AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಉಪಚುನಾವಣೆಗೂ ಮುನ್ನ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆ

ಚೆಲ್ಮೆಡಾ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಸಿಕ್ಕಿದೆ.

Telangana: ಉಪಚುನಾವಣೆಗೂ ಮುನ್ನ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆ
TV9 Web
| Edited By: |

Updated on:Oct 18, 2022 | 9:52 AM

Share

ನಲ್ಗೊಂಡ: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚೆಲ್ಮೆಡಾ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಸಿಕ್ಕಿದೆ. ಈ ಹಣವು ನವೆಂಬರ್ 3 ರಂದು ನಡೆಯಲಿರುವ ಮುನುಗೋಡು ಉಪಚುನಾವಣೆಗೆ ಮುಂಚಿತವಾಗಿ ಬಿಜೆಪಿ ಕಾರ್ಪೊರೇಟರ್‌ ಕಾರಿನಲ್ಲಿ ಪತ್ತೆಯಾಗಿದೆ

ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರೆಮಾ ರಾಜೇಶ್ವರಿ ಅವರ ಪ್ರಕಾರ, ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಚೆಲ್ಮೆಡ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ತಂಡವೊಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಟಾಟಾ ಸಫಾರಿಯನ್ನು ತಡೆದಿದ್ದಾರೆ. ಈ ಕಾರನ್ನು ಕರೀಂನಗರದ ಬಿಜೆಪಿ ಕಾರ್ಪೊರೇಟರ್ ವೇಣು ಚಲಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಪೂರ್ವ ಅಂಧೇರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುವುದಿಲ್ಲ

ಚೆಕ್‌ಪೋಸ್ಟ್‌ ಬಳಿ ಬರುತ್ತಿದ್ದ ಕಾರನ್ನು ಪೊಲೀಸ್ ತಂಡ ತಡೆದು ಪರಿಶೀಲನೆ ಮಾಡಿದ್ದಾರೆ. ಕಾರಿನ ಹಿಂದಿನ ಡಿಕ್ಕಿಯಲ್ಲಿ 1 ಕೋಟಿ ರೂ. ನಗದು ತುಂಬಿದ್ದ ಬ್ಯಾಗ್ ಪೊಲೀಸರಿಗೆ ಸಿಕ್ಕಿದೆ. ನಂತರ ವೇಣು ಅವರನ್ನು ವಿಚಾರಣೆ ನಡೆಸಲಾಗಿದೆ ಆದರೆ ಹಣವನ್ನು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ, ಈ ಹಣದ ಲೆಕ್ಕಕ್ಕೆ ದಾಖಲೆಗಳು ಕೂಡ ಇರಲಿಲ್ಲ ಎಂದು ಹೇಳಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ನಲ್ಗೊಂಡ ಜಿಲ್ಲೆಯ ಮುನುಗೋಡು ಗ್ರಾಮವು ನವೆಂಬರ್ 3ರಂದು ಉಪಚುನಾವಣೆ ಬರುತ್ತಿದ್ದು ಇದೀಗ ಇಂತಹ ಪ್ರಕರಣ ಪತ್ತೆಯಾಗಿರುವುದು ಅನುಮಾನವನ್ನು ಸೃಷ್ಟಿಸಿದೆ.

Published On - 9:50 am, Tue, 18 October 22

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ