AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ

ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ. 

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ
ಅಸ್ಸಾಂ ಅಪಘಾತ
TV9 Web
| Edited By: |

Updated on: Nov 11, 2021 | 2:08 PM

Share

ಛತ್​​ ಪೂಜೆ ನೆರವೇರಿಸಿ ಆಟೋದಲ್ಲಿ ವಾಪಸ್​ ಮನೆಗೆ ಹೋಗುತ್ತಿದ್ದ 10ಮಂದಿ ದುರ್ಮರಣಕ್ಕೀಡಾದ ಘಟನೆ ಅಸ್ಸಾಂ-ತ್ರಿಪುರ ಗಡಿಯಲ್ಲಿ ನಡೆದಿದೆ. ಅಸ್ಸಾಂನ ಕರೀಮ್​ಗಂಜ್​​ನ ಎನ್​ಎಚ್​-8 ಹೆದ್ದಾರಿಯಲ್ಲಿ  ಹೋಗುತ್ತಿದ್ದ ಆಟೋಕ್ಕೆ ಟ್ರಕ್​ವೊಂದು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  

ಮೂವರು ಪುರುಷರು, ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇವರೆಲ್ಲ ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಪಘಾತವನ್ನು ಕಣ್ಣಾರೆ ನೋಡಿದವರು ಹೇಳಿರುವ ಪ್ರಕಾರ ತಪ್ಪು ಟ್ರಕ್​ ಚಾಲಕನದೇ ಆಗಿದೆ. ಮಿತಿಮೀರಿದ ವೇಗದಲ್ಲಿ ಆತ ಬರುತ್ತಿದ್ದ. ಹೀಗಾಗಿ ಎದುರು ಬಂದ ಆಟೋವನ್ನು ತಪ್ಪಿಸಲು ಅವನಿಗೆ ಆಗಲಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಅಸ್ಸಾಂನ ಅರಣ್ಯ ಮತ್ತು ಅಬಕಾರಿ ಸಚಿವ ಪರಿಮಳ್​ ಶುಕ್ಲವೈದ್ಯ ಟ್ವೀಟ್​ ಮಾಡಿದ್ದಾರೆ. ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸುವ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಮದ್ರಾಸ್​ ಹೈಕೋರ್ಟ್​ ಅನುಮತಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ