AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಸೋಂಕು; ಹೀಗೆ ಆದರೆ ಕಠಿಣ ನಿರ್ಬಂಧ ಎಂದ ಡಿಸಿಎಂ ಅಜಿತ್ ಪವಾರ್​

ಶುಕ್ರವಾರ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಶೋಮತಿ ಠಾಕೂರ್​ ತಮಗೆ ಕೊವಿಡ್​ 19ಸೋಂಕು ತಗುಲಿದ್ದು, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದರು.

ಮಹಾರಾಷ್ಟ್ರದಲ್ಲಿ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಸೋಂಕು; ಹೀಗೆ ಆದರೆ ಕಠಿಣ ನಿರ್ಬಂಧ ಎಂದ ಡಿಸಿಎಂ ಅಜಿತ್ ಪವಾರ್​
ಅಜಿತ್ ಪವಾರ್​
TV9 Web
| Edited By: |

Updated on:Jan 01, 2022 | 12:54 PM

Share

ಮಹಾರಾಷ್ಟ್ರದಲ್ಲಿ ಕೊವಿಡ್ 19 (Covid 19) ಪ್ರಸರಣ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಸದ್ಯ ರಾಜ್ಯಾದ್ಯಂತ ಒಟ್ಟು 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿದೆ ಎಂದು ಮಹಾ ಉಪಮುಖ್ಯಮಂತ್ರಿ ಅಜಿತ್​ ಪವಾರ್ (DCM Ajit Pawar) ಇಂದು ತಿಳಿಸಿದ್ದಾರೆ.  ರಾಜ್ಯದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಠಿಣ ನಿರ್ಬಂಧ ವಿಧಿಸಲಾಗುವುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಕೊರೊನಾ ಸೋಂಕಿತರ ಸಂಖ್ಯೆ ಹೀಗೆ ಏರಿಕೆಯಾಗುತ್ತಲೇ ಹೋದರೆ ಕಠಿಣ ನಿರ್ಬಂಧ ವಿಧಿಸುವುದು ಅನಿವಾರ್ಯವಾಗುತ್ತದೆ. ಹಾಗೆ, ಮಾಡಬಾರದು ಎಂದಾದರೆ ಜನರು ಕೊವಿಡ್ 19 ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು ಎಂದು ಅವರು ಹೇಳಿದ್ದಾರೆ.  ಇನ್ನು ಮಹಾರಾಷ್ಟ್ರದಲ್ಲಿ ಕಳೆದ 11-12 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮಹಾರಾಷ್ಟ್ರ ಸಚಿವ ವಿಜಯ್​ ವಡೆತ್ತಿವಾರ್ ಕೂಡ, ಮತ್ತೆ ಲಾಕ್​ಡೌನ್​ ಹೇರಬಹುದು ಎಂಬ ಸೂಚನೆ ನೀಡಿದ್ದಾರೆ.  

ಏರಿಕೆಯಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣ ಮತ್ತು ಹೊಸವರ್ಷ ಸಮೀಪಿಸುತ್ತಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಡಿಸೆಂಬರ್​ 30ರಂದೇ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಅದರ ಅನ್ವಯ ರಾಜ್ಯದಲ್ಲಿ  ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಿರಲಿದೆ.  ಮಹಾರಾಷ್ಟ್ರದಲ್ಲಿ ಶುಕ್ರವಾರ 8067 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಅದರಲ್ಲಿ ಮುಂಬೈನಲ್ಲೇ 5428 ಅಂದರೆ ಶೇ.67.2ರಷ್ಟು ಕೇಸ್​ಗಳು ದಾಖಲಾಗಿವೆ. 454 ಒಮಿಕ್ರಾನ್ ಸೋಂಕಿತರು ಇದ್ದಾರೆ.

ಶುಕ್ರವಾರ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಶೋಮತಿ ಠಾಕೂರ್​ ತಮಗೆ ಕೊವಿಡ್​ 19ಸೋಂಕು ತಗುಲಿದ್ದು, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದರು.  ಅಷ್ಟೇ ಅಲ್ಲ, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​ 19 ತಪಾಸಣೆ ಮಾಡಿಸಿಕೊಳ್ಳಿ ಎಂದೂ ಹೇಳಿದ್ದರು. ಅದರೊಂದಿಗೆ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗಿತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಹೇಳಿದ್ದರು. ಆದರೆ ಅದರ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​, ಇದೀಗ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಅಧಿಕ ಶಾಸಕರಿಗೆ ಕೊರೊನಾ ತಗುಲಿದ್ದಾಗಿ ತಿಳಿಸಿದ್ದಾರೆ. ಇದೇ ಕಾರಣಕ್ಕೆ ನಾವು ವಿಧಾನಸಭೆ ಅಧಿವೇಶನವನ್ನು ಅರ್ಧಕ್ಕೇ ನಿಲ್ಲಿಸಿದ್ದಾಗಿ ಹೇಳಿದ್ದಾರೆ.

ಇದನ್ನೂ ಓದಿ: Moto G31: ಹೊಸ ವರ್ಷಕ್ಕೆ ಬಿಗ್ ಶಾಕ್: ಈ ಎರಡು ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 3000 ರೂ. ಏರಿಕೆ

Published On - 12:47 pm, Sat, 1 January 22

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ