ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು

ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರಿ ದೊಡ್ಡ ಅಪಘಾತವನ್ನು ತಪ್ಪಿಸಿದ್ದಾರೆ. ಅಮರನಾಥದಿಂದ ಹೋಶಿಯಾರ್‌ಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಬ್ರೇಕ್‌ ವೈಫಲ್ಯ ಉಂಟಾಗಿದೆ ಎಂದು ವರದಿಯಾಗಿದೆ. ಯಾತ್ರಿಕರು ಪಂಜಾಬಿನವರಾಗಿದ್ದರು. ಬನಿಹಾಲ್ ಬಳಿಯ ನಚ್ಲಾನಾವನ್ನು ತಲುಪುವಾಗ ಅದರ ಬ್ರೇಕ್ ವಿಫಲವಾದ ಕಾರಣ ಚಾಲಕ ವಾಹನವನ್ನು ನಿಲ್ಲಿಸಲು ವಿಫಲರಾಗಿದ್ದರು.

ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು
ಅಮರನಾಥ ಯಾತ್ರೆ ಬಸ್

Updated on: Jul 03, 2024 | 9:35 AM

ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್​ನಿಂದ ಹಾರಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂತಿರುಗುತ್ತಿದ್ದ ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತ ಬಸ್, ಬ್ರೇಕ್ ವೈಫಲ್ಯದಿಂದಾಗಿ ಬನಿಹಾಲ್ ಬಳಿಯ ನಚ್ಲಾನಾದಲ್ಲಿ ನಿಲ್ಲಿಸಲು ವಿಫಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಹಾಗೂ ಪೊಲೀಸ್​ ಸಿಬ್ಬಂದಿ ಬಸ್​ ಅನ್ನು ಕಷ್ಟಪಟ್ಟು ತಡೆದಿದ್ದಾರೆ, ಹೀಗಾಗಿ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಲಿಸುತ್ತಿದ್ದ ಬಸ್​ನಿಂದ ಹತ್ತು ಮಂದಿ ಕೆಳಗೆ ಹಾರಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರು ಮಹಿಳೆಯರು ಒಂದು ಮಗು ಕೂಡ ಇತ್ತು.

ಚಲಿಸುತ್ತಿದ್ದ ವಾಹನದಿಂದ ಯಾತ್ರಾರ್ಥಿಗಳು ಜಿಗಿಯುತ್ತಿರುವುದನ್ನು ಗಮನಿಸಿದ ಸೇನಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದರು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಬಸ್‌ನ ಟೈರ್‌ಗಳ ಕೆಳಗೆ ಕಲ್ಲುಗಳನ್ನು ಇಟ್ಟು ಹೊಳೆಗೆ ಬೀಳದಂತೆ ತಡೆದಿದ್ದಾರೆ.
ತಕ್ಷಣ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: Bengaluru: ಅಪಘಾತ ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ

ಮೇ ತಿಂಗಳಲ್ಲಿ, ಜಮ್ಮುವಿನ ಅಖ್ನೂರ್‌ನಲ್ಲಿ ಬಸ್ಸು ಕಮರಿಗೆ ಬಿದ್ದ ಪರಿಣಾಮ 22 ಜನರು ಸಾವನ್ನಪ್ಪಿದರು ಮತ್ತು ಕನಿಷ್ಠ 50 ಜನರು ಗಾಯಗೊಂಡಿದ್ದರು .

ಉತ್ತರ ಪ್ರದೇಶ ಮತ್ತು ಹರಿಯಾಣದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಕಿಕ್ಕಿರಿದು ತುಂಬಿತ್ತು ಮತ್ತು 80 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ರೈಸಿ ಜಿಲ್ಲೆಯ ಪ್ರಸಿದ್ಧ ಶಿವ ಖೋರಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಜಮ್ಮು-ಪೂಂಚ್ ಹೆದ್ದಾರಿಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us