AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ರಾಮನವಮಿ ದಿನದಂದೇ ಗುಜರಾತ್‌ನ ಅಹಮದಾಬಾದ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌ ವೇನಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್​ಗೆ ಕಾರು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ
TV9 Web
| Edited By: |

Updated on: Apr 17, 2024 | 7:01 PM

Share

ಅಹಮದಾಬಾದ್‌, (ಏಪ್ರಿಲ್ 17): ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ (Road Accident)ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲಾ 10 ಮಂದಿಯೂ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಗುಜರಾತ್‌ನ( Gujarat)  ಅಹಮದಾಬಾದ್‌ ಬಳಿ ನಡೆದಿದೆ. ಇಂದು (ಏಪ್ರಿಲ್ 17) ಸಂಜೆ ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌ ವೇನಲ್ಲಿ (Ahmedabad-Vadodara Expressway) ಈ ದುರ್ಘಟನೆ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಇನ್ನು ವಿಷಯ ತಿಳಿಯಿತ್ತಿದ್ದಂತೆಯೇ ಪೊಲೀಸರು ಹಾಗೂ ಖೇಡಾ ಜಿಲ್ಲೆಯ ಎಸ್ಪಿ ಘಟನಾ ಸ್ಥಳಕ್ಕೆ  ದೌಡಾಯಿಸಿದ್ದು,  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್‌ ಕಡೆಗೆ ಹೊರಟಿದ್ದ ಕಾರು ನದಿಯಾಡ್‌ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಾಂಕರ್‌ನ ಹಿಂಬದಿಗೆ ಹೋಗಿ  ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಒಟ್ಟು 10 ಜನರ ಪೈಕಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನುಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ ಎಂದು ಖೇಡಾ ಜಿಲ್ಲಾ ಎಸ್ಪಿ ರಾಜೇಶ್‌ ಗಾಧ್ವಿ ತಿಳಿಸಿದ್ದಾರೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ಶವಗಳನ್ನ ಸ್ಥಳೀಯರ ಸಹಕಾರದಿಂದ ಜಿಲ್ಲಾಡಳಿತದ ಅಧಿಕಾರಿಗಳು ಹೊರ ತೆಗೆದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಿವರವನ್ನು ಪಡೆಯಲಾಗುತ್ತಿದ್ದು, ಅವರ ಕುಟುಂಬದವರಿಗೂ ಮಾಹಿತಿ ನೀಡುವ ಕೆಲಸ ನಡೆದಿದೆ. ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಲು ತಂಡಗಳನ್ನು ರಚಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ