AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಲಕ್ಷ ಉದ್ಯೋಗ, 20 ಲಕ್ಷ ಉದ್ಯೋಗಾವಕಾಶ: ಬಿಹಾರ ಸಿಎಂ ನಿತೀಶ್​​ ಕುಮಾರ್​​ ಘೋಷಣೆ

Nitish Kumar ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ.

10 ಲಕ್ಷ ಉದ್ಯೋಗ,  20 ಲಕ್ಷ ಉದ್ಯೋಗಾವಕಾಶ: ಬಿಹಾರ ಸಿಎಂ ನಿತೀಶ್​​ ಕುಮಾರ್​​ ಘೋಷಣೆ
ನಿತೀಶ್ ಕುಮಾರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 1:23 PM

Share

ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav)ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar)  ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ (Independence Day) ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ( ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪ್ರತಿಪಕ್ಷದಲ್ಲಿದ್ದಾಗ 2020 ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ 10 ಲಕ್ಷ ಉದ್ಯೋಗಗಳ ಚುನಾವಣಾ ಭರವಸೆಯ ಬಗ್ಗೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಯುವ ಆರ್‌ಜೆಡಿ ನಾಯಕ ಈ ಹಿಂದೆ ತನ್ನ ಉದ್ಯೋಗ ಭರವಸೆಗೆ ಮುಖ್ಯಮಂತ್ರಿಯಿಂದ ಒಪ್ಪಿಗೆ ಸಿಕ್ಕಿದೆ ಎಂದು ಪ್ರತಿಪಾದಿಸಿದ್ದರು.

ತಮ್ಮ ಭರವಸೆಯ ಬಗ್ಗೆ ಮುಖ್ಯಮಂತ್ರಿಯಿಂದ ಸ್ಪಷ್ಟವಾದ ಸಾರ್ವಜನಿಕ ಘೋಷಣೆಯ ನಂತರ ತೇಜಸ್ವಿ ಯಾದವ್, ಮುಖ್ಯಮಂತ್ರಿ ಮಾಡಿದ ಈ “ಬೃಹತ್ ಘೋಷಣೆ” ಮಾಧ್ಯಮಗಳು ಗಮನಹರಿಸಬೇಕಾದ “ನೈಜ ವಿಷಯ”.  ಅದನ್ನು ಮಾಡಲು ಎರಡು ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Mon, 15 August 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು