AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ