AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 08, 2021 | 12:43 PM

Share

ಹೈದರಾಬಾದ್: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿರುವ ಕ್ವಾರಿಯಲ್ಲಿ ಕಲ್ಲು ಒಡೆಯುವ ಸ್ಫೋಟಕ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಕೆಲಸಗಾರರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಇಲ್ಲಿ ಕೆಲಸಗಾರರು ಸ್ಫೋಟಕವನ್ನು ಅಳವಡಿಸಲು ಗ್ರಾನೈಟ್​​ನ್ನು ಕೊರೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಸದ್ಯ 10 ಮೃತದೇಹಗಳಷ್ಟೇ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ, ಪೊರುಮಾಮಿಲ್ಲಾ ಠಾಣೆ ಪೊಲೀಸ್ ಅಧಿಕಾರಿ, ಸ್ಫೋಟವಾಗಿದ್ದು ಗ್ರಾನೈಟ್ ಕೊರೆಯುವಾಗ ಎಂದು ಹೇಳಲಾಗುತ್ತಿದೆ. ಆದರೆ ನಮ್ಮ ತನಿಖೆ ಪ್ರಕಾರ ಸ್ಫೋಟಕಗಳನ್ನು ಕ್ವಾರಿಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದರಲ್ಲಿ ಮೃತಪಟ್ಟವರು ಬಹುತೇಕ ಪುಲಿವೆಂದುಲಾದವರೇ ಆಗಿದ್ದಾರೆ. ಈ ಗ್ರಾಮ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್​ ರೆಡ್ಡಿಯವರ ಸ್ವಗ್ರಾಮವೂ ಆಗಿದೆ. ಇನ್ನು ಜಗನ್​ಮೋಹನ್​ ರೆಡ್ಡಿಯವರು ಘಟನೆಯ ಸಂಪೂರ್ಣ ವಿವರವನ್ನು ಪಡೆದಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಕೊವಿಡ್​ ಚಿಕಿತ್ಸೆಗೆ ವೈದ್ಯರ ಅಭಾವ; ತಾತ್ಕಾಲಿಕ ನೇಮಕಾತಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಭಾರತದ ಜನರ ಕ್ಷೇಮ ಅಮೆರಿಕಕ್ಕೆ ತುಂಬ ಮುಖ್ಯ, ಅವರೊಂದಿಗೆ ನಾವಿದ್ದೇವೆ: ಕಮಲಾ ಹ್ಯಾರಿಸ್​

(10 killed in blast which at kadapa Quarry in Andhra Pradesh)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ