AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ; ಉತ್ತರ ಪ್ರದೇಶದಲ್ಲಿ 10 ಜನರ ಬಂಧನ

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಅದನ್ನು ಡೆಂಗ್ಯೂ ರೋಗಿಗಳ ಕುಟುಂಬಸ್ಥರಿಗೆ ಮಾರಾಟ ಮಾಡುತ್ತಿದ್ದರು.

ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟ ದಂಧೆ;  ಉತ್ತರ ಪ್ರದೇಶದಲ್ಲಿ 10 ಜನರ ಬಂಧನ
ನಕಲಿ ಪ್ಲೇಟ್​ಲೆಟ್ ಮಾರುತ್ತಿದ್ದ ತಂಡದ ಬಂಧನ
TV9 Web
| Edited By: |

Updated on: Oct 22, 2022 | 11:32 AM

Share

ಲಕ್ನೋ: ಪ್ಲಾಸ್ಮಾ ಬದಲು ಡೆಂಗ್ಯೂ (Dengue) ರೋಗಿಯೊಬ್ಬರಿಗೆ ಮೂಸಂಬಿ ರಸವನ್ನು ನೀಡಿದ ಹಿನ್ನೆಲೆಯಲ್ಲಿ ಆ ರೋಗಿ ಮೃತಪಟ್ಟಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಡೆಂಗ್ಯೂ ರೋಗಿಯ ಕುಟುಂಬಸ್ಥರಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 10 ಮಂದಿಯನ್ನು ಉತ್ತರ ಪ್ರದೇಶದ  (Uttar Pradesh) ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ 10 ವ್ಯಕ್ತಿಗಳು ಬ್ಲಡ್ ಬ್ಯಾಂಕ್‌ಗಳಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಅವುಗಳನ್ನು ಪ್ಲೇಟ್‌ಲೆಟ್‌ಗಳಾಗಿ ಮರು ಪ್ಯಾಕೇಜ್ ಮಾಡುತ್ತಿದ್ದರು. ಇವೆರಡೂ ರಕ್ತದ ಅಂಶಗಳಾಗಿವೆ, ಆದರೆ ಇವೆರಡನ್ನೂ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಡೆಂಗ್ಯೂ ಪ್ರಕರಣಗಳಲ್ಲಿ ಪ್ಲೇಟ್‌ಲೆಟ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್​​ನಲ್ಲಿ ಮೂಸಂಬಿ ರಸ ನೀಡಿರುವುದಾಗಿ ಆರೋಪ, ರೋಗಿ ಸಾವು

ಪ್ರಯಾಗರಾಜ್‌ನಲ್ಲಿ ಜ್ಯೂಸ್ ಅನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸುವ ಬಗ್ಗೆ ನಾವು ಈ ಆರೋಪಿಗಳನ್ನು ಪ್ರಶ್ನಿಸಿದ್ದೇವೆ. ಆದರೆ ಅವರು ಹಾಗೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಅದರ ಬದಲಿಗೆ ರಕ್ತದ ಪ್ಲಾಸ್ಮಾವನ್ನು ಪ್ಲೇಟ್‌ಲೆಟ್‌ಗಳಾಗಿ ರವಾನಿಸಲಾಗುತ್ತಿದೆ ಎಂದು ಒಪ್ಪಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ಹೇಳಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸಾಕಷ್ಟು ಹರಡುತ್ತಿದೆ. ಇದರಿಂದ ಪ್ಲೇಟ್‌ಲೆಟ್‌ಗಳ ಬೇಡಿಕೆ ಹೆಚ್ಚಾಗಿದೆ. ಈ ಆರೋಪಿಗಳು ಅದರ ಲಾಭವನ್ನು ಪಡೆದುಕೊಳ್ಳುತ್ತಿದ್ದರು. ಪ್ಲೇಟ್​ಲೆಟ್ ನೀಡುವುದಾಗಿ ನಂಬಿಸಿ ಬಡವರನ್ನು ವಂಚಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಅಕ್ರಮವಾಗಿ ರಕ್ತ ಪೂರೈಕೆ ಮಾಡಿದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ 12 ಜನರನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!