AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ವಿಶೇಷ: ಕನ್ನಡ ಕೈಬರಹದ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ ಭಾಷಾ ಭಾರತಿ ಪ್ರಾಧಿಕಾರ

ಭಾರತದ ಯಾವುದೇ ಭಾಗದಲ್ಲಿ ಇರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ

ಕನ್ನಡ ರಾಜ್ಯೋತ್ಸವ ವಿಶೇಷ: ಕನ್ನಡ ಕೈಬರಹದ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ ಭಾಷಾ ಭಾರತಿ ಪ್ರಾಧಿಕಾರ
ಕುವೆಂಪು ಭಾಷಾ ಭಾರತಿ
TV9 Web
| Edited By: |

Updated on: Oct 25, 2021 | 10:33 AM

Share

ಬೆಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ (ಅನುವಾದ ಅಕಾಡೆಮಿ) ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಕನ್ನಡಕ್ಕಾಗಿ ನಾವು’ ಅಭಿಯಾನ ಆಯೋಜಿಸಿದೆ. ಈ ಅಭಿಯಾನದ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸುಂದರ ಕನ್ನಡ ಕೈಬರಹದಲ್ಲಿ ಬರೆಯುವ ಸ್ಪರ್ಧೆಯನ್ನು ನಡೆಸಲಾಗುತ್ತಿದೆ.

ದೇಶದ ಯಾವುದೇ ಭಾಗದಲ್ಲಿ ಇರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಏಳನೆಯ ತರಗತಿವರೆಗಿನ ವಿಭಾಗ, ಎಂಟರಿಂದ ದ್ವಿತೀಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿಭಾಗ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿಭಾಗದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಇತ್ಯಾದಿ ವಿವಿಧ ವೃತ್ತಿಪರ ಪದವಿಗಳೂ ಸೇರಿದಂತೆ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ವಿಭಾಗದಲ್ಲೂ ಅತ್ಯುತ್ತಮ ಕನ್ನಡ ಕೈಬರಹದೊಂದಿಗೆ ವಿಚಾರಗಳನ್ನು ಮಂಡಿಸಿದ ಮೂವರು ವಿದ್ಯಾರ್ಥಿಗಳಿಗೆ, ಅಂದರೆ ಒಟ್ಟು ಒಂಬತ್ತು ವಿದ್ಯಾರ್ಥಿಗಳಿಗೆ ತಲಾ ₹ 5 ಸಾವಿರ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

‘ಕನ್ನಡವನ್ನು ಬೆಳೆಸಲು ನಾನೇನು ಮಾಡುತ್ತೇನೆ?’ ಎಂಬ ವಿಷಯದ ಬಗ್ಗೆ ಎ4 ಹಾಳೆಯ ಒಂದು ಪುಟದಲ್ಲಿ ಸುಂದರ ಕೈಬರಹದಲ್ಲಿ ಬರೆದು ಕನ್ನಡದಲ್ಲಿ ಸಹಿ ಮಾಡಬೇಕು. ಅದೇ ಹಾಳೆಯ ಹಿಂದಿನ ಪುಟದಲ್ಲಿ ಸ್ಪರ್ಧಿಗಳು ತಮ್ಮ ಹೆಸರು, ತರಗತಿ ಮತ್ತು ತಾವು ಕಲಿಯುತ್ತಿರುವ ವಿದ್ಯಾಸಂಸ್ಥೆಯ ವಿಳಾಸ ಮತ್ತು ತಮ್ಮ ಅಥವಾ ಹೆತ್ತವರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅದರ ಬಳಿಕ ವಿದ್ಯಾಸಂಸ್ಥೆಯ ಮುಖ್ಯಸ್ಥರ, ಸಹಿ, ಮೊಹರು ಮತ್ತು ದೂರವಾಣಿ ಸಂಖ್ಯೆ ಇರಬೇಕು.

ಸ್ಪರ್ಧಿಗಳು ತಮ್ಮ ಬರಹವನ್ನು ತ್ವರಿತ ಅಂಚೆ ಅಥವಾ ಕೊರಿಯರ್ ಮೂಲಕ ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕಲಾಗ್ರಾಮ, ಜ್ಞಾನಭಾರತಿ ಅಂಚೆ, ಬೆಂಗಳೂರು- 560 056 ವಿಳಾಸಕ್ಕೆ ಕಳುಹಿಸಿಕೊಡಬೇಕು. ಲಕೋಟೆಯ ಹೊರಭಾಗದಲ್ಲಿ ವಿದ್ಯಾರ್ಥಿಗಳು ತಮ್ಮ ತರಗತಿ ಸಹಿತ ವಿದ್ಯಾಸಂಸ್ಥೆಯ ವಿಳಾಸ ನಮೂದಿಸಬೇಕು. ಪ್ರವೇಶಿಕೆಗಳು ಮೇಲೆ ನೀಡಲಾದ ವಿಳಾಸಕ್ಕೆ ತಲುಪಲು ಕೊನೆಯ ದಿನಾಂಕ ಅಕ್ಟೋಬರ್ 29 ಕೊನೆಯ ದಿನ. ಹೊರರಾಜ್ಯಗಳಿಂದ ಬರುವ ಪ್ರವೇಶಿಕೆಗಳಿಗೆ ಅಕ್ಟೋಬರ್ 30 ಕೊನೆಯ ದಿನ. ಸಂಪರ್ಕ ಸಂಖ್ಯೆ 080 23183312.

ಇದನ್ನೂ ಓದಿ: ‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ?’ ಧ್ವನಿ ಎತ್ತಿದ ರಿಷಬ್​ ಶೆಟ್ಟಿ ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್​ನಲ್ಲಿ ಮೊಬೈಲ್​ ಮೂಲಕವೂ ಅರ್ಜಿ ಸಲ್ಲಿಸಲು ಇದೆ ಅವಕಾಶ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು