AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Life certificate: ಪಿಂಚಣಿದಾರರ ಜೀವಿತ ಪ್ರಮಾಣ ಪತ್ರ ಸಲ್ಲಿಕೆಗೆ ಫೆ. 28ರವರೆಗೆ ಗಡುವು ವಿಸ್ತರಣೆ

ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವುದಕ್ಕೆ ಪಿಂಚಣಿದಾರರಿಗೆ ಇದ್ದ ಗಡುವನ್ನು ಫೆಬ್ರುವರಿ 28, 2022ಕ್ಕೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

Life certificate: ಪಿಂಚಣಿದಾರರ ಜೀವಿತ ಪ್ರಮಾಣ ಪತ್ರ ಸಲ್ಲಿಕೆಗೆ ಫೆ. 28ರವರೆಗೆ ಗಡುವು ವಿಸ್ತರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 31, 2021 | 6:33 PM

Share

ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28, 2022ರ ವರೆಗೆ ಸರ್ಕಾರ ಶುಕ್ರವಾರದಂದು ವಿಸ್ತರಣೆ ಮಾಡಿದೆ. “ವಿವಿಧ ರಾಜ್ಯಗಳಲ್ಲಿ ಹಬ್ಬುತ್ತಿರುವ ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಮತ್ತು ವಯಸ್ಸಾದವರು ಕೊರೊನಾ ವೈರಸ್‌ಗೆ ದುರ್ಬಲತೆಯನ್ನು ಗಮನದಲ್ಲಿಟ್ಟುಕೊಂಡು, ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಲು ಈಗ ಇರುವ 31.12.2021ರ ಸಮಯವನ್ನು ವಿಸ್ತರಿಸಲು ನಿರ್ಧರಿಸಲಾಗಿದೆ,” ಎಂದು ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಕಚೇರಿ ಜ್ಞಾಪಕ ಪತ್ರದಲ್ಲಿ ತಿಳಿಸಿದೆ.

ಈಗ ಕೇಂದ್ರ ಸರ್ಕಾರದ ಪಿಂಚಣಿದಾರರು 28.02.2022ರವರೆಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. “ಈ ವಿಸ್ತೃತ ಅವಧಿಯಲ್ಲಿ, ಪಿಂಚಣಿ ವಿತರಣೆ ಅಧಿಕಾರಿಗಳು (ಪಿಡಿಎ) ತಡೆರಹಿತವಾಗಿ ಪಿಂಚಣಿ ಪಾವತಿಸುವುದನ್ನು ಮುಂದುವರಿಸಲಾಗುತ್ತದೆ,” ಎಂದು ಅದು ಹೇಳಿದೆ.

ಜೀವಿತ ಪ್ರಮಾಣ ಪತ್ರಗಳನ್ನು ಪಡೆಯುವಾಗ “ಶಾಖೆಗಳಲ್ಲಿ ವಿಪರೀತ ನೂಕುನುಗ್ಗಲನ್ನು ತಪ್ಪಿಸಲು ಮತ್ತು ಕೊವಿಡ್ -19 ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಲು” ಈ ಕ್ರಮಗಳು ನಿರೀಕ್ಷಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. “ಪಿಂಚಣಿ ವಿತರಿಸುವ ಅಧಿಕಾರಿಗಳು ಶಾಖೆಗಳಲ್ಲಿ ಸರಿಯಾದ ವ್ಯವಸ್ಥೆಗಳು ಮತ್ತು ಸಾಮಾಜಿಕ ಅಂತರದ ಕ್ರಮಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಜನದಟ್ಟಣೆಯನ್ನು ತಡೆಯಬೇಕು,” ಎಂದು ಹೇಳಲಾಗಿದೆ.

ಇದನ್ನೂ ಓದಿ: ITR Filing: ಐಟಿಆರ್ ಫೈಲಿಂಗ್ ದಿನಾಂಕ ವಿಸ್ತರಣೆ ಪ್ರಸ್ತಾವ ಇಲ್ಲ ಎಂದ ಕೇಂದ್ರ ಸರ್ಕಾರ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ