AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಬಿರ್ಯಾನಿ ತಿಂದ ಕೆಲಹೊತ್ತಲ್ಲೇ 10 ವರ್ಷದ ಬಾಲಕಿ ಸಾವು; 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬಿರ್ಯಾನಿ ತಿಂದು ಮೃತಪಟ್ಟ ಬಾಲಕಿಯ ಹೆಸರು ಲೋಕ್ಷಣಾ. ಈಕೆ ತನ್ನ ಕುಟುಂಬದವರೊಂದಿಗೆ ಉಪಾಹಾರಗೃಹಕ್ಕೆ ಹೋಗಿ ಬಿರ್ಯಾನಿ ತಿಂದಿದ್ದಳು. ಆದರೆ ಕೆಲವೇ ಹೊತ್ತಲ್ಲಿ ವಾಂತಿ ಶುರುವಾಗಿದೆ.

Tamil Nadu: ಬಿರ್ಯಾನಿ ತಿಂದ ಕೆಲಹೊತ್ತಲ್ಲೇ 10 ವರ್ಷದ ಬಾಲಕಿ ಸಾವು; 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬಿರ್ಯಾನಿ ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 12, 2021 | 11:27 AM

Share

ತಿರುವನಣ್ಣಮಲೈ: ತಮಿಳುನಾಡಿನ (Tamil Nadu) ತಿರುವಣ್ಣಾಮಲೈ ಜಿಲ್ಲೆ ಅರ್ಣಿ ಎಂಬಲ್ಲಿರುವ 7ಸ್ಟಾರ್​ ಹೋಟೆಲ್​ವೊಂದರಲ್ಲಿ ಚಿಕನ್​ ತಂದೂರಿ ಬಿರ್ಯಾನಿ (Chicken Tandoori Biryani) ತಿಂದ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಹಾಗೇ, 40ಕ್ಕೂ ಹೆಚ್ಚು ಮಂದಿ ಆರೋಗ್ಯ ಹಾಳಾಗಿದ್ದು, ಅದರಲ್ಲಿ 10 ಮಂದಿಯ ಪರಿಸ್ಥಿತಿ ತುಸು ಗಂಭೀರವಾಗಿಯೇ ಇದೆ. ಅದರಲ್ಲೂ ಮೂರು ಜನ ಮೃತ ಬಾಲಕಿಯ ಕುಟುಂಬದವರೇ ಆಗಿದ್ದಾರೆ.

ಇಲ್ಲಿ ಚಿಕನ್​ ತಂದೂರಿ ಬಿರ್ಯಾನಿ ತಿಂದವರಿಗೆಲ್ಲ ವಾಂತಿ, ವಾಕರಿಕೆ, ಅತಿಸಾರ ಶುರುವಾಗಿದೆ. ಎಲ್ಲರನ್ನೂ ಅರ್ಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರು ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕನ್​ ಪೀಸ್​ ಹಳಸಿತ್ತು ಮತ್ತು ಕಲುಷಿತವಾಗಿತ್ತು. ಅದನ್ನು ಪರಿಶೀಲನೆ ಮಾಡದೆ ತಂದೂರಿ ಚಿಕನ್​ ಬಿರ್ಯಾನಿ ಮಾಡಿ ಗ್ರಾಹಕರಿಗೆ ಬಡಿಸಿದ್ದಾರೆ. ಅದು ಫುಡ್​ ಪಾಯ್ಸನ್​ ಆಗಿದ್ದರಿಂದ ತಿಂದವರ ಆರೋಗ್ಯ ಹದಗೆಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕಿಯ ಹೆಸರು ಲೋಕ್ಷಣಾ. ಈಕೆ ತನ್ನ ಕುಟುಂಬದವರೊಂದಿಗೆ ಉಪಾಹಾರಗೃಹಕ್ಕೆ ಹೋಗಿ ಬಿರ್ಯಾನಿ ತಿಂದಿದ್ದಳು. ಆದರೆ ಕೆಲವೇ ಹೊತ್ತಲ್ಲಿ ವಾಂತಿ ಶುರುವಾಗಿದೆ. ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಬಾಲಕಿಯ ಸಾವಿನಿಂದ ಸ್ಥಳೀಯರು ತುಂಬ ಕಂಗಾಲಾಗಿದ್ದಾರೆ.  ಘಟನೆ ನಡೆದ ಬೆನ್ನಲ್ಲೇ ಪೊಲೀಸ್​ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳ ಜಂಟಿ ತಂಡ ಆ ಹೋಟೆಲ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಆ ಬಿರ್ಯಾನಿ ಪರೀಕ್ಷೆಗೆಂದು ಸ್ಯಾಂಪಲ್​ ತೆಗೆದುಕೊಂಡಿದ್ದಾರೆ. ಹಾಗೇ, ಅಲ್ಲಿದ್ದ ಸುಮಾರು 15 ಕೆಜಿ ಚಿಕನ್​ಗಳು ಹಳಸಿವೆ ಎಂದು ಮೇಲ್ನೋಟಕ್ಕೇ ಗೊತ್ತಾಗಿದ್ದು, ಅದನ್ನೆಲ್ಲ ಜಪ್ತಿ ಮಾಡಲಾಗಿದೆ. ಸದ್ಯ ಆ ಉಪಾಹಾರ ಗೃಹವನ್ನೇ ಪೊಲೀಸರು ಸೀಲ್​ ಮಾಡಿದ್ದಾರೆ. ಹಾಗೇ, ನಗರದಲ್ಲಿ ಇರುವ ಎಲ್ಲ ನಾನ್​ ವೆಜ್​ ಹೋಟೆಲ್​​ಗಳಲ್ಲಿ ಸಂಗ್ರಹಿಸಡಲಾದ ಚಿಕನ್​ ಮತ್ತಿತರ ಮಾಂಸಗಳ ಕ್ವಾಲಿಟಿ ಚೆಕ್​ ಮಾಡುವ ಅಭಿಯಾನ ಕೂಡ ಪ್ರಾರಂಭವಾಗಿದೆ.

ಇದನ್ನೂ ಓದಿ: 120 ಆ್ಯಂಬುಲೆನ್ಸ್​ಗಳಿಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ನರೇಂದ್ರ ಮೋದಿ, ರಜನಿಕಾಂತ್, ಅಕ್ಷಯ್ ಕುಮಾರ್ ನಂತರ ಭಾರತದ ಮತ್ತಿಬ್ಬರು ಸೆಲೆಬ್ರಿಟಿಗಳು ‘ಇನ್​ಟು ದಿ ವೈಲ್ಡ್​​’ನಲ್ಲಿ!

(10 year old Girl dies 40 hospitalised after consuming biryani In Tamil Nadu)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ