AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ

ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ. 

ಛತ್​ ಪೂಜೆ ನೆರವೇರಿಸಿ ಮನೆಗೆ ಹೋಗುತ್ತಿದ್ದ 10 ಮಂದಿ ಸಾವು; ಟ್ರಕ್​ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆಯರು, ಮಕ್ಕಳು ಬಲಿ
ಅಸ್ಸಾಂ ಅಪಘಾತ
TV9 Web
| Edited By: |

Updated on: Nov 11, 2021 | 2:08 PM

Share

ಛತ್​​ ಪೂಜೆ ನೆರವೇರಿಸಿ ಆಟೋದಲ್ಲಿ ವಾಪಸ್​ ಮನೆಗೆ ಹೋಗುತ್ತಿದ್ದ 10ಮಂದಿ ದುರ್ಮರಣಕ್ಕೀಡಾದ ಘಟನೆ ಅಸ್ಸಾಂ-ತ್ರಿಪುರ ಗಡಿಯಲ್ಲಿ ನಡೆದಿದೆ. ಅಸ್ಸಾಂನ ಕರೀಮ್​ಗಂಜ್​​ನ ಎನ್​ಎಚ್​-8 ಹೆದ್ದಾರಿಯಲ್ಲಿ  ಹೋಗುತ್ತಿದ್ದ ಆಟೋಕ್ಕೆ ಟ್ರಕ್​ವೊಂದು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  

ಮೂವರು ಪುರುಷರು, ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇವರೆಲ್ಲ ಛತ್​​ ಪೂಜೆಯನ್ನು ನೆರವೇರಿಸಿ ಒಂದೇ ಆಟೋದಲ್ಲಿ ಮನೆಗೆ ವಾಪಸ್​ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಟ್ರಕ್​ ಈ ಆಟೋಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಪಘಾತವನ್ನು ಕಣ್ಣಾರೆ ನೋಡಿದವರು ಹೇಳಿರುವ ಪ್ರಕಾರ ತಪ್ಪು ಟ್ರಕ್​ ಚಾಲಕನದೇ ಆಗಿದೆ. ಮಿತಿಮೀರಿದ ವೇಗದಲ್ಲಿ ಆತ ಬರುತ್ತಿದ್ದ. ಹೀಗಾಗಿ ಎದುರು ಬಂದ ಆಟೋವನ್ನು ತಪ್ಪಿಸಲು ಅವನಿಗೆ ಆಗಲಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಅಸ್ಸಾಂನ ಅರಣ್ಯ ಮತ್ತು ಅಬಕಾರಿ ಸಚಿವ ಪರಿಮಳ್​ ಶುಕ್ಲವೈದ್ಯ ಟ್ವೀಟ್​ ಮಾಡಿದ್ದಾರೆ. ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸುವ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಮದ್ರಾಸ್​ ಹೈಕೋರ್ಟ್​ ಅನುಮತಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ