AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಮಾನವ ಜಾತಿ ತಾನೊಂದೆ ವಲಂ; ಹೇ ರಾಮ್! ಪ್ರೀತಿ ಬೆರೆತ ಅನ್ನಧರ್ಮದ ಅಮಲೇರಿಸು

Jyothi Bommanahalli : ‘ಬಿತ್ತಿದ್ದ ಬೀಜ ಎಮ್ಮಿಕೆರಿಯ ಕೊನೆಯ ಓಣಿಯ ರಾಮನ ಹೊಲದ್ದೇ, ಒಡಲ ಬಿರಿದು ಕಲ್ಲಂಗಡಿ  ಚೂರು ಚೂರಾಗಿದ್ದು ಮಾತ್ರ ರಹೀಮನ ಹೆಸರಿನಲ್ಲಿ.’

Dharwad: ಮಾನವ ಜಾತಿ ತಾನೊಂದೆ ವಲಂ; ಹೇ ರಾಮ್! ಪ್ರೀತಿ ಬೆರೆತ ಅನ್ನಧರ್ಮದ ಅಮಲೇರಿಸು
ಜ್ಯೋತಿ ಬೊಮ್ಮನಹಳ್ಳಿ
ಶ್ರೀದೇವಿ ಕಳಸದ
|

Updated on: Apr 12, 2022 | 1:13 PM

Share

Vandalising Stalls in Dharwad : ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗಿಕೆರಿ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ಶನಿವಾರ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುವಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಲೇಖಕಿ, ಪತ್ರಕರ್ತೆ ಜ್ಯೋತಿ ಬೊಮ್ಮನಹಳ್ಳಿ ಕವಿತೆ.

ಅಂದು  ರಾಮನವಮಿಯಂದೇ ಅಮಿನಾಬಿ ಕಟ್ಟಿದ ಗುಲಾಬೀ  ಬಣ್ಣದ ಬಾಬೀ ರಿಬ್ಬನ್ ಜಡೆಯಲ್ಲಿ  ಮಲ್ಲಿಗೆ ಮುಡಿಸಿದ ಚಾಂದಬೀಬಿ ನಾಜೂಕಾಗಿ  ಕೈಗೆ  ಬಳೆ ತೊಡಿಸಿದ ಬಳೆ ಸಾಬಣ್ಣ ಹುರಿದ ಹುರಿಗಡಲೆ ಪೊಟ್ಟಣ  ಹಿಡಿಸಿದ ಅಬುಕಾಕಾ ಕೆರೆಯು ಏರಿ ಮೇಲೆ ಸಾಗುತ್ತಿದ್ದ ಗೆಳೆತಿಯರ ನಗೆ… ಹನುಮಾನ್ ದೇವರಿಗೊಂದು ಸಲಾಂ… ಮೈದುಂಬಿ ನುಡಿಸುತ್ತಿದ್ದ ಖಾನ್ ಸಾಹೇಬರ  ಬೆರಳು ಅಲ್ಲಾ ತೇರೋ ನಾಮ್ ಈಶ್ವರ ತೇರೋ ನಾಮ್ ಸಬ್ ಕೊ ಸನ್ಮತಿ ದೇ ಭಗವಾನ್ ಮರೆತೇನಂದ್ರ ಮರೆಯಲಿ ಹ್ಯಾಂಗ…

ಇಂದು… ಬಿತ್ತಿದ್ದ ಬೀಜ ಎಮ್ಮಿಕೆರಿಯ ಕೊನೆಯ ಓಣಿಯ ರಾಮನ ಹೊಲದ್ದೇ ಒಡಲ ಬಿರಿದು ಕಲ್ಲಂಗಡಿ ಚೂರುಚೂರಾಗಿದ್ದು ಮಾತ್ರ ರಹೀಮನ ಹೆಸರಿನಲ್ಲಿ, ಹೇ ರಾಮ್ ಪ್ರೀತಿ ಬೆರೆತ ಅನ್ನಧರ್ಮದ ಅಮಲೇರಿಸು.

ಪ್ರತಿಕ್ರಿಯೆಗಾಗಿ : tv9kannadadigital@gmail.com

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ಸಾಲುಘಟನೆಗಳ ಹಿಂದೆ ವ್ಯವಸ್ಥಿತ ಕಾರ್ಯಸೂಚಿಯಿದೆ, ಎಚ್ಚೆತ್ತುಕೊಳ್ಳಿ!

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೇ ವಲಂ: ‘ವ್ಯವಹಾರಕ್ಕೂ ಧರ್ಮಕ್ಕೂ ತಳಕು ಹಾಕಬಾರದು’ ಗುರುಲಿಂಗ ಕಾಪಸೆ

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೇ ವಲಂ; ‘ಸಾಕ ನಿಲ್ಲಸ್ರೀ ಆರ್ತನಾದ, ಬುದ್ಧಿವಂತಿಕೆಯಿಂದ ಬಲಿಷ್ಠ ‘ನಾದ’ ಹೊಮ್ಮಿಸ್ರೀ’

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ