AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price: ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 102 ರೂಪಾಯಿ ಇಳಿಕೆ

2022ರ ಜನವರಿ ತಿಂಗಳ ವಾಣಿಜ್ಯ ಸಿಲಿಂಡರ್ ಬೆಲೆಯು 102.50 ರೂಪಾಯಿ ಇಳಿಕೆ ಆಗಿದ್ದು, ಆ ನಂತರ ಯಾವ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

LPG Price: ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 102 ರೂಪಾಯಿ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 01, 2022 | 12:12 PM

Share

ಜನವರಿ 1, 2022ರ ಹೊಸ ವರ್ಷದಂದು ಗ್ರಾಹಕರಿಗೆ ಸ್ವಲ್ಪ ನಿರಾಳ ಆಗುವಂತೆ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪೆನಿಗಳು ಶನಿವಾರದಿಂದ ಜಾರಿಗೆ ಬರುವಂತೆ 19 ಕೇಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ರೂ. 102.50ರಷ್ಟು ಕಡಿತಗೊಳಿಸಿದೆ. ದೆಹಲಿಯಲ್ಲಿ 19 ಕೇಜಿ ವಾಣಿಜ್ಯ ಸಿಲಿಂಡರ್ ರೂ. 1998.50 ಆಗಲಿದೆ ಎಂದು ಮೂಲಗಳು ತಿಳಿಸಿವೆ. 19 ಕೇಜಿ ಸಿಲಿಂಡರ್‌ನ ಅತಿದೊಡ್ಡ ಬಳಕೆದಾರರಾದ ರೆಸ್ಟೋರೆಂಟ್‌ಗಳು, ತಿನಿಸುಗಳ ಮಾರಾಟ ಮಾಡುವವರು ಮತ್ತು ಟೀ ಸ್ಟಾಲ್‌ಗಳಿಗೆ ಇದು ಸ್ವಲ್ಪ ನಿರಾಳವನ್ನು ನೀಡುತ್ತದೆ. ಕೋಲ್ಕತ್ತಾದಲ್ಲಿ 19 ಕೇಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಈಗ 2,072 ರೂಪಾಯಿ, ಮುಂಬೈನಲ್ಲಿ 19 ಕೇಜಿ ಸಿಲಿಂಡರ್‌ನ ವಾಣಿಜ್ಯ ಗ್ಯಾಸ್ ಬೆಲೆ ಈಗ 1,948.5 ರೂ., ಚೆನ್ನೈನಲ್ಲಿ 19 ಕೇಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,132 ರೂಪಾಯಿ ಇದೆ.

ಕಳೆದ ತಿಂಗಳು ಡಿಸೆಂಬರ್ 1ರಂದು 19 ಕೇಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಲಾಯಿತು. ಇದು ದೆಹಲಿಯಲ್ಲಿ 19 ಕೇಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 2,101 ರೂಪಾಯಿಗೆ ತಂದಿತು. ಇದು 2012-13ರ ನಂತರ 19 ಕೇಜಿ ವಾಣಿಜ್ಯ ಸಿಲಿಂಡರ್‌ನ ಎರಡನೇ ಅತಿ ಹೆಚ್ಚು ಬೆಲೆಯಾಗಿದೆ. ಪ್ರತಿ ಸಿಲಿಂಡರ್‌ಗೆ 2,200 ರೂಪಾಯಿ. ಆದರೂ 14.2 ಕೇಜಿ, 5 ಕೇಜಿ, 10 ಕೇಜಿ ಕಾಂಪೋಸಿಟ್ ಅಥವಾ 5 ಕೇಜಿ ಕಾಂಪೋಸಿಟ್ ಸಿಲಿಂಡರ್‌ಗಳ ಇತರ ದೇಶೀಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಇಳಿಕೆ ಇಲ್ಲ ಮತ್ತು ಅವುಗಳ ಬೆಲೆಗಳು ಒಂದೇ ಆಗಿರುತ್ತವೆ.

ಇದಕ್ಕೂ ಮುನ್ನ ನವೆಂಬರ್ 1ರಂದು 19 ಕೇಜಿಯ ವಾಣಿಜ್ಯ ಸಿಲಿಂಡರ್ ಬೆಲೆ 266 ರೂಪಾಯಿಗೆ ಏರಿಕೆಯಾಗಿದ್ದು, ಬೆಲೆಯನ್ನು 2,000.50 ರೂಪಾಯಿಗೆ ಹೆಚ್ಚಿಸಿದೆ. ಹೊಸ ದರ ಕಡಿತದ ನಂತರ 19 ಕೇಜಿ ಸಿಲಿಂಡರ್ ದೆಹಲಿಯಲ್ಲಿ 2,101 ರೂಪಾಯಿಯಿಂದ 1,998.50 ರೂಪಾಯಿಗೆ ಇಳಿದಿದೆ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಅಕ್ಟೋಬರ್ 1ರಂದು 19 ಕೇಜಿ ಸಿಲಿಂಡರ್‌ಗಳ ಬೆಲೆಯನ್ನು 43 ರೂಪಾಯಿ ಮತ್ತು ಅಕ್ಟೋಬರ್ 6ರಂದು 19 ಕೇಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2.50 ರೂಪಾಯಿ ಇಳಿಕೆಯಾಗಿತ್ತು. ಸೆಪ್ಟೆಂಬರ್ 1ರಂದು 19 ಕೇಜಿ ಸಿಲಿಂಡರ್ ಬೆಲೆ 75 ರೂಪಾಯಿ ಏರಿಕೆ ಆಗಿತ್ತು.

ಇದನ್ನೂ ಓದಿ: Financial Changes: 2022ರ ಜನವರಿಯಿಂದ ಆಗಲಿರುವ 6 ಹಣಕಾಸು ವಿಚಾರದ ಬದಲಾವಣೆಗಳಿವು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ