AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ

ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ. 

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ
ಅಸ್ಸಾಂ ಅಪಘಾತ
Follow us
TV9 Web
| Updated By: Lakshmi Hegde

Updated on: Nov 11, 2021 | 2:08 PM

ಛತ್​​ ಪೂಜೆ ನೆರವೇರಿಸಿ ಆಟೋದಲ್ಲಿ ವಾಪಸ್​ ಮನೆಗೆ ಹೋಗುತ್ತಿದ್ದ 10ಮಂದಿ ದುರ್ಮರಣಕ್ಕೀಡಾದ ಘಟನೆ ಅಸ್ಸಾಂ-ತ್ರಿಪುರ ಗಡಿಯಲ್ಲಿ ನಡೆದಿದೆ. ಅಸ್ಸಾಂನ ಕರೀಮ್​ಗಂಜ್​​ನ ಎನ್​ಎಚ್​-8 ಹೆದ್ದಾರಿಯಲ್ಲಿ  ಹೋಗುತ್ತಿದ್ದ ಆಟೋಕ್ಕೆ ಟ್ರಕ್​ವೊಂದು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  

ಮೂವರು ಪುರುಷರು, ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇವರೆಲ್ಲ ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಪಘಾತವನ್ನು ಕಣ್ಣಾರೆ ನೋಡಿದವರು ಹೇಳಿರುವ ಪ್ರಕಾರ ತಪ್ಪು ಟ್ರಕ್​ ಚಾಲಕನದೇ ಆಗಿದೆ. ಮಿತಿಮೀರಿದ ವೇಗದಲ್ಲಿ ಆತ ಬರುತ್ತಿದ್ದ. ಹೀಗಾಗಿ ಎದುರು ಬಂದ ಆಟೋವನ್ನು ತಪ್ಪಿಸಲು ಅವನಿಗೆ ಆಗಲಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಅಸ್ಸಾಂನ ಅರಣ್ಯ ಮತ್ತು ಅಬಕಾರಿ ಸಚಿವ ಪರಿಮಳ್​ ಶುಕ್ಲವೈದ್ಯ ಟ್ವೀಟ್​ ಮಾಡಿದ್ದಾರೆ. ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸುವ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಮದ್ರಾಸ್​ ಹೈಕೋರ್ಟ್​ ಅನುಮತಿ

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್