AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಉಪಚುನಾವಣೆಗೂ ಮುನ್ನ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆ

ಚೆಲ್ಮೆಡಾ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಸಿಕ್ಕಿದೆ.

Telangana: ಉಪಚುನಾವಣೆಗೂ ಮುನ್ನ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆ
TV9 Web
| Edited By: |

Updated on:Oct 18, 2022 | 9:52 AM

Share

ನಲ್ಗೊಂಡ: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚೆಲ್ಮೆಡಾ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಬಿಜೆಪಿ ಕಾರ್ಪೊರೇಟರ್‌ನ ಕಾರಿನಲ್ಲಿ 1 ಕೋಟಿ ರೂ. ನಗದು ಸಿಕ್ಕಿದೆ. ಈ ಹಣವು ನವೆಂಬರ್ 3 ರಂದು ನಡೆಯಲಿರುವ ಮುನುಗೋಡು ಉಪಚುನಾವಣೆಗೆ ಮುಂಚಿತವಾಗಿ ಬಿಜೆಪಿ ಕಾರ್ಪೊರೇಟರ್‌ ಕಾರಿನಲ್ಲಿ ಪತ್ತೆಯಾಗಿದೆ

ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರೆಮಾ ರಾಜೇಶ್ವರಿ ಅವರ ಪ್ರಕಾರ, ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಚೆಲ್ಮೆಡ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ತಂಡವೊಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಟಾಟಾ ಸಫಾರಿಯನ್ನು ತಡೆದಿದ್ದಾರೆ. ಈ ಕಾರನ್ನು ಕರೀಂನಗರದ ಬಿಜೆಪಿ ಕಾರ್ಪೊರೇಟರ್ ವೇಣು ಚಲಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಕಾರಿನಲ್ಲಿ 1 ಕೋಟಿ ರೂ. ನಗದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಪೂರ್ವ ಅಂಧೇರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುವುದಿಲ್ಲ

ಚೆಕ್‌ಪೋಸ್ಟ್‌ ಬಳಿ ಬರುತ್ತಿದ್ದ ಕಾರನ್ನು ಪೊಲೀಸ್ ತಂಡ ತಡೆದು ಪರಿಶೀಲನೆ ಮಾಡಿದ್ದಾರೆ. ಕಾರಿನ ಹಿಂದಿನ ಡಿಕ್ಕಿಯಲ್ಲಿ 1 ಕೋಟಿ ರೂ. ನಗದು ತುಂಬಿದ್ದ ಬ್ಯಾಗ್ ಪೊಲೀಸರಿಗೆ ಸಿಕ್ಕಿದೆ. ನಂತರ ವೇಣು ಅವರನ್ನು ವಿಚಾರಣೆ ನಡೆಸಲಾಗಿದೆ ಆದರೆ ಹಣವನ್ನು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ, ಈ ಹಣದ ಲೆಕ್ಕಕ್ಕೆ ದಾಖಲೆಗಳು ಕೂಡ ಇರಲಿಲ್ಲ ಎಂದು ಹೇಳಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ನಲ್ಗೊಂಡ ಜಿಲ್ಲೆಯ ಮುನುಗೋಡು ಗ್ರಾಮವು ನವೆಂಬರ್ 3ರಂದು ಉಪಚುನಾವಣೆ ಬರುತ್ತಿದ್ದು ಇದೀಗ ಇಂತಹ ಪ್ರಕರಣ ಪತ್ತೆಯಾಗಿರುವುದು ಅನುಮಾನವನ್ನು ಸೃಷ್ಟಿಸಿದೆ.

Published On - 9:50 am, Tue, 18 October 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ