AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ