AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

Nuggikere Dharwad : ‘ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ, ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ‘ ಪ್ರತಿಭಾ ನಂದಕುಮಾರ್

Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ
ಕವಿ ಪ್ರತಿಭಾ ನಂದಕುಮಾರ
ಶ್ರೀದೇವಿ ಕಳಸದ
|

Updated on: Apr 11, 2022 | 10:04 AM

Share

ಕವಿತೆ ಅವಿತಿಲ್ಲ : ನಬೀಸಾಬ್, ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ನಿನ್ನೆ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ; ಮನಸ್ಸು ವಿಷಣ್ಣವಾಗಿದೆ. ಆಕ್ರೋಶ ಅವಡುಗಚ್ಚಿ ಕುಳಿತಿದೆ. ಮಾತು ಸೋಲುತ್ತಿವೆ. ಅದೆಷ್ಟು ಅಗೆಯುತ್ತೀರೋ ಅಗೆಯಿರಿ. ನೀವು ಅಗೆದಷ್ಟೂ ನನ್ನನ್ನೇ ನಾ ಬಗೆದುಕೊಳ್ಳುತ್ತೇನೆ ಎನ್ನುತ್ತಿದೆ ಈ ಹೊತ್ತಿನಲ್ಲಿ ಕವಿತೆ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕವಿ ಪ್ರತಿಭಾ ನಂದಕುಮಾರ ಕವಿತೆ

ನನ್ನ ರಾಮ ಬೇರೆ

ನನ್ನ ರಾಮ ಮರ್ಯಾದಾ ಪುರುಷೋತ್ತಮ ಸಹಿಸಲಾರ ನಿಮ್ಮ ಯಾವುದೇ ಅಸಂಬದ್ಧ ಕರ್ಮ

ಶಬರಿ ಕಚ್ಚಿದ ಹಣ್ಣು ಎಂಜಲಲ್ಲ ಎಂದ ಕೋದಂಡ ಸಾಬಿಯ ಕಲ್ಲಂಗಡಿ ನೈವೇದ್ಯ ರಸ್ತೆಪಾಲು ದಂಡ

ನನ್ನ ರಾಮನಿಗಿಷ್ಟ ಪಾನಕ ಕೋಸಂಬರಿ ಮಜ್ಜಿಗೆ ಸಜ್ಜಿಗೆ ಚಿಂತೆಯಿಲ್ಲ ನೀವು ಮಾಡಿಕೊಂಡರೂ ಮಾಂಸದಡಿಗೆ

ಆಂಜನೇಯನ ಲಂಘನದ ಘನತೆ ಅರಿತ ಮಹನೀಯ ಜೊತೆಗೆ ಬರಲೆಂದ ಕಪಿಸೈನ್ಯ ಇರಲೆಂದ ಅಳಿಲು ಸೇವೆಯ ದೈನ್ಯ

ಬಳಸಿಕೊಳ್ಳಲಿ ಬಿಡಿ ಬದುಕಿಗೂ ಭಿಕ್ಷೆಗೂ ರಾಮ ನಾಮ ಜಪತಪಗಳಿಲ್ಲದ ಜನ ತಲೆ ಒಡೆದವರಿಗೇ ಪಂಗನಾಮ

ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ

ನನ್ನ ರಾಮ ಮೆರೆದ ಗೆಳೆತನ, ಕೊಂದ ರಾಕ್ಷಸನ ಕೊಂದ ರಾಕ್ಷಸ ಮತ್ತೆ ಹುಟ್ಟಿಬಂದಂತೆ ನಿಮ್ಮ ಕ್ರೂರತನ

ನನ್ನ ಆತ್ಮಾರಾಮ ಆನಂದರಮಣ ಅಚ್ಯುತ ಕೇಶವ ಹರಿನಾರಾಯಣ ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ. : tv9kannadadigital@gmail.com

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ಚೂರು ಮಾಡಿದ್ದು ಶ್ರೀರಾಮನ ಜೀವಂತ ಗೆಳೆತನವನ್ನ ಸೀತೆಯ ಅಪಾರ ವಿಶ್ವಾಸವನ್ನ

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ‘ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ!

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!