AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST rate hike: ಜವಳಿ, ಉಡುಪಿನ ಮೇಲೆ ಜಿಎಸ್​ಟಿ ದರ ಹೆಚ್ಚಳ ಇಲ್ಲ; ಪಾದರಕ್ಷೆಗಳು ಆಗಲಿವೆ ದುಬಾರಿ

ಡಿಸೆಂಬರ್ 31ನೇ ತಾರೀಕಿನ ಶುಕ್ರವಾರದಂದು ನಡೆದ ಜಿಎಸ್​ಟಿ ಸಮಿತಿ ಸಭೆಯಲ್ಲಿ 1000 ರೂಪಾಯಿಯೊಳಗಿನ ಪಾದರಕ್ಷೆಗಳ ಮೇಲೆ ತೆರಿಗೆಯನ್ನು ಶೇ 5ರಿಂದ 12ಕ್ಕೆ ಏರಿಕೆ ಮಾಡಿದ್ದು, ಜನವರಿ 1ರಿಂದ ಬೆಲೆ ಹೆಚ್ಚಳ ಆಗಿದೆ.

GST rate hike: ಜವಳಿ, ಉಡುಪಿನ ಮೇಲೆ ಜಿಎಸ್​ಟಿ ದರ ಹೆಚ್ಚಳ ಇಲ್ಲ; ಪಾದರಕ್ಷೆಗಳು ಆಗಲಿವೆ ದುಬಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 31, 2021 | 4:43 PM

Share

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಮಿತಿಯು ಉದ್ಯಮದ ಒತ್ತಡದ ಮಧ್ಯೆ ಜವಳಿ ಮತ್ತು ಉಡುಪು ಉದ್ಯಮದಲ್ಲಿನ ಹಲವಾರು ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಹೆಚ್ಚಿಸುವ ನಿರ್ಧಾರವನ್ನು ಶುಕ್ರವಾರ ತಡೆಹಿಡಿದಿದೆ. ಆದರೆ ರೂ. 1,000 ವರೆಗಿನ ಪಾದರಕ್ಷೆಗಳ ಮೇಲಿನ ತೆರಿಗೆ ದರವು ಶೇ 5ರಿಂದ ಶೇ 12ಕ್ಕೆ ಏರಿಕೆ ಆಗುತ್ತದೆ. ಇದು ಶನಿವಾರದಿಂದ ಜಾರಿಗೆ ಬರಲಿದೆ.

ಜವಳಿ ವಲಯದ ತೆರಿಗೆಯ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಜಿಎಸ್​ಟಿ ಸಮಿತಿ ನಿರ್ಧರಿಸಿದೆ ಮತ್ತು ಸುಂಕ ತಿದ್ದುಪಡಿ ಅಗತ್ಯವಿರುವ ವಸ್ತುಗಳ ಮೇಲಿನ ತೆರಿಗೆ ದರವನ್ನು ಶೇ 5ರಿಂದ ಶೇ 12ಕ್ಕೆ ಬದಲಾಯಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚರ್ಚೆಗೆ ಮುಂದಾದ ಏಕೈಕ ವಿಷಯವಾಗಿರುವ ಜವಳಿ ಮೇಲಿನ ತೆರಿಗೆಯನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರ ಸಮಿತಿ ಪರಿಶೀಲಿಸಲಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

“ಇಂದು ಜಿಎಸ್​ಟಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು, ಜವಳಿಯನ್ನು ಇತರ ವಸ್ತುಗಳ ಜೊತೆಗೆ ಪರಿಗಣಿಸಲು ಸಮಿತಿಯ ಮುಂದೆ ಇಡಲಾಗುವುದು,” ಎಂದು ಸಚಿವರು ಹೇಳಿದ್ದಾರೆ. ಈ ಸಮಿತಿಯು ಈಗ ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳ ಸಮರ್ಥನೀಯ ಅಂಶಗಳನ್ನು ಪರಿಶೀಲಿಸುತ್ತಿದೆ.

ಇದನ್ನೂ ಓದಿ: GST Council Meet: ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ನಿರ್ಧಾರ ಸರ್ವಾನುಮತದಿಂದ ಮುಂದೂಡಿಕೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ