AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. R. Bendre : ‘ಸಂಸಾರದ ಅರ್ಥವಿರುವುದು ಈ ನಾಲ್ಕೇ ತಂತಿಗಳಲ್ಲಿ’ ನಾಕೇತಂತಿ ಬೇಂದ್ರೆಯಜ್ಜನ ನಾಕೇತಂತಿ

NaakuTanti : ‘ನಾಕು ತಂತಿ’ ಅತ್ಯಂತ ಸರಳ ಕನ್ನಡದಲ್ಲಿ ರಚಿಸಲಾದ ಕವನ. ಆದರೆ ಅಷ್ಟೇ ನಿಗೂಢವಾದ ಕವನ. ಈ ಕವನದಲ್ಲಿ ಪದಗಳಿಗೆ ಅನೇಕ ಅರ್ಥಗಳು ಇರುವಂತೆಯೇ, ಪದಗಳ ನಾದಕ್ಕೂ ಸಹ ಅರ್ಥವಿದೆ. ಲೌಕಿಕ ಹಾಗು ಅಲೌಕಿಕ ಆಯಾಮಗಳಲ್ಲಿ ಈ ಕವನದ ಅರ್ಥವನ್ನು ಅನುಭವಿಸಬೇಕಾಗುತ್ತದೆ.’ ಸುನಾಥ

D. R. Bendre : ‘ಸಂಸಾರದ ಅರ್ಥವಿರುವುದು ಈ ನಾಲ್ಕೇ ತಂತಿಗಳಲ್ಲಿ’ ನಾಕೇತಂತಿ ಬೇಂದ್ರೆಯಜ್ಜನ ನಾಕೇತಂತಿ
ಬೇಂದ್ರೆ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Feb 01, 2022 | 7:12 PM

Share

ದ. ರಾ. ಬೇಂದ್ರೆ | D. R. Bendre | ನಾಕು ತಂತಿ | Naaku Tanti : ‘ಅರಳು ಮರಳು’ ಕಾವ್ಯಸಂಗ್ರಹ ಪ್ರಕಟವಾದಾಗ ಬೇಂದ್ರೆಯವರಿಗೆ 60 ವರ್ಷ. ಅದಕ್ಕೂ ಮೊದಲಿನ ಅವರ ಕಾವ್ಯದಲ್ಲಿ ಅತ್ಯುಚ್ಚ ಮಟ್ಟದ ಕಲಾಕೌಶಲವನ್ನು ಹಾಗೂ ಕುಸುರಿ ಕೆಲಸವನ್ನು ಕಾಣಬಹುದು. ‘ಅರಳು ಮರಳು’ ಕಾವ್ಯದಲ್ಲಿ ಕುಸುರಿ ಕೆಲಸದ ಸ್ಥಾನವನ್ನು ‘ಬಯಲ ಭವ್ಯತೆ’ ಆಕ್ರಮಿಸಿಕೊಂಡಿದೆ. ಬೇಲೂರು ಶಿಲಾಬಾಲಿಕೆಯ ಮೋಹಕ ಚೆಲುವಿನ ಬದಲಾಗಿ ಶ್ರವಣಬೆಳಗೊಳದ ಗೊಮ್ಮಟೇಶ್ವರನ ಭವ್ಯತೆ ಅವರ ಕಾವ್ಯದಲ್ಲಿ ವ್ಯಕ್ತವಾಗುತ್ತದೆ. ‘ಅರಳು ಮರಳು’ ನಂತರ ರಚಿಸಿದ ಕಾವ್ಯವಂತೂ ಪೂರ್ಣವಾಗಿ ಬೇರೊಂದು ರೂಪವನ್ನೇ ಪಡೆದಿದೆ. ಲೌಕಿಕ ಮಾರ್ಗಕ್ಕೆ ವಿಮುಖನಾಗಿ, ಅಲೌಕಿಕ ಮಾರ್ಗದಲ್ಲಿ ಕ್ರಮಿಸುತ್ತಿರುವ ಸಂತಕವಿಯ ಕಾವ್ಯವನ್ನು ಇಲ್ಲಿ ಕಾಣಬಹುದು. ಹೀಗಾಗಿ ಈ ಕಾವ್ಯವು ‘ನಿಗೂಢ ಕಾವ್ಯ’ವಾಗಿದೆ. ಮೈಯಲ್ಲಿ ದೇವರು ಬಂದ ಪೂಜಾರಿಗಳು ಒಡನುಡಿಯುವ ಕಾರ್ಣೀಕವನ್ನು ಈ ನಿಗೂಢ ಕಾವ್ಯಕ್ಕೆ ಹೋಲಿಸಬಹುದು. ಬೇಂದ್ರೆಯವರ ‘ನಾಕು ತಂತಿ’ ಕವನವು ಇಂತಹ ಒಡಪಿನ ರೂಪದ ‘ಕಾರ್ಣಿಕ’ದಲ್ಲಿದೆ. ಬೇಂದ್ರೆಮಾಸ್ತರ ಬರೆದ ಅಡಿಟಿಪ್ಪಣಿಯ ಮೂಲಕ ‘ಅಂಬಿಕಾತನಯದತ್ತ’ನ ಒಡನುಡಿಯ ಒಗಟನ್ನು ಬಿಡಿಸಲು ಪ್ರಯತ್ನಪಡಬೇಕು. ಆದರೂ ನಮಗೆ ಕಾಣುವದು ನಮ್ಮ ಕಣ್ಣಿನ ಪರಿಮಿತಿಗೊಳಪಟ್ಟು. ಇದರ ನೆಲೆಯು! 

ಸುನಾಥ (ಸುಧೀಂದ್ರ ದೇಶಪಾಂಡೆ), ಲೇಖಕರು, ಧಾರವಾಡ

*

ಕೊನೆಯದಾದ ನಾಲ್ಕನೆಯ ಭಾಗದಲ್ಲಿ ಎರಡು ನುಡಿಗಳಿವೆ:

‘ನಾನು’ ‘ನೀನು’

‘ಆನು’ ‘ತಾನು’

ನಾಕೆ ನಾಕು ತಂತಿ,

ಕವಿಯು ‘ಸಂಸಾರದ ಅರ್ಥವಿರುವದು ಈ ನಾಲ್ಕೇ ತಂತಿಗಳಲ್ಲಿ (ನಾನು, ನೀನು, ಆನು, ತಾನು)’ ಎಂದು ಪುನರುಚ್ಚರಿಸುತ್ತಾನೆ. ನಾನು ಹಾಗು ನೀನು ಇವು ಆತ್ಮ ಮತ್ತು ಪ್ರಕೃತಿಗೆ ಅಥವಾ ತಂದೆ ಹಾಗು ತಾಯಿಗೆ ಸಂಕೇತವಾದರೆ, ಆನು ಇದು ಅವರ ಸೃಷ್ಟಿಗೆ ಸಂಕೇತವಾಗುತ್ತದೆ. ತಾನು ಎನ್ನುವುದು ಇವೆಲ್ಲವನ್ನೂ ಒಳಗೊಂಡ ಚೈತನ್ಯರೂಪವಾಗಿದೆ. ಈ ಚೌದಂಡಿಗೆಯ ಶ್ರಾವ್ಯ ಮತ್ತು ಶ್ರವಣಾತೀತ ಸ್ವರ ಉಸಿರುವದು ಒಂದೇ ರಾಗ: ‘ಓಂ ದಂತಿ’ ಎಂದು.

ಸೊಲ್ಲಿಸಿದರು

ನಿಲ್ಲಿಸಿದರು

ಓಂ ಓಂ ದಂತಿ!

ಗಣನಾಯಕ

ಮೈ ಮಾಯಕ

ಸೈ ಸಾಯಕ ಮಾಡಿ

ಗುರಿಯ ತುಂಬಿ

ಕುರಿಯ ಕಣ್ಣು

ಧಾತು ಮಾತು

ಕೂಡಿ.

ಇಲ್ಲಿಯವರೆಗೆ ನಾನು, ನೀನು, ಆನು ತಾನು ಮಾತ್ರ ಇದ್ದುದು ಈಗ ‘ದಂತಿ’ಯ ಪ್ರವೇಶವಾಗುತ್ತದೆ. ದಂತಿ ಎಂದರೆ ಗಣಪತಿ. ಆ ಗಣನಾಯಕನೇ ಈ ‘ಮೈ ಮಾಯಕ’ವನ್ನು ,ಕಾವ್ಯವನ್ನು (-ಯಾಕೆಂದರೆ ಕಾವ್ಯವೆಂದರೆ ಕವಿಯ ಮಾಯಾಶರೀರ -) ಸೈ ಸಾಯಕ ಮಾಡಿ (-ಸೈ=ಸರಿಯಾದ, ಸಾಯಕ=ಬಾಣ-) ಪ್ರಯೋಗಿಸಬೇಕು. ಈ ಪ್ರಯೋಗ ಹೇಗಿರಬೇಕೆಂದರೆ, ಅದು ಗುರಿಯ ತುಂಬಿ(=ಗುರಿಯ ಕಡೆಗೆ ಲಕ್ಷ್ಯ ತೊಟ್ಟು), ಕುರಿಯ ಕಣ್ಣು(ಕುರಿತು=ನಿರ್ದಿಷ್ಟವಾಗಿ ದೃಷ್ಟಿಸುತ್ತ) ಅಥವಾ bull’s eyeದಂತೆ ಇರಬೇಕು. ಇದರ ಫಲವೆಂದರೆ ಧಾತು (ಅರ್ಥ) ಮತ್ತು ಮಾತು( ವಾಕ್) ಕೂಡಿರಬೇಕು.

ಬೇಂದ್ರೆಯವರು ತಾವು ಬಳಸುವ ಪದಗಳಿಗೆ ಇತರ ಭಾಷೆಯಲ್ಲಿರುವ ಅರ್ಥಗಳನ್ನೂ ಜೋಡಿಸಿರುತ್ತಾರೆ. ಉದಾಹರಣೆಗೆ ‘ಮೈ ಮಾಯಕ’ದಲ್ಲಿ ಮೈ ಪದವನ್ನು ಮೂರು ಅರ್ಥಗಳಲ್ಲಿ ಬೇಂದ್ರೆ ಬಳಸಿದ್ದಾರೆ.

(೧) ಮೈ= ಶರೀರ (೨) ಮೈ= ಮಹಿಮೆ (೩) ಮೈ= my

ಇದರಂತೆ ‘ಸಾಯಕ’ಕ್ಕೆ ಬಾಣ ಹಾಗು ಸಹಾಯಕ ಎನ್ನುವ ಎರಡೂ ಅರ್ಥಗಳನ್ನು ಉಪಯೋಗಿಸಬಹುದು. ‘ಕುರಿ’ ಎನ್ನುವ ಪದ ಕುರಿತು ಎಂದರೆ ನಿರ್ದಿಷ್ಟ ಎನ್ನುವ ಅರ್ಥ ಕೊಡುವಂತೆಯೇ ‘ಗುರಿ’ ಎನ್ನುವ ಪದಕ್ಕೆ ಧ್ವನಿಸಂವಾದಿ ಪದವೂ ಆಗಿದೆ. ಇದಕ್ಕೆ ಉದಾಹರಣೆಯಾಗಿ ಅವರ ಬೇರೊಂದು ಕವನದ ಎರಡು ಸಾಲುಗಳನ್ನು ಇಲ್ಲಿ ಕೊಡುತ್ತೇನೆ:

“ಘುರ್ರೆ ಘುರ್ರೆ ಘೋಟಕಾ

ನಡೆ ಅಂತಃಸ್ಫೋಟಕಾ”.

ಘುರ್ರೆ ಅನ್ನುವದು ತೆಲುಗಿನ ಕುರ್ರಂ(=ಕುದುರೆ) ಅನ್ನುವ ಪದಕ್ಕೆ ಹಾಗು ಘೋಟಕಾ ಎನ್ನುವದು ಹಿಂದಿ ಭಾಷೆಯ ಘೋಡಾ(=ಕುದುರೆ) ಪದಕ್ಕೆ ಧ್ವನಿಸಂವಾದಿ ಪದಗಳಾಗಿರುವದನ್ನು ಗಮನಿಸಬೇಕು. ಇಂತಹ ಬಳಕೆ ಬೇಂದ್ರೆಯವರ ಕಾವ್ಯದಲ್ಲಿ ಸಾಮಾನ್ಯ.

‘ನಾಕು ತಂತಿ’ ಅತ್ಯಂತ ಸರಳ ಕನ್ನಡದಲ್ಲಿ ರಚಿಸಲಾದ ಕವನ. ಆದರೆ ಅಷ್ಟೇ ನಿಗೂಢವಾದ ಕವನ. ಈ ಕವನದಲ್ಲಿ ಪದಗಳಿಗೆ ಅನೇಕ ಅರ್ಥಗಳು ಇರುವಂತೆಯೇ, ಪದಗಳ ನಾದಕ್ಕೂ ಸಹ ಅರ್ಥವಿದೆ. ಲೌಕಿಕ ಹಾಗು ಅಲೌಕಿಕ ಆಯಾಮಗಳಲ್ಲಿ ಈ ಕವನದ ಅರ್ಥವನ್ನು ಅನುಭವಿಸಬೇಕಾಗುತ್ತದೆ.

(ಇಲ್ಲಿಗೆ ನಾಕುತಂತಿಯ ಒಳಹೂರಣ ಮುಕ್ತಾಯವಾಯಿತು.) 

ಹಿಂದಿನ ಹೂರಣ : D. R. Bendre : ‘ಅಪ್ಪ ಎಂದರೆ ಆತ್ಮ, ಅಮ್ಮ ಎಂದರೆ ಪ್ರಕೃತಿ; ಅಮ್ಮನ ಮುಖದಲ್ಲಿ ಕಾಣುವುದು ಅಪ್ಪನ ಮುಖವೇ’ ನಾಕುತಂತಿಯ ಸತ್ಯ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!