋಗದ ಅಪಾಯ ಹೆಚ್ಚು, ಅಧ್ಯಯನ ಇನ್ನೇನು ಹೇಳುತ್ತೆ, ತಿಳಿಯಿರಿ
ಖಿನ್ನತೆ
ನಯನಾ ರಾಜೀವ್
|

Updated on: Feb 02, 2023 | 8:00 AM

Share

ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿರುವ ಯುವಕರು ಹೃದ್ರೋಗದ ಅಪಾಯವನ್ನು ಹೊಂದಿರಬಹುದು. ಹೊಸ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಖಿನ್ನತೆ ಮತ್ತು ಹತಾಶೆಯಿಂದ ಬಳಲುತ್ತಿರುವ ಯುವಕರಲ್ಲಿ ಹೃದಯದ ಆರೋಗ್ಯವು ಉತ್ತಮವಾಗಿರುವುದಿಲ್ಲ ಎಂದು ಅಧ್ಯಯನವು ಹೇಳಿದೆ. ಅಧ್ಯಯನದ ಪ್ರಕಾರ, ಖಿನ್ನತೆಯಿಂದ ಬಳಲುತ್ತಿರುವ ಅಥವಾ ಮಾನಸಿಕ ಅಸ್ವಸ್ಥತೆ ಹೊಂದಿರುವ ಯುವಕರು ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳಿಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.

ಜಾನ್ಸ್ ಹಾಪ್ಕಿನ್ಸ್ ಮೆಡಿಸಿನ್‌ನ ಸಂಶೋಧಕರು ತಮ್ಮ ಅಧ್ಯಯನದಲ್ಲಿ 18 ರಿಂದ 49 ವರ್ಷದೊಳಗಿನ 5 ಲಕ್ಷಕ್ಕೂ ಹೆಚ್ಚು ಜನರ ಡೇಟಾವನ್ನು ವಿಶ್ಲೇಷಿಸಿದ್ದಾರೆ. ಈ ಅಧ್ಯಯನವನ್ನು ಜರ್ನಲ್ ಆಫ್ ದಿ ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ನಲ್ಲಿ ಪ್ರಕಟಿಸಲಾಗಿದೆ.

ಯುವ ಮತ್ತು ಮಧ್ಯವಯಸ್ಕರಲ್ಲಿ ಖಿನ್ನತೆ ಮತ್ತು ಹೃದ್ರೋಗದ ನಡುವೆ ಸಂಬಂಧವಿದೆ ಎಂದು ಅಧ್ಯಯನದ ಫಲಿತಾಂಶಗಳು ತೋರಿಸುತ್ತವೆ. ಈ ಎರಡು ಪರಿಸ್ಥಿತಿಗಳ ನಡುವಿನ ಸಂಬಂಧವು ಪ್ರೌಢಾವಸ್ಥೆಯಲ್ಲಿಯೇ ಪ್ರಾರಂಭವಾಗಬಹುದು ಎಂದು ಅಧ್ಯಯನವು ಸೂಚಿಸಿದೆ.

ಮತ್ತಷ್ಟು ಓದಿ: Mental Health: ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಉತ್ತಮ ಸಲಹೆ

ಖಿನ್ನತೆ ಮತ್ತು ಹೃದ್ರೋಗದ ನಡುವಿನ ಸಂಬಂಧವೇನು?

ಪಿಟಿಐ ವರದಿಯ ಪ್ರಕಾರ, ನೀವು ಒತ್ತಡದಲ್ಲಿರುವಾಗ ಅಥವಾ ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿರುವಾಗ, ನಿಮ್ಮೊಳಗೆ ಭಾವನೆಗಳು ಬದಲಾಗುತ್ತಿರುತ್ತದೆ, ಇದರಿಂದಾಗಿ ನಿಮ್ಮ ಹೃದಯ ಬಡಿತ ಮತ್ತು ರಕ್ತದೊತ್ತಡ ಹೆಚ್ಚಾಗುತ್ತದೆ. ಈ ಅಧ್ಯಯನದ ಲೇಖಕಿ ಗರಿಮಾ ಶರ್ಮಾ, ಹತಾಶ ಭಾವನೆಯಿಂದಾಗಿ ನೀವು ಧೂಮಪಾನ, ಮದ್ಯಪಾನ, ಕಡಿಮೆ ನಿದ್ರೆ ಮತ್ತು ದೈಹಿಕವಾಗಿ ನಿಷ್ಕ್ರಿಯತೆಯಂತಹ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗಬಹುದು, ಈ ಎಲ್ಲಾ ಅಭ್ಯಾಸಗಳು ನಿಮ್ಮ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.

ಯಾವೆಲ್ಲಾ ಅಂಶಗಳು ಪರಿಣಾಮ ಬೀರುತ್ತವೆ? ಅಧ್ಯಯನದ ಪ್ರಕಾರ, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಅಧಿಕ ತೂಕ ಅಥವಾ ಬೊಜ್ಜು, ಧೂಮಪಾನ, ಮಧುಮೇಹ, ಕಳಪೆ ಜೀವನಶೈಲಿ ಮತ್ತು ಆಹಾರವು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಈ ಎಲ್ಲಾ ಅಂಶಗಳು ನಿಮ್ಮ ಹೃದಯದ ಆರೋಗ್ಯದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​