AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಮಾನವ ಜಾತಿ ತಾನೊಂದೆ ವಲಂ; ಇರುಳಿನಲಿ ಹೋದಾನು ಪರಮಾತ್ಮ ಸಾಬಿಯ ಮನೆಗೆ

Dadapeer Jaiman : ‘ಕಪಟಗಳ ಕೀಲಿಸಿಕೊಂಡು ಕೆಡವಿಕ್ಕಿದ ಕಿವಿಗಳೇ ಕೇಳಿ, ನಿಮಗೆ ನೂರು ಜನುಮದಲೆಲ್ಲು ಕೇಳಿದರೂ ರಾಮನಾಮ, ಸಿಗದೆ ಕೊರಗುವಿರಿ ಅನಾಥರಾಗಿ, ಕಾರಣವ ಕೇಳಿರಿ’

Dharwad: ಮಾನವ ಜಾತಿ ತಾನೊಂದೆ ವಲಂ; ಇರುಳಿನಲಿ ಹೋದಾನು ಪರಮಾತ್ಮ ಸಾಬಿಯ ಮನೆಗೆ
ದಾದಾಪೀರ್ ಜೈಮನ್
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Apr 11, 2022 | 2:35 PM

Share

Humanity : ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ಶನಿವಾರ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುವಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಲೇಖಕ, ಅನುವಾದಕ ದಾದಾಪೀರ್ ಜೈಮನ್ ಬರೆದ ಕವಿತೆ.

ಕಲ್ಲಂಗಡಿ ಪರಮಾತ್ಮ

ಕೆಂಪು ಸಮುದ್ರ ಪ್ರೊಟೋನೂ ಕರಿಬೀಜಗಳು ಇಲೆಕ್ಟ್ರಾನೂ ಕಲ್ಲಂಗಡಿ ಪರಮಾಣುವಿಗೆ ಮಾದರಿಯೂ ಜೆ ಜೆ ಥಾಮ್ಸನ್ ಹೇಳಿದ

ದಾಹ ತೀರುತ್ತದೆ ಬನ್ನಿರೋ ಬಾಯಾರಿಕೆ ತಣಿಸುತ್ತದೆ ಕೊಳ್ಳಿರೋ ನಿಮ್ಮದೂ ನನ್ನದೂ ಹೇಳುತ್ತಾನೆ ರಣಬಿಸಿಲಲ್ಲಿ ಕೂತು ಹಣ್ಣುಮಾರುವ ಆ ಬಡಸಾಬಿ

ನುಗ್ಗಿಕೇರಿಯ ಗುಡಿ ಹನುಮಪ್ಪನದು ಹದಿನೈದು ವರುಷ ವ್ಯಾಪಾರ ಹಣ್ಣಿನದು ಮನಸಿನ್ಯಾಗ ಕಾದಿದ್ದೆ ಬಂತು ರಾಮನಿಗೆ ಶಬರಿಯ ಹಾಗೆ ‘ಎಂದಾದರೊಂದು ದಿನ ರಾಮ ಬೀದಿಗೆ ಬಂದು ಹಣ್ಣು ತಿಂದು ನನ್ನ ಕಂಗಳು ತುಂಬಿ ಬಂದು!’

ಹುಡುಗರು ಬಂದರು ಅವರು ದುರುಳರು ಬಂದರು ಅವರು ಗಾಡಿಯ ಕಲ್ಲಂಗಡಿಯೆಲ್ಲಾ ಚೆಲ್ಲಾಪಿಲ್ಲಿ ಬೀದಿಯ ತುಂಬೆಲ್ಲಾ ಕೆಂಪು ಸಮುದ್ರ ನೀನೊಬ್ಬಳೇ ಅದೃಷ್ಟವಂತೆ ಶಬರಿ ನಿನ್ನ ರಾಮನ ಹಾದಿಯಲ್ಲಿ ಇರಲಿಲ್ಲವ್ಯಾವ ಸೇನೆ ಇರುಳಿನಲಿ ಹೋದಾನು ಪರಮಾತ್ಮ ಸಾಬಿಯ ಮನೆಗೆ

ಕಪಟಗಳ ಕೀಲಿಸಿಕೊಂಡು ಕೆಡವಿಕ್ಕಿದ ಕಿವಿಗಳೇ ಕೇಳಿ ನಿಮಗೆ ನೂರು ಜನುಮದಲೆಲ್ಲು ಕೇಳಿದರೂ ರಾಮನಾಮ ಸಿಗದೆ ಕೊರಗುವಿರಿ ಅನಾಥರಾಗಿ ಕಾರಣವ ಕೇಳಿರಿ ಪರಮಾಣುವಿನೊಳಗಿನ ಪರಮಾತ್ಮ ಪುರುಷೋತ್ತಮ ಎದೆಯ ಭಕ್ತಿಗೆ ಮಾತ್ರ ಒಲಿಯುವ ಶಬ್ಧಾವತಾರಿ

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ : tv9kannadadigital@gmail.com

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ಸುಗಂಧ ಸೂಸುವ ನದಿಯಂತೆ, ಮೃತನದಿಯನ್ನು ಸೇರಲಿಹವು

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ‘ಕ್ಷಮೆ ಇರಲಿ, ನಾನು ಹೋರಾಟಗಾರನಲ್ಲ’

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?