AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಮಾನವ ಜಾತಿ ತಾನೊಂದೆ ವಲಂ; ಅಪ್ಪ, ಹರಿದ ಅಂಗಿಯ ತಾ ತೊಟ್ಟು ಬಣ್ಣಬಣ್ಣದ ಬಟ್ಟೆಯ ನನಗಿಟ್ಟ

Manu Guruswami : ಕೇಸರಿ, ಕಪ್ಪು, ನೀಲಿ, ಹಸಿರು... ಕಣ್ಣಾಯಿಸಿದಷ್ಟೂ ಬಣ್ಣಗಳು; ಬಣ್ಣದ ಶಾಲುಗಳು... ಯಾವುದು ನನ್ನದು; ನನ್ನ ಧರ್ಮದ್ದು? ಇದೇ ಗೊಂದಲದೊಳಗೆ ನಡೆದುಬಿಟ್ಟೆ.

Dharwad: ಮಾನವ ಜಾತಿ ತಾನೊಂದೆ ವಲಂ; ಅಪ್ಪ, ಹರಿದ ಅಂಗಿಯ ತಾ ತೊಟ್ಟು ಬಣ್ಣಬಣ್ಣದ ಬಟ್ಟೆಯ ನನಗಿಟ್ಟ
ಮನು ಗುರುಸ್ವಾಮಿ
ಶ್ರೀದೇವಿ ಕಳಸದ
|

Updated on: Apr 13, 2022 | 10:36 AM

Share

Vandalising Stalls in Dharwad : ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗಿಕೆರಿ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ಶನಿವಾರ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುವಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ.

ಮೂಲತಃ ಮೈಸೂರು ಜಿಲ್ಲೆಯ ತಲಕಾಡಿನವರಾದ ಮನು ಗುರುಸ್ವಾಮಿ ಪ್ರಸ್ತುತ ಕೆ.ಎಲ್ಇ – ಎಸ್ ನಿಜಲಿಂಗಪ್ಪ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರು. ಅವರ ಕವಿತೆ ಓದಿಗೆ. 

ಬಟ್ಟೆ 

ಅಪ್ಪ ಕೊಡಿಸಿದ ಬಣ್ಣದ ಬಟ್ಟೆ ಹೇಳುತ್ತಿತ್ತು ಮೈಕೊಡವಿ ದುಡಿದ ಅವನ ಶ್ರಮದ ಫಲ ನನ್ನ ಮೈಯಪ್ಪಿ ಕುಳಿತ ಬಗೆಯ

ಆತನ ಹರಿದ ಅಂಗಿಗೆ ಅವ್ವ ಹತ್ತಾರು ಬಾರಿ ತೇಪೆ ಹಾಕಿ ಭದ್ರಗೊಳಿಸಿದ್ದಳು ಆದರೆ ನನ್ನ ಪಾಲಿಗದು ಸ್ವಪ್ನ! ಹರಿದಂದೇ, ಹೊಸ ಬಟ್ಟೆ ಉಡುಗೊರೆಯಾಗುತ್ತಿತ್ತು.

ಅವನಿಗೊಂದು ಕನಸು ನಾನು ಕಲಿಯಬೇಕು; ಕಲಿತು ಬಾಗಬೇಕು. ಅಂತೆಯೇ ಅವರಿಬ್ಬರನ್ನೂ ಕೈಹಿಡಿದು ನಡೆಸಬೇಕು

ನಾನೂ ಅದೇ ಮಾರ್ಗದಲ್ಲಿದ್ದೆ. ಅದಾರೋ ಬಣ್ಣದ ಬಟ್ಟೆಯ ಬದಲಿಸಿದರು ಸಾಂಕೇತಿಕ ಉಡುಪುಗಳ ಕೊಟ್ಟರು ನಾನೂ ಮಾರು ಹೋದೆ

ಕೇಸರಿ, ಕಪ್ಪು, ನೀಲಿ, ಹಸಿರು ಕಣ್ಣಾಯಿಸಿದಷ್ಟೂ ಬಣ್ಣಗಳು; ಬಣ್ಣದ ಶಾಲುಗಳು… ಯಾವುದು ನನ್ನದು; ನನ್ನ ಧರ್ಮದ್ದು ? ಇದೇ ಗೊಂದಲದೊಳಗೆ ನಡೆದುಬಿಟ್ಟೆ

ಈಗ ಅಪ್ಪನ ಹರಿದ ಅಂಗಿಯಾಗಲಿ ಅವನ ಕನಸಾಗಲಿ ನನಗೆ ಮುಖ್ಯವಲ್ಲ ಏಕೆಂದರೆ ಹರಿದ ಅಂಗಿಯ ತಾ ತೊಟ್ಟು ಬಣ್ಣಬಣ್ಣದ ಬಟ್ಟೆಯ ನನಗಿಟ್ಟ

ಇದವನ ತಪ್ಪಲ್ಲವೆ? ಅದಕ್ಕಾಗಿಯೇ ಅಪ್ಪನಿಗಿಂತ, ಅವನ ಪ್ರೀತಿಗಿಂತ ಧರ್ಮವೇ ನನಗೀಗ ಮುಖ್ಯ; ಇದೇ ಸತ್ಯ ನೋಡಿ ಮತ್ತೆ!

ಪ್ರತಿಕ್ರಿಯೆಗಾಗಿ : tv9kannadadigital@gmail.com

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ತರಗತಿಯ ನನ್ನ ಪಾಠಗಳ ಜಾತ್ಯಾತೀತ ಪೂಜೆಗೆ ಮೂವತ್ತನಾಲ್ಕು ವರ್ಷ

ಇದನ್ನೂ ಓದಿ : Dharwad: ಮಾನವ ಜಾತಿ ತಾನೊಂದೆ ವಲಂ; ನುಗ್ಗಿಕೆರಿಯ ನೀರು ಕಲಕುವುದನ್ನು ನೋಡುತ್ತಿದ್ದೀರಾ ರಹಿಮತ್ ಖಾನರೇ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ