AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Literature: ನೆರೆನಾಡ ನುಡಿಯೊಳಗಾಡಿ; ಇಲ್ಲಿ ಏನೋ ತಪ್ಪು ತಿಳಿವಳಿಕೆ ಇದೆ, ಇದರಿಂದ ನಾವೆಲ್ರೂ ನಾಶವಾಗ್ತೀವಿ

Franz Kafka- An Old Leaf : ದೇಶವನ್ನು ಕಾಪಾಡಿಕೊಳ್ಳುವ ಹೊಣೆ, ನಮ್ಮಂತಹ ಚಿಕ್ಕಪುಟ್ಟ ವ್ಯಾಪಾರಿಗಳ ಮೇಲೆ, ಕೆಲಸಗಾರರ ಮೇಲೆ ಬಿದ್ದಿದೆ. ನಮಗೆ ಅಂಥ ಕೆಲಸ ಮಾಡೋ ಶಕ್ತಿ ಇಲ್ಲ. ನಮಗೆ ಅದು ಸಾಧ್ಯ ಅಂತ ನಾವು ಹೇಳಿಯೂ ಇಲ್ಲ.

Literature: ನೆರೆನಾಡ ನುಡಿಯೊಳಗಾಡಿ; ಇಲ್ಲಿ ಏನೋ ತಪ್ಪು ತಿಳಿವಳಿಕೆ ಇದೆ, ಇದರಿಂದ ನಾವೆಲ್ರೂ ನಾಶವಾಗ್ತೀವಿ
ಲೇಖಕ ಫ್ರಾನ್ಝ್ ಕಾಫ್ಕಾ, ಅನುವಾದಕ ಡಾ. ಎಚ್. ಎಸ್. ರಾಘವೇಂದ್ರ ರಾವ್
Follow us
ಶ್ರೀದೇವಿ ಕಳಸದ
|

Updated on: Mar 04, 2022 | 11:04 AM

ನೆರೆನಾಡ ನುಡಿಯೊಳಗಾಡಿ | NereNaada Nudiyolagaadi : ಅವರು, ನನ್ನ ಅಂಗಡಿಯಿಂದಲೂ ಎಷ್ಟೋ ಐನಾತಿ ಸಾಮಾನು ತಗೊಂಡಿದಾರೆ. ಪಕ್ಕದ ಅಂಗಡೀ ಕಸಾಯಿಯವನ ಪಡಿಪಾಟಲು ನೋಡಿದರೆ, ನಾನೇನೂ ಕಂಪ್ಲೇಂಟ್ ಮಾಡೋಹಾಗಿಲ್ಲ. ಅಂಗಡೀಗೆ ಹೊಸ ಮಾಂಸ ತರೋದೇ ತಡ, ಅವರು ಬಂದು ಅಷ್ಟನ್ನೂ ನುಂಗಿ ನೀರು ಕುಡೀತಾರೆ. ಅವರ ಕುದುರೆಗಳು ಕೂಡ ಮಾಂಸ ಕಂಡರೆ ಬಿಡೋದಿಲ್ಲ. ಎಷ್ಟೋ ಸಲ, ಕುದುರೆ ಮತ್ತು ಮನುಷ್ಯ ಅಕ್ಕಪಕ್ಕ ಬಿದ್ಕೊಂಡು ಒಂದೇ ಚೂರು ಮಾಂಸ ಜಗೀತಾ ಇರ್‍ತಾರೆ. ಆ ತುದಿಯಿಂದ ಮನುಷ್ಯ. ಈ ತುದಿಯಿಂದ ಕುದುರೆ. ಅಂಗಡಿಯೋನು ಪ್ರತಿ ದಿನ ಹೊಸ ಮಾಂಸ ತರಲೇಬೇಕು. ಬೇರೆ ದಾರಿ ಇಲ್ಲ. ಅವನು ಮಾಂಸ ಕೊಳ್ಳೊಕೆ, ನಾವೆಲ್ಲ ಚಂದಾ ಹಾಕಿ ದುಡ್ಡು ಕೊಡ್ತೀವಿ. ಮಾಂಸ ಸಿಗದೇ ಇದ್ರೆ, ಈ ಅಲೆಮಾರಿಗಳು ಏನುಮಾಡ್ತಾರೋ ಯಾರಿಗೆ ಗೊತ್ತು? ಅದಿರಲಿ, ಪ್ರತಿ ದಿನ ಮಾಂಸ ಸಿಕ್ರೂ ಅವರ ತಲೇಲಿ ಏನು ಯೋಚನೆ ಬರತ್ತೋ? ಹೇಗೆ ಹೇಳೋದು?

ಕಥೆ : ಹಳೆಯ ಹಸ್ತಪ್ರತಿ | ಮೂಲ : ಫ್ರಾನ್ಝ್ ಕಾಫ್ಕಾ | ಕನ್ನಡಕ್ಕೆ : ಡಾ. ಎಚ್. ಎಸ್. ರಾಘವೇಂದ್ರ ರಾವ್

(ಭಾಗ 2)

ಕೆಲವು ದಿನಗಳ ಹಿಂದೆ, ಕಸಾಯಿಯವನು ಒಂದು ಪ್ಲ್ಯಾನ್ ಮಾಡಿದ. ಮಾಂಸ ಕತ್ತರಿಸೋ ಕೆಲಸ ಆದರೂ ತಪ್ಪಲಿ ಅಂತ, ಒಂದು ದಿನ ಬದುಕಿರೋ ಎತ್ತು ತಂದ. ಸರಿಯಾಗಿ ಬುದ್ಧಿಬಂತು. ಅವನ ಜೀವಮಾನವಿಡೀ ಅಂಥ ಕೆಲಸ ಮಾಡೋದಿಲ್ಲ. ನಾನು ಅಂಗಡಿ ಬಾಗಿಲು ಹಾಕಿ, ಹಿಂದುಗಡೆ ಹೋಗಿ, ಮೂಲೇಲಿ ಬಿದ್ಕೊಂಡೆ. ಕಿವಿ ಸುತ್ತಲೂ ಇರೋಬರೋ ಬಟ್ಟೆ, ಕಂಬಳೀ, ದಿಂಬು. ಎತ್ತಿನ ಕೂಗು ಕೇಳಿಸಿಕೊಳ್ಳದೆ ಇರೋಕೆ ಇಷ್ಟೆಲ್ಲ ಕಸರತ್ತು ಮಾಡಿದ್ರೂ, ಈಗಲೂ ಕೇಳ್ತಾನೇ ಇದೆ. ಅಲೆಮಾರಿಗಳು, ಜೀವಂತವಾದ ಎತ್ತಿನ ಮೇಲೆ ಎಗರ್‍ತಾ ಇದ್ದರು. ಒಂಚೂರು ಮಾಂಸ, ಹಲ್ಲಲ್ಲಿ ಕಿತ್ತುಕೊಳ್ಳೋದು, ಜಗಿಯೋದು ಮತ್ತೆ ಎಗರೋದು. ನಾನು, ಎಷ್ಟೋ ಹೊತ್ತು ಆ ಕಡೆ ತಲೆಹಾಕಲೇ ಇಲ್ಲ. ಆಮೇಲೆ ನೋಡಿದ್ರೆ, ತಿಂದುಮಿಕ್ಕಿದ್ದ ಎತ್ತಿನ ಸುತ್ತ ಎಲ್ಲರೂ ಬಿದ್ಕೊಂಡಿದ್ರು. ಹೆಂಡದ ಖಾಲೀ ಪೀಪಾಯಿ ಸುತ್ತಲೂ ಮಲಗಿರೋ ಕುಡುಕರ ಹಾಗೆ.

ಆಗಲೇ ಇರಬೇಕು. ನಾನು, ಚಕ್ರವರ್ತಿಗಳನ್ನು ನೋಡಿದೆ. ನಿಜವಾಗಲೂ. ಅರಮನೆಯ ಕಿಡಕಿ ಹಿಂದೆ ನಿಂತಿದ್ರು. ಹೀಗೆ ಹೊರಗಡೆ ಬರೋದು, ಬಹಳ ಬಹಳ ಅಪರೂಪ. ಸದಾ ಅರಮನೆಯೊಳಗಿನ ಉದ್ಯಾನವನದಲ್ಲೇ ಕಾಲ ಕಳೀತಾರೆ. ಇವತ್ತು ಯಾಕೋ ಬಂದಿದ್ರು ಅಥವಾ ನನಗೆ ಹಾಗೆ ಅನ್ನಿಸಿರಬೇಕು. ಕಿಡಕಿಯಲ್ಲಿ ನಿಂತುಕೊಂಡು, ಮುಂದೆ ಬಾಗಿ, ತನ್ನ ಅರಮನೆಯ ಸುತ್ತಲಿನ ಈ ವಿದ್ಯಮಾನಗಳನ್ನು ಗಮನಿಸ್ತಾ ಇದ್ರು.

ಇದನ್ನೂ ಓದಿ : Literature: ನೆರೆನಾಡ ನುಡಿಯೊಳಗಾಡಿ; ’ಮಾರ್ಫಾ, ಓ ಮಾರ್ಫಾ ಯಾರ ಜೊತೆ ನೀ ಚುಂಬನ ಚೆಲ್ಲಾಟ ನಡೆಸಿದ್ದೀ?’

“ಇನ್ನು ಮುಂದೆ ಏನಾಗತ್ತೆ?” ಅಂತ, ನಾವೆಲ್ಲರೂ ಕೇಳಿಕೊಳ್ತೀವಿ. “ಈ ಹೊರೆಯನ್ನು, ಈ ಹಿಂಸೆಯನ್ನು ಎಷ್ಟು ದಿನ ತಡ್ಕೊಳ್ಳೊಕೆ ಸಾಧ್ಯ? ಈ ಅಲೆಮಾರಿಗಳು ಇಲ್ಲಿಗೆ ಬರೋದಕ್ಕೆ, ಚಕ್ರವರ್ತಿಗಳ ಅರಮನೆಯೇ ಕಾರಣ. ಆದರೆ, ಅವರನ್ನು ಹಿಂದಕ್ಕೆ ಅಟ್ಟೋದು ಹೇಗೆ ಅಂತ ಅವರಿಗೆ ಗೊತ್ತಿಲ್ಲ. ಅರಮನೆಯ ಬಾಗಿಲು ಯಾವಾಗಲೂ ಮುಚ್ಚಿರತ್ತೆ. ರಾಜವೈಭವದಿಂದ, ಹೊರಗೆ ಒಳಗೆ ತಿರುಗಾಡ್ತಿದ್ದ ಕಾವಲುಗಾರರು, ಈಗ ಮುಚ್ಚಿದ ಮುಚ್ಚಿದ ಕಿಡಕಿಗಳ ಹಿಂದೆ ಮರೆಯಾಗಿದಾರೆ. ದೇಶವನ್ನು ಕಾಪಾಡಿಕೊಳ್ಳುವ ಹೊಣೆ, ನಮ್ಮಂತಹ ಚಿಕ್ಕಪುಟ್ಟ ವ್ಯಾಪಾರಿಗಳ ಮೇಲೆ, ಕೆಲಸಗಾರರ ಮೇಲೆ ಬಿದ್ದಿದೆ. ನಮಗೆ ಅಂಥ ಕೆಲಸ ಮಾಡೋ ಶಕ್ತಿ ಇಲ್ಲ. ನಮಗೆ ಅದು ಸಾಧ್ಯ ಅಂತ ನಾವು ಹೇಳಿಯೂ ಇಲ್ಲ. ಇಲ್ಲಿ ಏನೋ ತಪ್ಪು ತಿಳಿವಳಿಕೆ ಇದೆ. ಇದರಿಂದ ನಾವೆಲ್ರೂ ನಾಶವಾಗ್ತೀವಿ.”

(ಮುಗಿಯಿತು)

ಪ್ರತಿಕ್ರಿಯೆಗಾಗಿ : tv9kannadadigital@gmail.com

ಭಾಗ 1 : Literature: ನೆರೆನಾಡ ನುಡಿಯೊಳಗಾಡಿ; ಕಾಫ್ಕಾ ಕಥೆ ‘ಹಳೆಯ ಹಸ್ತಪ್ರತಿ’ ಅನುವಾದಿಸಿದ್ದಾರೆ ಎಚ್ಎಸ್ ರಾಘವೇಂದ್ರ ರಾವ್ 

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ