AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ: ಪುಲ್ವಾಮಾದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Avantipora Encounter: ಇಂದು (ಭಾನುವಾರ) ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಜಮ್ಮ ಮತ್ತು ಕಾಶ್ಮೀರದ ಆವಂತಿಪುರದಲ್ಲಿ ಕಾಳಗ ನಡೆಯುತ್ತಿದ್ದು, ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ಪುಲ್ವಾಮಾದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 12, 2021 | 9:31 AM

Share

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರ ಪಟ್ಟಣದ ಬರಗಾಮ್ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ. ಇದರಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರು ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದು, “ಅವಂತಿಪುರ ಎನ್‌ಕೌಂಟರ್ ಅಪ್‌ಡೇಟ್: 01 ಭಯೋತ್ಪಾದಕನ ಹತ್ಯೆ, ಕಾರ್ಯಾಚರಣೆ ನಡೆಯುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ. ಬರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಲಭಿಸಿದ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಡೆಗಳು ಹುಡುಕಾಟ ನಡೆಸುತ್ತಿದ್ದಾಗ, ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿ ಹೇಳಿದರು. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಪೊಲೀಸರು ಹಂಚಿಕೊಂಡ ಟ್ವೀಟ್:

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ), ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನ ಮೂವರು ಭಯೋತ್ಪಾದಕರನ್ನು ಬುಧವಾರ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ ಮೂರು ದಿನಗಳ ನಂತರ ಭಾನುವಾರ ಬೆಳಗಿನ ಕಾರ್ಯಾಚರಣೆ ನಡೆದಿದೆ. ಪೊಲೀಸರ ಪ್ರಕಾರ, ಈ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲಿನ ದಾಳಿ ಮತ್ತು ನಾಗರಿಕ ದೌರ್ಜನ್ಯ ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಗುಂಪುಗಳ ಭಾಗವಾಗಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಾಗರಿಕರ ಮೇಲೆ ಹಲವಾರು ದಾಳಿಗಳನ್ನು ನಡೆದಿವೆ. ಅವುಗಳಲ್ಲಿ ಹೆಚ್ಚಿನವು ಭಾರತದ ಇತರ ರಾಜ್ಯಗಳಿಂದ ಬಂದವರ ಮೇಲೆ ನಡೆದಿವೆ. ಕೇಂದ್ರ ಸರ್ಕಾರ ಈ ಕುರಿತು ನವೆಂಬರ್ 30ರಂದು ಸಂಸತ್ತಿಗೆ ನೀಡಿರುವ ಮಾಹಿತಿಯಲ್ಲಿ, ಈ ವರ್ಷದ ನವೆಂಬರ್ 15ರವರೆಗೆ ಭಯೋತ್ಪಾದಕ ದಾಳಿಯಿಂದ 40 ನಾಗರಿಕರು ಸಾವನ್ನಪ್ಪಿದ್ದು, 72 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ನವೆಂಬರ್ 15 ರವರೆಗೆ ಭಯೋತ್ಪಾದಕರ ಮೇಲಿನ ಕಾದಾಟದಲ್ಲಿ ಭದ್ರತಾ ಪಡೆಗಳ 35 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 86 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಮೈಸೂರು: ನೀರು ಕುಡಿಯುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟ ಹುಲಿ; ಅಪರೂಪದ ದೃಶ್ಯ ನೋಡಿ

ಅಮೇರಿಕಾ: ಚಂಡಮಾರುತಕ್ಕೆ ನಲುಗಿದ ಐದು ರಾಜ್ಯಗಳು; 80ಕ್ಕೂ ಅಧಿಕ ಜನರ ದುರ್ಮರಣ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ