AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಮಾನವ ಜಾತಿ ತಾನೊಂದೆ ವಲಂ; ಸುಗಂಧ ಸೂಸುವ ನದಿಯಂತೆ, ಮೃತನದಿಯನ್ನು ಸೇರಲಿಹವು

Keshava Malagi : ಕೊನೆಗೂ ನೀನಿಲ್ಲಿಗೆ ತಲುಪಿದ್ದೀಯ, ಕೊನೆಗೂ ನಮ್ಮನು ಕಹಿ ತುಂಬಿದ ಮನಗಳ, ಗೊಂಡಾರಣ್ಯದಲಿ ಬಿಟ್ಟು ಹೊರಡುತಲಿರುವೆ, ಕೊನೆಗೂ ನೀನು ಒಡೆಯಲಾರದ, ಗೋಡೆಗಳ ನಡುವೆ ನಿಶ್ಚಲನಾಗಿ ಮಲಗಲಿರುವೆ.

Dharwad: ಮಾನವ ಜಾತಿ ತಾನೊಂದೆ ವಲಂ; ಸುಗಂಧ ಸೂಸುವ ನದಿಯಂತೆ, ಮೃತನದಿಯನ್ನು ಸೇರಲಿಹವು
ಕೇಶವ ಮಳಗಿ
ಶ್ರೀದೇವಿ ಕಳಸದ
|

Updated on:Apr 11, 2022 | 2:27 PM

Share

Humanity : ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ಶನಿವಾರ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುವಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಲೇಖಕ, ಅನುವಾದಕ ಕೇಶವ ಮಳಗಿ ಪಾಬ್ಲೋ ನೆರೂಡನ ಕವಿತೆ ಅನುವಾದಿಸಿದ್ದಾರೆ. 

ಶೋಕಗೀತೆ

ಸಾವು ಮರುಕಳಿಸಿ ಸ್ಮಶಾನ, ಗೋರಿಗಳಲಿ ಕುಣಿಯುತಲೇ ಇತ್ತು. ಬಾಕು ಹಿಡಿದ, ಇಲ್ಲವೇ ಬೈಚಿಟ್ಟುಕೊಂಡ ಮನುಷ್ಯರು ನಡು ಹಗಲು ಅಥವ ಕಾರಿರುಳು ಹತ್ಯೆಗೆ ಹೊಂಚಿ, ಹತ್ಯೆ ಮಾಡುತಲೇ ಇದ್ದರು. ಜೀವಿಗಳ ಸಮಾಧಿ ಸಾಧಿಸುತಲೇ ಇದ್ದರು ಹೆಣಗಳನು ಬೇಯಿಸುತಲೇ ಇದ್ದರು.

ಜೀವಿಗಳು ವಾಸಿಸುವ ಮನೆಗಳು ಸತ್ತಿವೆ ಮುರಿದ ಮಾಳಿಗೆ, ಗಸಿಗಷ್ಟು, ಮೂತ್ರ. ಅಡ್ಡಾದಿಡ್ಡಿ ಓಣಿ, ಮುರಿದ ಜೋಪಡಿ ಜೀವಿಯ ಕಣ್ಣೀರಲಿ ಕೊಚ್ಚಿಹೋಗುತಲಿಹವು.

“ನೀವು ಬದುಕಬೇಕಿರುವುದು ಹೀಗೇ”, ಎನ್ನುವುದು ಶಾಸನ “ನಿನ್ನ ಚಿಂದಿಯಲ್ಲಿಯೇ ನೀನು ಕೊಳಿ” ಎನ್ನುವನು ಚೌಕಿದಾರ “ನೀನೊಬ್ಬ ಕೊಳಕ” ಎನ್ನುವುದು ಧರ್ಮ “ಕೊಚ್ಚೆಯಲ್ಲಿಯೇ ಬದುಕಿ ಸಾಯಿ” ಎನ್ನುವರು ಅವರು.

ಮಾನವಕುಲದ ಹೂವು ತಮಗೆಂದೇ ಕಟ್ಟಿದ ಗೋಡೆಗೆ ಡಿಕ್ಕಿ ಹೊಡೆಯುತಲಿರುವಾಗ ಕೆಲವರು ಬೂದಿಯನೇ ಅಸ್ತ್ರವಾಗಿಸಿ ಅಧಿಕಾರ ನಡೆಸಲು ಹೊಂಚಿದರು.

ಕೊನೆಗೂ ನೀನಿಲ್ಲಿಗೆ ತಲುಪಿದ್ದೀಯ ಕೊನೆಗೂ ನಮ್ಮನು ಕಹಿ ತುಂಬಿದ ಮನಗಳ ಗೊಂಡಾರಣ್ಯದಲಿ ಬಿಟ್ಟು ಹೊರಡುತಲಿರುವೆ ಕೊನೆಗೂ ನೀನು ಒಡೆಯಲಾರದ ಗೋಡೆಗಳ ನಡುವೆ ನಿಶ್ಚಲನಾಗಿ ಮಲಗಲಿರುವೆ.

ಆಮೇಲೆ, ಪ್ರತಿದಿನವೂ ಹೂವುಗಳು- ಸುಗಂಧ ಸೂಸುವ ನದಿಯಂತೆ- ಮೃತ ನದಿಯನ್ನು ಸೇರಲಿಹವು.

ಬದುಕಿನ್ನೂ ಮುಟ್ಟಿರದ ಹೂವುಗಳು ನೀನು ಬಿಟ್ಟು ಹೋದ ಶೂನ್ಯದ ಮೇಲೆ ಉದುರುವವು.

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ : tv9kannadadigital@gmail.com

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ನಾಳೆ ಹುಟ್ಟುವನು ತಾನೂ ಹಿಂದುಮುಂದಾಗಿ

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ‘ಕ್ಷಮೆ ಇರಲಿ, ನಾನು ಹೋರಾಟಗಾರನಲ್ಲ’

Published On - 2:16 pm, Mon, 11 April 22

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ