AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 08, 2021 | 12:43 PM

Share

ಹೈದರಾಬಾದ್: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿರುವ ಕ್ವಾರಿಯಲ್ಲಿ ಕಲ್ಲು ಒಡೆಯುವ ಸ್ಫೋಟಕ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಕೆಲಸಗಾರರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಇಲ್ಲಿ ಕೆಲಸಗಾರರು ಸ್ಫೋಟಕವನ್ನು ಅಳವಡಿಸಲು ಗ್ರಾನೈಟ್​​ನ್ನು ಕೊರೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಸದ್ಯ 10 ಮೃತದೇಹಗಳಷ್ಟೇ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ, ಪೊರುಮಾಮಿಲ್ಲಾ ಠಾಣೆ ಪೊಲೀಸ್ ಅಧಿಕಾರಿ, ಸ್ಫೋಟವಾಗಿದ್ದು ಗ್ರಾನೈಟ್ ಕೊರೆಯುವಾಗ ಎಂದು ಹೇಳಲಾಗುತ್ತಿದೆ. ಆದರೆ ನಮ್ಮ ತನಿಖೆ ಪ್ರಕಾರ ಸ್ಫೋಟಕಗಳನ್ನು ಕ್ವಾರಿಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದರಲ್ಲಿ ಮೃತಪಟ್ಟವರು ಬಹುತೇಕ ಪುಲಿವೆಂದುಲಾದವರೇ ಆಗಿದ್ದಾರೆ. ಈ ಗ್ರಾಮ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್​ ರೆಡ್ಡಿಯವರ ಸ್ವಗ್ರಾಮವೂ ಆಗಿದೆ. ಇನ್ನು ಜಗನ್​ಮೋಹನ್​ ರೆಡ್ಡಿಯವರು ಘಟನೆಯ ಸಂಪೂರ್ಣ ವಿವರವನ್ನು ಪಡೆದಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಕೊವಿಡ್​ ಚಿಕಿತ್ಸೆಗೆ ವೈದ್ಯರ ಅಭಾವ; ತಾತ್ಕಾಲಿಕ ನೇಮಕಾತಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಭಾರತದ ಜನರ ಕ್ಷೇಮ ಅಮೆರಿಕಕ್ಕೆ ತುಂಬ ಮುಖ್ಯ, ಅವರೊಂದಿಗೆ ನಾವಿದ್ದೇವೆ: ಕಮಲಾ ಹ್ಯಾರಿಸ್​

(10 killed in blast which at kadapa Quarry in Andhra Pradesh)

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!