AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರೂಪದ ಕನ್ನಡ ಪುಸ್ತಕ ನೀತಿ ರಚನೆಗೆ ಸಮಿತಿ ನೇಮಕ: ಡಾ ಎಂಎನ್ ನಂದೀಶ್ ಹಂಚೆ

ಕನ್ನಡ ಪುಸ್ತಕ ಪ್ರಾಧಿಕಾರ: ಸಭೆಯಲ್ಲಿ ಪುಸ್ತಕ ನೀತಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮತ್ತೊಂದು ಪೂರ್ಣ ಪ್ರಮಾಣದ ಸಮಿತಿ ರಚನೆ ಮಾಡಿ ಕನ್ನಡ ಪುಸ್ತಕ ನೀತಿ ರಚನೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.

ಹೊಸ ರೂಪದ ಕನ್ನಡ ಪುಸ್ತಕ ನೀತಿ ರಚನೆಗೆ ಸಮಿತಿ ನೇಮಕ: ಡಾ ಎಂಎನ್ ನಂದೀಶ್ ಹಂಚೆ
ಕನ್ನಡ ಪುಸ್ತಕ ನೀತಿ ಕರಡು ರಚನೆಗಾಗಿ ರೂಪಿಸಲಾದ ಸಮಿತಿ ಸದಸ್ಯರ ಪ್ರಾಥಮಿಕ ಹಂತದ ಸಭೆ
TV9 Web
| Updated By: ganapathi bhat|

Updated on: Aug 10, 2021 | 10:15 PM

Share

ಬೆಂಗಳೂರು: ಕನ್ನಡ ಪುಸ್ತಕೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಆಧುನಿಕ ಮಾಧ್ಯಮಗಳ ಸವಾಲುಗಳನ್ನು ಒಳಗೊಂಡ ಹೊಸ ಪುಸ್ತಕ ನೀತಿ ರಚನೆಗೆ ನೂತನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು (ಆಗಸ್ಟ್ 10) ಹೇಳಿದ್ದಾರೆ.

ಅವರು ಕನ್ನಡ ಪುಸ್ತಕ ನೀತಿ ಕರಡು ರಚನೆಗಾಗಿ ರೂಪಿಸಲಾದ ಸಮಿತಿ ಸದಸ್ಯರ ಪ್ರಾಥಮಿಕ ಹಂತದ ಸಭೆಯನ್ನು ಉದ್ದೇಶಿಸಿ ಕನ್ನಡ ಪುಸ್ತಕೋದ್ಯಮ ಇಂದು ಸಂಕ್ರಮಣದ ಕಾಲಘಟ್ಟದಲ್ಲಿದೆ. ಇ-ಬುಕ್, ಆಡಿಯೋ ಬುಕ್, ಅಂರ್ತಜಾಲ ಪುಸ್ತಕ ಪ್ರಕಟಣೆ ಮುಂತಾದವು ಕನ್ನಡ ಪುಸ್ತಕೋದ್ಯಮವನ್ನು ಕಾಗದರಹಿತವನ್ನಾಗಿ ಮಾಡಿದೆ. ಅದು ಪುಸ್ತಕೋದ್ಯಮದ ಅನಿವಾರ್ಯ ರೂಪವಾಗಿ ಪರಿವರ್ತನೆಯಾಗುತ್ತಿರುವ ಸಂದರ್ಭದಲ್ಲಿ ಕನ್ನಡ ಪುಸ್ತಕೋದ್ಯಮ ಅದನ್ನೂ ಒಳಗೊಂಡಂತೆ ಬೆಳೆಯಬೇಕಾಗಿರುವ ಅನಿವಾರ್ಯತೆ ಇದೆ. ಹಾಗಾಗಿ ಈ ಹಿಂದೆ ಡಾ. ಸಿದ್ಧಲಿಂಗಯ್ಯ ಅವರ ಅಧ್ಯಕ್ಷತೆಯಲ್ಲಿ ರೂಪುಗೊಂಡಿದ್ದ, ಕನ್ನಡ ಪುಸ್ತಕ ನೀತಿಯನ್ನು ಹೊಸ ದೃಷ್ಟಿಕೋನದಿಂದ ನೋಡುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಆಧುನಿಕ ಮಾಧ್ಯಮಗಳ ಸವಾಲುಗಳ ಸಹಿತ ಕನ್ನಡ ಪುಸ್ತಕೋದ್ಯಮದ ಸಮಗ್ರ ಬೆಳವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ರೂಪದ ಕನ್ನಡ ಪುಸ್ತಕ ನೀತಿ ರಚನೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಮುಂದಾಗಿದೆ. ಇದರ ಮುಖ್ಯ ಸಲಹೆಗಾರರಾಗಿ ಖ್ಯಾತ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಕೆಲಸ ಮಾಡಲಿದ್ದಾರೆ. ಇವರ ಜೊತೆ ಖ್ಯಾತ ಸಾಹಿತಿ ವಸುಧೇಂದ್ರ ಸಹ ಸಮಿತಿಯಲ್ಲಿರುತ್ತಾರೆ.

ಪ್ರಾಥಮಿಕ ಹಂತದಲ್ಲಿ ಕನ್ನಡ ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ ಕಂಬತ್ತಳ್ಳಿ, ಕಾರ್ಯದರ್ಶಿಗಳಾದ ನ. ರವಿಕುಮಾರ, ಕರ್ನಾಟಕ ಬರಹಗಾರರು ಮತ್ತು ಲೇಖಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಅಜಕ್ಕಳ ಗಿರೀಶ್ ಭಟ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶಕುಮಾರ ಎಸ್. ಹೊಸಮನಿ, ಮೈಸೂರು ವಿಶ್ವವಿದ್ಯಾಲಯದ ನಿರ್ದೇಶಕರಾದ ವಿಜಯಕುಮಾರಿ ಕರೀಕಲ್ಲು, ಹಂಪಿ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಹೆಚ್.ಡಿ. ಪ್ರಶಾಂತ, ವೈ.ಜಿ. ಮುರಳೀಧರನ್, ಕಾನೂನು ಇಲಾಖೆಯಿಂದ ಕಾರ್ಯರ್ಶಿಗಳ ಪರವಾಗಿ ಎಸ್. ಅರುಣ್, ಇ-ಆಡಳಿತ (ಕೇಂದ್ರ) ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪರವಾಗಿ ಪುಷ್ಪ ಎಂ, ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಕೆ. ರಾಜಕುಮಾರ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಮತ್ತು ಸಹಾಯಕ ನಿರ್ದೇಶಕರಾದ ಸೌಭಾಗ್ಯ ಅವರು ಭಾಗಹಿಸಿದ್ದರು.

ಸಭೆಯಲ್ಲಿ ಪುಸ್ತಕ ನೀತಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮತ್ತೊಂದು ಪೂರ್ಣ ಪ್ರಮಾಣದ ಸಮಿತಿ ರಚನೆ ಮಾಡಿ ಕನ್ನಡ ಪುಸ್ತಕ ನೀತಿ ರಚನೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.

ಇದನ್ನೂ ಓದಿ: Yakshagana: ಪುರಾಣ ಎಂದರೆ ಬಹಳ ಹಿಂದಿನದು, ಪುರಾತನ ಎನ್ನುವ ಅರ್ಥ ಮಾತ್ರವೇ?

Vinayaka Krishna Gokak: ಗೋಕಾಕರ ಕಾದಂಬರಿ ಲೋಕ, ಪಾತ್ರಗಳ ಅಗಾಧ ಅನುಭವದ ಸಂತೆ

(Dr Nandish Hanche on New Committe for Kannada Book Policy)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!