AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವಿನಿಂದ ಆರು ವರ್ಷದ ಬಾಲಕಿ ಸಾವು, ಶಾಲೆಯಲ್ಲಿ ನೀಡಿದ ಪೌಷ್ಟಿಕಾಂಶದ ಮಾತ್ರೆಯೇ ಕಾರಣ

ಆರು ವರ್ಷದ ಬಾಲಕಿ ಹೊಟ್ಟೆ ನೋವಿನಿಂದ ಸಾವನ್ನಪ್ಪಿದ್ದು, ಶಾಲೆಯಲ್ಲಿ ನೀಡಿದ ಪೌಷ್ಟಿಕಾಂಶದ ಮಾತ್ರೆಯೇ ಇದಕ್ಕೆ ಕಾರಣ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ. ತಮಿಳುನಾಡು ಕೊಯಮತ್ತೂರಿನ ಸಿಂಗಾನಲ್ಲೂರಿನ ಕಾರ್ಪೊರೇಷನ್ ಶಾಲೆಯಲ್ಲಿ 1ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಹೊಟ್ಟೆ ನೋವಿನಿಂದ ಆರು ವರ್ಷದ ಬಾಲಕಿ ಸಾವು, ಶಾಲೆಯಲ್ಲಿ ನೀಡಿದ ಪೌಷ್ಟಿಕಾಂಶದ ಮಾತ್ರೆಯೇ ಕಾರಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2024 | 12:13 PM

Share

ಕೊಯಮತ್ತೂರು, ಮಾ.9: ತಮಿಳುನಾಡು ಕೊಯಮತ್ತೂರಿನ ಸಿಂಗಾನಲ್ಲೂರಿನ ಕಾರ್ಪೊರೇಷನ್ ಶಾಲೆಯಲ್ಲಿ 1ನೇ ತರಗತಿಯಲ್ಲಿ ಓದುತ್ತಿದ್ದ, ಆರು ವರ್ಷದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಇದೀಗ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಶಾಲೆಯಲ್ಲಿ ನೀಡಿದ ಪೌಷ್ಟಿಕಾಂಶದ ಮಾತ್ರೆ ಸೇವಿಸಿಯೇ ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಆಕೆಯ ಸಾವಿಗೆ ಕಾರಣ ಏನು ಎಂಬ ಬಗ್ಗೆ ಪತ್ತೆ ಮಾಡಲು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಬಾಲಕಿಯನ್ನು ಕೊಯಮತ್ತೂರು ನಗರದ ವರದರಾಜಪುರಂನ ಲಕ್ಷ್ಮಿ ಮಿಲ್ ಕಾಲೋನಿಯ ರಾಜಮಣಿ ಮತ್ತು ಭುವನೇಶ್ವರಿ ದಂಪತಿಯ ಪುತ್ರಿ ದಿಯಾ ಶ್ರೀ ಎಂದು ಹೇಳಲಾಗಿದೆ. ಪೊಲೀಸರಿಗೆ ನೀಡಿದ ದೂರಿನಲ್ಲಿ, ಬಾಲಕಿಯ ಪೋಷಕರು ಶಾಲೆಯಲ್ಲಿ ವಿತರಿಸಲಾದ ಪೌಷ್ಟಿಕಾಂಶದ ಮಾತ್ರೆಯಿಂದಲ್ಲೇ (ಫೆರಸ್ ಸಲ್ಫೇಟ್ ಮಾತ್ರೆಯೊಂದಿಗೆ ಫೋಲಿಕ್ ಆಮ್ಲ) ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮಂಗಳವಾರದಿಂದ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಮನೆಯಲ್ಲಿ ಅಜವೈನ್ (ಕೇರಂ ಸೀಡ್) ನೀರನ್ನು ನೀಡಲಾಯಿತು. ರಾತ್ರಿ ನೋವು ಹೆಚ್ಚಾದ ಕಾರಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (CMCH) ಸ್ಥಳಾಂತರಿಸಲಾಯಿತು. ಆಕೆಯ ಹೊಟ್ಟೆಯಲ್ಲಿ ಗಡ್ಡೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಶಾಲಾ ಆಡಳಿತ ಮಂಡಳಿ ನೀಡುವ ಪೌಷ್ಠಿಕಾಂಶದ ಮಾತ್ರೆ ಸೇವಿಸುತ್ತಿದ್ದಾಳೆ ಎಂದು ಆಕೆಯ ಪೋಷಕರು ತಿಳಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿಯಾ ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವೇಗವಾಗಿ ಬಂದ ಆಟೋ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವು, ಮೂವರಿಗೆ ಗಾಯ

ಸಿಎಂಸಿಎಚ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಶವಪರೀಕ್ಷೆ ವರದಿ ಇನ್ನೂ ಬರಬೇಕಿದ್ದು, ವರದಿ ಆಧರಿಸಿ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗಾನಲ್ಲೂರು ಪೊಲೀಸರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್