ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು

ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರಿ ದೊಡ್ಡ ಅಪಘಾತವನ್ನು ತಪ್ಪಿಸಿದ್ದಾರೆ. ಅಮರನಾಥದಿಂದ ಹೋಶಿಯಾರ್‌ಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಬ್ರೇಕ್‌ ವೈಫಲ್ಯ ಉಂಟಾಗಿದೆ ಎಂದು ವರದಿಯಾಗಿದೆ. ಯಾತ್ರಿಕರು ಪಂಜಾಬಿನವರಾಗಿದ್ದರು. ಬನಿಹಾಲ್ ಬಳಿಯ ನಚ್ಲಾನಾವನ್ನು ತಲುಪುವಾಗ ಅದರ ಬ್ರೇಕ್ ವಿಫಲವಾದ ಕಾರಣ ಚಾಲಕ ವಾಹನವನ್ನು ನಿಲ್ಲಿಸಲು ವಿಫಲರಾಗಿದ್ದರು.

ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು
ಅಮರನಾಥ ಯಾತ್ರೆ ಬಸ್
Follow us
|

Updated on: Jul 03, 2024 | 9:35 AM

ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್​ನಿಂದ ಹಾರಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂತಿರುಗುತ್ತಿದ್ದ ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತ ಬಸ್, ಬ್ರೇಕ್ ವೈಫಲ್ಯದಿಂದಾಗಿ ಬನಿಹಾಲ್ ಬಳಿಯ ನಚ್ಲಾನಾದಲ್ಲಿ ನಿಲ್ಲಿಸಲು ವಿಫಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಹಾಗೂ ಪೊಲೀಸ್​ ಸಿಬ್ಬಂದಿ ಬಸ್​ ಅನ್ನು ಕಷ್ಟಪಟ್ಟು ತಡೆದಿದ್ದಾರೆ, ಹೀಗಾಗಿ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ ಬಸ್​ನಿಂದ ಹತ್ತು ಮಂದಿ ಕೆಳಗೆ ಹಾರಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರು ಮಹಿಳೆಯರು ಒಂದು ಮಗು ಕೂಡ ಇತ್ತು.

ಚಲಿಸುತ್ತಿದ್ದ ವಾಹನದಿಂದ ಯಾತ್ರಾರ್ಥಿಗಳು ಜಿಗಿಯುತ್ತಿರುವುದನ್ನು ಗಮನಿಸಿದ ಸೇನಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದರು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಬಸ್‌ನ ಟೈರ್‌ಗಳ ಕೆಳಗೆ ಕಲ್ಲುಗಳನ್ನು ಇಟ್ಟು ಹೊಳೆಗೆ ಬೀಳದಂತೆ ತಡೆದಿದ್ದಾರೆ. ತಕ್ಷಣ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: Bengaluru: ಅಪಘಾತ ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ

ಮೇ ತಿಂಗಳಲ್ಲಿ, ಜಮ್ಮುವಿನ ಅಖ್ನೂರ್‌ನಲ್ಲಿ ಬಸ್ಸು ಕಮರಿಗೆ ಬಿದ್ದ ಪರಿಣಾಮ 22 ಜನರು ಸಾವನ್ನಪ್ಪಿದರು ಮತ್ತು ಕನಿಷ್ಠ 50 ಜನರು ಗಾಯಗೊಂಡಿದ್ದರು .

ಉತ್ತರ ಪ್ರದೇಶ ಮತ್ತು ಹರಿಯಾಣದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಕಿಕ್ಕಿರಿದು ತುಂಬಿತ್ತು ಮತ್ತು 80 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ರೈಸಿ ಜಿಲ್ಲೆಯ ಪ್ರಸಿದ್ಧ ಶಿವ ಖೋರಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಜಮ್ಮು-ಪೂಂಚ್ ಹೆದ್ದಾರಿಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ