AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸಿವಿಲ್​ ಆಸ್ಪತ್ರೆಯ ಕೊವಿಡ್​ ವಾರ್ಡ್​​ನಲ್ಲಿ ಬೆಂಕಿ; 10 ರೋಗಿಗಳ ದುರ್ಮರಣ

ಉಳಿದ ರೋಗಿಗಳನ್ನು ಸಮೀಪದ ಇನ್ನೊಂದು ಆಸ್ಪತ್ರೆಗೆ ಕೊವಿಡ್​ 19 ವಾರ್ಡ್​ಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಹಿತಿ ನೀಡಿದ್ದಾರೆ.  ಇನ್ನು ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.

ಮಹಾರಾಷ್ಟ್ರ ಸಿವಿಲ್​ ಆಸ್ಪತ್ರೆಯ ಕೊವಿಡ್​ ವಾರ್ಡ್​​ನಲ್ಲಿ ಬೆಂಕಿ; 10 ರೋಗಿಗಳ ದುರ್ಮರಣ
ಬೆಂಕಿ ಕಾಣಿಸಿಕೊಂಡ ಕೊವಿಡ್​ 19 ವಾರ್ಡ್​​
TV9 Web
| Edited By: |

Updated on:Nov 06, 2021 | 3:08 PM

Share

ಅಹ್ಮದ್​ನಗರ: ಮಹಾರಾಷ್ಟ್ರದ ಅಹ್ಮದ್​ನಗರದಲ್ಲಿನ ಸಿವಿಲ್ ಆಸ್ಪತ್ರೆಯ ಐಸಿಯುದಲ್ಲಿ ಬೆಂಕಿ ಹೊತ್ತಿ ಉರಿದು ಸುಮಾರು 10 ರೋಗಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ಇನ್ನೊಬ್ಬ ರೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಐಸಿಯುದಲ್ಲಿ ಕಾಣಿಸಿಕೊಂಡ ಬೆಂಕಿ ಸುಮಾರು 17 ರೋಗಿಗಳು ಅಡ್ಮಿಟ್​ ಆಗಿದ್ದ ಕೊವಿಡ್​ 19 ವಾರ್ಡ್​ಗೆ ಪಸರಿಸಿದೆ. ಅಲ್ಲಿಂದ 10 ಮಂದಿ ಮೃತಪಟ್ಟಿದ್ದು, ಇನ್ನೊಬ್ಬ ರೋಗಿ ಗಂಭೀರವಾಗಿ ಗಾಯಗೊಂಡಿದ್ದರು. 

ಉಳಿದ ರೋಗಿಗಳನ್ನು ಸಮೀಪದ ಇನ್ನೊಂದು ಆಸ್ಪತ್ರೆಗೆ ಕೊವಿಡ್​ 19 ವಾರ್ಡ್​ಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಹಿತಿ ನೀಡಿದ್ದಾರೆ.  ಇನ್ನು ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.ಆದರೆ ಶಾರ್ಟ್​ಸರ್ಕ್ಯೂಟ್​ನಿಂದಲೇ ಅಗ್ನಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ. ಹಾಗೇ, ಈಗಾಗಲೇ ಬೆಂಕಿಗೆ ಕಾರಣವೇನು ಎಂಬ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಇನ್ನು ಅಹ್ಮದ್​ನಗರ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿ, ಎನ್​ಸಿಪಿ ನಾಯಕ ಸಂಗ್ರಾಮ್​ ಜಗ್​ತಾಪ್​ ಈ ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಪ್ರಕರಣದ ತನಿಖೆಗಾಗಿ ಜಿಲ್ಲಾ ಸಮಿತಿ ರಚನೆ ಮಾಡಬಾರದು. ರಾಜ್ಯ ಸರ್ಕಾರದಿಂದ ಸಮಿತಿ ರಚನೆಯಾಗಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಈ ಹೊತ್ತಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಹಾಗೇ, ಈ ಘಟನೆ ತುಂಬ ಶಾಕಿಂಗ್​ ಮತ್ತು ಮನಸಿಗೆ ತಳಮಳ ನೀಡುತ್ತಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಹೇಳಿದ್ದಾರೆ.

ಇದೇ ವರ್ಷ ಏಪ್ರಿಲ್​ 15ರಂದು ಮಹಾರಾಷ್ಟ್ರದ ಪಾಲ್ಗಾರ್​​ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ದುರ್ಘಟನೆ ನಡೆದಿತ್ತು. ಈ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡು ಹಲವು ಕೊವಿಡ್​ 19 ರೋಗಿಗಳು ಸಾವನ್ನಪ್ಪಿದ್ದರು.

ಇದನ್ನೂ ಓದಿ: Ravichandran Ashwin: ನ್ಯೂಜಿಲೆಂಡ್ ವಿರುದ್ಧ ಗೆಲ್ಲಲು ಅಫ್ಘಾನಿಸ್ತಾನಕ್ಕೆ ದೊಡ್ಡ ಆಫರ್ ಕೊಟ್ಟ ರವಿಚಂದ್ರನ್ ಅಶ್ವಿನ್: ಏನದು?

ಹಾಸನ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ

Published On - 2:23 pm, Sat, 6 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ