Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ; ಉತ್ತರ ಪ್ರದೇಶದಲ್ಲಿ 10 ಜನರ ಬಂಧನ

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಅದನ್ನು ಡೆಂಗ್ಯೂ ರೋಗಿಗಳ ಕುಟುಂಬಸ್ಥರಿಗೆ ಮಾರಾಟ ಮಾಡುತ್ತಿದ್ದರು.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ;  ಉತ್ತರ ಪ್ರದೇಶದಲ್ಲಿ 10 ಜನರ ಬಂಧನ
ನಕಲಿ ಪ್ಲೇಟ್​ಲೆಟ್ ಮಾರುತ್ತಿದ್ದ ತಂಡದ ಬಂಧನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 22, 2022 | 11:32 AM

ಲಕ್ನೋ: ಪ್ಲಾಸ್ಮಾ ಬದಲು ಡೆಂಗ್ಯೂ (Dengue) ರೋಗಿಯೊಬ್ಬರಿಗೆ ಮೂಸಂಬಿ ರಸವನ್ನು ನೀಡಿದ ಹಿನ್ನೆಲೆಯಲ್ಲಿ ಆ ರೋಗಿ ಮೃತಪಟ್ಟಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಡೆಂಗ್ಯೂ ರೋಗಿಯ ಕುಟುಂಬಸ್ಥರಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 10 ಮಂದಿಯನ್ನು ಉತ್ತರ ಪ್ರದೇಶದ  (Uttar Pradesh) ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಇವೆರಡೂ ರಕ್ತದ ಅಂಶಗಳಾಗಿವೆ, ಆದರೆ ಇವೆರಡನ್ನೂ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಡೆಂಗ್ಯೂ ಪ್ರಕರಣಗಳಲ್ಲಿ ಪ್ಲೇಟ್‌ಲೆಟ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್​​ನಲ್ಲಿ ಮೂಸಂಬಿ ರಸ ನೀಡಿರುವುದಾಗಿ ಆರೋಪ, ರೋಗಿ ಸಾವು

ಪ್ರಯಾಗರಾಜ್‌ನಲ್ಲಿ ಜ್ಯೂಸ್ ಅನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸುವ ಬಗ್ಗೆ ನಾವು ಈ ಆರೋಪಿಗಳನ್ನು ಪ್ರಶ್ನಿಸಿದ್ದೇವೆ. ಆದರೆ ಅವರು ಹಾಗೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಅದರ ಬದಲಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸಲಾಗುತ್ತಿದೆ ಎಂದು ಒಪ್ಪಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ಹೇಳಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸಾಕಷ್ಟು ಹರಡುತ್ತಿದೆ. ಇದರಿಂದ ಪ್ಲೇಟ್‌ಲೆಟ್‌ಗಳ ಬೇಡಿಕೆ ಹೆಚ್ಚಾಗಿದೆ. ಈ ಆರೋಪಿಗಳು ಅದರ ಲಾಭವನ್ನು ಪಡೆದುಕೊಳ್ಳುತ್ತಿದ್ದರು. ಪ್ಲೇಟ್​ಲೆಟ್ ನೀಡುವುದಾಗಿ ನಂಬಿಸಿ ಬಡವರನ್ನು ವಂಚಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಅಕ್ರಮವಾಗಿ ರಕ್ತ ಪೂರೈಕೆ ಮಾಡಿದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ 12 ಜನರನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ