AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

Nuggikere Dharwad : ‘ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ, ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ‘ ಪ್ರತಿಭಾ ನಂದಕುಮಾರ್

Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ
ಕವಿ ಪ್ರತಿಭಾ ನಂದಕುಮಾರ
ಶ್ರೀದೇವಿ ಕಳಸದ
|

Updated on: Apr 11, 2022 | 10:04 AM

Share

ಕವಿತೆ ಅವಿತಿಲ್ಲ : ನಬೀಸಾಬ್, ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ನಿನ್ನೆ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ; ಮನಸ್ಸು ವಿಷಣ್ಣವಾಗಿದೆ. ಆಕ್ರೋಶ ಅವಡುಗಚ್ಚಿ ಕುಳಿತಿದೆ. ಮಾತು ಸೋಲುತ್ತಿವೆ. ಅದೆಷ್ಟು ಅಗೆಯುತ್ತೀರೋ ಅಗೆಯಿರಿ. ನೀವು ಅಗೆದಷ್ಟೂ ನನ್ನನ್ನೇ ನಾ ಬಗೆದುಕೊಳ್ಳುತ್ತೇನೆ ಎನ್ನುತ್ತಿದೆ ಈ ಹೊತ್ತಿನಲ್ಲಿ ಕವಿತೆ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕವಿ ಪ್ರತಿಭಾ ನಂದಕುಮಾರ ಕವಿತೆ

ನನ್ನ ರಾಮ ಬೇರೆ

ನನ್ನ ರಾಮ ಮರ್ಯಾದಾ ಪುರುಷೋತ್ತಮ ಸಹಿಸಲಾರ ನಿಮ್ಮ ಯಾವುದೇ ಅಸಂಬದ್ಧ ಕರ್ಮ

ಶಬರಿ ಕಚ್ಚಿದ ಹಣ್ಣು ಎಂಜಲಲ್ಲ ಎಂದ ಕೋದಂಡ ಸಾಬಿಯ ಕಲ್ಲಂಗಡಿ ನೈವೇದ್ಯ ರಸ್ತೆಪಾಲು ದಂಡ

ನನ್ನ ರಾಮನಿಗಿಷ್ಟ ಪಾನಕ ಕೋಸಂಬರಿ ಮಜ್ಜಿಗೆ ಸಜ್ಜಿಗೆ ಚಿಂತೆಯಿಲ್ಲ ನೀವು ಮಾಡಿಕೊಂಡರೂ ಮಾಂಸದಡಿಗೆ

ಆಂಜನೇಯನ ಲಂಘನದ ಘನತೆ ಅರಿತ ಮಹನೀಯ ಜೊತೆಗೆ ಬರಲೆಂದ ಕಪಿಸೈನ್ಯ ಇರಲೆಂದ ಅಳಿಲು ಸೇವೆಯ ದೈನ್ಯ

ಬಳಸಿಕೊಳ್ಳಲಿ ಬಿಡಿ ಬದುಕಿಗೂ ಭಿಕ್ಷೆಗೂ ರಾಮ ನಾಮ ಜಪತಪಗಳಿಲ್ಲದ ಜನ ತಲೆ ಒಡೆದವರಿಗೇ ಪಂಗನಾಮ

ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ

ನನ್ನ ರಾಮ ಮೆರೆದ ಗೆಳೆತನ, ಕೊಂದ ರಾಕ್ಷಸನ ಕೊಂದ ರಾಕ್ಷಸ ಮತ್ತೆ ಹುಟ್ಟಿಬಂದಂತೆ ನಿಮ್ಮ ಕ್ರೂರತನ

ನನ್ನ ಆತ್ಮಾರಾಮ ಆನಂದರಮಣ ಅಚ್ಯುತ ಕೇಶವ ಹರಿನಾರಾಯಣ ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ. : tv9kannadadigital@gmail.com

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ಚೂರು ಮಾಡಿದ್ದು ಶ್ರೀರಾಮನ ಜೀವಂತ ಗೆಳೆತನವನ್ನ ಸೀತೆಯ ಅಪಾರ ವಿಶ್ವಾಸವನ್ನ

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ‘ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ!

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ