AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಕೃತಿಗಳಿಗೆ ‘ಪುಸ್ತಕ ಸೊಗಸು-ಮುದ್ರಣ ಸೊಗಸು’ ಬಹುಮಾನ

ಕನ್ನಡ ಪುಸ್ತಕ ಪ್ರಾಧಿಕಾರವು 2020ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳನ್ನು ಘೋಷಿಸಿದೆ. ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ವಿವಿಧ ಕೃತಿಗಳಿಗೆ ‘ಪುಸ್ತಕ ಸೊಗಸು-ಮುದ್ರಣ ಸೊಗಸು’ ಬಹುಮಾನ
TV9 Web
| Edited By: |

Updated on:Jul 13, 2021 | 6:33 PM

Share

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2020ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳನ್ನು ಘೋಷಿಸಿದೆ. ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಬಹುಮಾನಿತರ ವಿವರ ಈ ಕೆಳಗಿನಂತಿದೆ.

ಭವತಾರಿಣಿ ಪ್ರಕಾಶನ ಬೆಂಗಳೂರು, ಡಾ.ಎಸ್.ಗುರುಮೂರ್ತಿ ಅವರ ಸಮಗ್ರ ಅವಲೋಕನ ‘ಕದಂಬರು’ ಕೃತಿಗೆ ಪುಸ್ತಕ ಸೊಗಸು ಮೊದಲನೇ ಬಹುಮಾನ ರೂ. 25,000. ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನ (ರಿ) ರಾಯಚೂರು, ಸಂ:ಡಾ.ಅಮರೇಶ ಯತಗಲ್ ಅವರ ‘ಸಾರ್ಥಕ ಬದುಕು’ ಕೃತಿಗೆ ಪುಸ್ತಕ ಸೊಗಸು ಎರಡನೇ ಬಹುಮಾನ ರೂ. 20,000. ಪ್ರಕಾಶನ ಸಂಸ್ಥೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ) ಉಡುಪಿ, ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ‘ಕಲಾಸಂಚಯ’ ಕೃತಿಗೆ ಪುಸ್ತಕ ಸೊಗಸು ಮೂರನೇ ಬಹುಮಾನ ರೂ. 10,000. ಗೋಮಿನಿ ಪ್ರಕಾಶನ ತುಮಕೂರು ಜಿಲ್ಲೆ, ತಮ್ಮಣ್ಣ ಬೀಗಾರ ಅವರ ‘ಫ್ರಾಗಿ ಮತ್ತು ಗೆಳೆಯರು’ ಕೃತಿಗೆ ಮಕ್ಕಳ ಪುಸ್ತಕ ಸೊಗಸು ಬಹುಮಾನ ರೂ. 8,000 ದೊರೆತಿದೆ.

ಲಕ್ಷ್ಮೀಕಾಂತ ಮಿರಜಕರ ಅವರ ‘ಬಯಲೊಳಗೆ ಬಯಲಾಗಿ’ ಕೃತಿಗೆ ಮಾಡಿದ ಮುಖಪುಟ ಚಿತ್ರವಿನ್ಯಾಸಕ್ಕಾಗಿ ಕಲಾವಿದ ಟಿ.ಎಫ್ ಹಾದಿಮನಿ ಅವರಿಗೆ ರೂ. 10,000 ಬಹುಮಾನ ದೊರೆತಿದೆ. ಸಂ: ರೂಪ ಹಾಸನ ಅವರ ಹೆಣ್ಣೊಳನೋಟ ಕೃತಿಯ ಮುಖಪುಟ ಕಲಾವಿನ್ಯಾಸಕ್ಕೆ ರೂ.8,000. ರೀಗಲ್ ಪ್ರಿಂಟ್ ಸರ್ವೀಸ್ ಬೆಂಗಳೂರು, ಕಿರಣ್‍ ಭಟ್ ಅವರ ರಂಗಕೈರಳಿ ಕೃತಿಗೆ ಪುಸ್ತಕ ಮುದ್ರಣ ಸೊಗಸು ಬಹುಮಾನ ರೂ. 5,000 ಲಭಿಸಿದೆ. ಈ ಪ್ರಕಾರ ಬಹುಮಾನಿತರನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : Padma Awards: ಅನಂತ್ ​ನಾಗ್​ಗೆ ಪದ್ಮ ಪ್ರಶಸ್ತಿ ನೀಡಿ; ಸೆಲೆಬ್ರಿಟಿಗಳಿಂದಲೂ ಶುರುವಾಯ್ತು ಟ್ವಿಟ್ಟರ್​ ಅಭಿಯಾನ

Published On - 6:32 pm, Tue, 13 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ