AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ; ಉತ್ತರ ಪ್ರದೇಶದಲ್ಲಿ 10 ಜನರ ಬಂಧನ

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಅದನ್ನು ಡೆಂಗ್ಯೂ ರೋಗಿಗಳ ಕುಟುಂಬಸ್ಥರಿಗೆ ಮಾರಾಟ ಮಾಡುತ್ತಿದ್ದರು.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ;  ಉತ್ತರ ಪ್ರದೇಶದಲ್ಲಿ 10 ಜನರ ಬಂಧನ
ನಕಲಿ ಪ್ಲೇಟ್​ಲೆಟ್ ಮಾರುತ್ತಿದ್ದ ತಂಡದ ಬಂಧನ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 22, 2022 | 11:32 AM

Share

ಲಕ್ನೋ: ಪ್ಲಾಸ್ಮಾ ಬದಲು ಡೆಂಗ್ಯೂ (Dengue) ರೋಗಿಯೊಬ್ಬರಿಗೆ ಮೂಸಂಬಿ ರಸವನ್ನು ನೀಡಿದ ಹಿನ್ನೆಲೆಯಲ್ಲಿ ಆ ರೋಗಿ ಮೃತಪಟ್ಟಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಡೆಂಗ್ಯೂ ರೋಗಿಯ ಕುಟುಂಬಸ್ಥರಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 10 ಮಂದಿಯನ್ನು ಉತ್ತರ ಪ್ರದೇಶದ  (Uttar Pradesh) ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಇವೆರಡೂ ರಕ್ತದ ಅಂಶಗಳಾಗಿವೆ, ಆದರೆ ಇವೆರಡನ್ನೂ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಡೆಂಗ್ಯೂ ಪ್ರಕರಣಗಳಲ್ಲಿ ಪ್ಲೇಟ್‌ಲೆಟ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್​​ನಲ್ಲಿ ಮೂಸಂಬಿ ರಸ ನೀಡಿರುವುದಾಗಿ ಆರೋಪ, ರೋಗಿ ಸಾವು

ಪ್ರಯಾಗರಾಜ್‌ನಲ್ಲಿ ಜ್ಯೂಸ್ ಅನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸುವ ಬಗ್ಗೆ ನಾವು ಈ ಆರೋಪಿಗಳನ್ನು ಪ್ರಶ್ನಿಸಿದ್ದೇವೆ. ಆದರೆ ಅವರು ಹಾಗೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಅದರ ಬದಲಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸಲಾಗುತ್ತಿದೆ ಎಂದು ಒಪ್ಪಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ಹೇಳಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸಾಕಷ್ಟು ಹರಡುತ್ತಿದೆ. ಇದರಿಂದ ಪ್ಲೇಟ್‌ಲೆಟ್‌ಗಳ ಬೇಡಿಕೆ ಹೆಚ್ಚಾಗಿದೆ. ಈ ಆರೋಪಿಗಳು ಅದರ ಲಾಭವನ್ನು ಪಡೆದುಕೊಳ್ಳುತ್ತಿದ್ದರು. ಪ್ಲೇಟ್​ಲೆಟ್ ನೀಡುವುದಾಗಿ ನಂಬಿಸಿ ಬಡವರನ್ನು ವಂಚಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಅಕ್ರಮವಾಗಿ ರಕ್ತ ಪೂರೈಕೆ ಮಾಡಿದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ 12 ಜನರನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ