AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 200 ಕೊರೊನಾ ಸೋಂಕಿತರಲ್ಲಿ ಒಬ್ಬರಿಗೆ ಆಕ್ಸಿಜನ್​ ಅಗತ್ಯ, ಶೇ.90ರಷ್ಟು ಬೆಡ್​ಗಳ ಲಭ್ಯತೆ; ಇದು ಖಾಸಗಿ ಆಸ್ಪತ್ರೆಗಳ ದತ್ತಾಂಶದ ವರದಿ

ಆಸ್ಪತ್ರೆಯಲ್ಲಿ ಸೋಂಕಿತರು ಉಳಿಯಬೇಕಾದ ದಿನವೂ ಕಡಿಮೆಯಾಗಿದೆ. ಅಂದರೆ ಕೊವಿಡ್ 19 ಸೋಂಕಿತರು ಸರಾಸರಿ ಮೂರು ದಿನ ಉಳಿದು ಚಿಕಿತ್ಸೆ ಪಡೆಯಬೇಕಾಗಬಹುದು ಎಂದು ಎಎಚ್​ಪಿಐನ ಡಾಟಾ ಮೂಲಕ ವಿಶ್ಲೇಷಿಸಲಾಗಿದೆ.

ದೇಶದಲ್ಲಿ 200 ಕೊರೊನಾ ಸೋಂಕಿತರಲ್ಲಿ ಒಬ್ಬರಿಗೆ ಆಕ್ಸಿಜನ್​ ಅಗತ್ಯ, ಶೇ.90ರಷ್ಟು ಬೆಡ್​ಗಳ ಲಭ್ಯತೆ; ಇದು ಖಾಸಗಿ ಆಸ್ಪತ್ರೆಗಳ ದತ್ತಾಂಶದ ವರದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 04, 2022 | 12:37 PM

Share

ಭಾರತದಲ್ಲಿ ಕೊವಿಡ್ 19 ಸೋಂಕಿತರ ಸಂಖ್ಯೆ ಮತ್ತೊಮ್ಮೆ ಏರಿಕೆಯಾಗುತ್ತಿದೆ. ಹಾಗಿದ್ದಾಗ್ಯೂ  200 ಕೊರೊನಾ ಸೋಂಕಿತರಲ್ಲಿ ಒಬ್ಬರಿಗೆ ಮಾತ್ರ ಆಕ್ಸಿಜನ್ (Oxygen)​ ಸಪೋರ್ಟ್ ಬೇಕಾಗುತ್ತಿದೆ ಎಂದು ಡಾಟಾವೊಂದು ಬಹಿರಂಗ ಪಡಿಸಿದೆ. ಅಂದಹಾಗೆ, ಇದು ಖಾಸಗಿ ಆಸ್ಪತ್ರೆಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಮಾತ್ರ ಆಧರಿಸಿ ನಡೆಸಿದ ಅಧ್ಯಯನವಾಗಿದೆ. 200 ಸೋಂಕಿತರಲ್ಲಿ ಒಬ್ಬರು ಖಾಸಗಿ ಆಸ್ಪತ್ರೆಗಲ್ಲಿ ಆಕ್ಸಿಜನ್​ ಸಪೋರ್ಟ್​​ನಲ್ಲಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆಗಳಿಂದ ಮತ್ತು 2500 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 8000 ಸಣ್ಣ ಖಾಸಗಿ ಆಸ್ಪತ್ರೆಗಳನ್ನು ಪ್ರತಿನಿಧಿಸುವ  ಅಸೋಸಿಯೇಷನ್ ಆಫ್  ಹೆಲ್ತ್​ಕೇರ್​ ಪ್ರೊವೈಡರ್ಸ್ ಇಂಡಿಯಾ(ಎಎಚ್​ಪಿಐ) ಸಂಗ್ರಹಿಸಿದ ಮಾಹಿತಿ ಅನ್ವಯ, ದೇಶದಲ್ಲಿ ಸದ್ಯ ಶೇ.0.5ಕ್ಕಿಂತಲೂ ಕಡಿಮೆ ಪ್ರಮಾಣದ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೆಂಬಲಿತ ಚಿಕಿತ್ಸೆ ಬೇಕಾಗುತ್ತಿದೆ ಎಂದು ಹೇಳಲಾಗಿದೆ. 

ಆಸ್ಪತ್ರೆಯಲ್ಲಿ ಸೋಂಕಿತರು ಉಳಿಯಬೇಕಾದ ದಿನವೂ ಕಡಿಮೆಯಾಗಿದೆ. ಅಂದರೆ ಕೊವಿಡ್ 19 ಸೋಂಕಿತರು ಸರಾಸರಿ ಮೂರು ದಿನ ಉಳಿದು ಚಿಕಿತ್ಸೆ ಪಡೆಯಬೇಕಾಗಬಹುದು ಎಂದು ಎಎಚ್​ಪಿಐನ ಡಾಟಾ ಮೂಲಕ ವಿಶ್ಲೇಷಿಸಲಾಗಿದೆ. ಅಂದಹಾಗೆ, ಈ ಎಎಚ್​ಪಿಐ ಎಂಬುದು ದೇಶಾದ್ಯಂತ ಇರುವ ಫೋರ್ಟಿಸ್, ಮ್ಯಾಕ್ಸ್, ಅಪೊಲೋ, ಮೇದಾಂತಾ ಆಸ್ಪತ್ರೆಗಳನ್ನೂ ಒಳಗೊಂಡಿದೆ. ಹೀಗೆ ಖಾಸಗಿ ಆಸ್ಪತ್ರೆಗಳಿಂದ ಸಂಗ್ರಹಿಸಿದ ದತ್ತಾಂಶದ ಪ್ರಕಾರ, ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ತುಂಬ ಕಡಿಮೆ ಇದೆ.

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು ಕೂಡ 37ಸಾವಿರಕ್ಕೂ ಅಧಿಕ ಕೇಸ್​ಗಳು ದಾಖಲಾಗಿವೆ. ಅದರಲ್ಲೂ ಮಹಾರಾಷ್ಟ್ರ ಮತ್ತು ದೆಹಲಿಯಲ್ಲೇ ಹೆಚ್ಚಿನ ಕೇಸ್​ಗಳು ಕಾಣಿಸಿಕೊಳ್ಳುತ್ತಿವೆ. ಆದರೆ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ ಹೇರಳವಾಗಿದೆ. ಶೇ.90ರಷ್ಟು ಬೆಡ್​ಗಳು ಖಾಲಿ ಇವೆ. ಇದೂ ಕೂಡ ಪ್ರಸ್ತುತ ಕೊರೊನಾ ತೀವ್ರತೆ ಕಡಿಮೆ ಇದೆ ಎಂಬುದನ್ನು ತೋರಿಸುತ್ತದೆ ಎಂದು ವಿಶ್ಲೇಷಿಸಲಾಗಿದೆ. ಮಹಾರಾಷ್ಟ್ರದ ಕೊರೊನಾ ಚಿಕಿತ್ಸೆ ಆಸ್ಪತ್ರೆಗಳಲ್ಲಿ ಶೇ.9-10ರಷ್ಟು ಬೆಡ್​ಗಳು ಮಾತ್ರ ಪೂರ್ತಿಯಾಗಿವೆ. ದೆಹಲಿಯಲ್ಲಿ ಕೂಡ ಬೆಡ್ ಅಗತ್ಯತೆಯ ದರ ಶೇ.10 ರ ಕೆಳಗೇ ಇದೆ ಎಂದು ಉನ್ನತ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊವಿಡ್​ 19 ಎರಡನೇ ಅಲೆಯ ವೇಳೆ ಆಮ್ಲಜನಕ ಮತ್ತು ಬೆಡ್​ಗಳ ಕೊರತೆ ಮಿತಿಮೀರಿತ್ತು. ಆಕ್ಸಿಜನ್​ ಪೂರೈಕೆಯೇ ದೊಡ್ಡ ಸವಾಲಾಗಿತ್ತು. ಆದರೆ ಈ ಬಾರಿ ಹಾಗೆ ಆಗಬಾರದು ಎಂಬ ಕಾರಣಕ್ಕೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದ. ದೇಶದಲ್ಲಿ ಆಕ್ಸಿಜನ್​ ಅಗತ್ಯತೆಯನ್ನು ಎಎಚ್​ಪಿಐ ಸದಾ ಮೇಲ್ವಿಚಾರಣೆ ಮಾಡುತ್ತಿದೆ. ಅದು ಶೇ.5ಕ್ಕೆ ತಲುಪಿದಾಗ ನಾವು ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದೂ ಕೂಡ ಎಎಚ್​ಪಿಐ ಮಾಹಿತಿ ನೀಡಿದೆ.

ಇದನ್ನೂ ಓದಿ: ಮನೆಯಲ್ಲೇ ಸೃಷ್ಟಿಯಾಯ್ತು ಪ್ರಕೃತಿಯ ಸೊಬಗು; ಟೆರೇಸ್ ಮೇಲೆ ಬಗೆ ಬಗೆಯ ತರಕಾರಿ, ಹೂಗಳ ಬೆಳೆದು ಸೈ ಎನಿಸಿಕೊಂಡ ಕೃಷ್ಣಪ್ಪ!

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ