AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಡೋಸ್​ ಲಸಿಕೆ ನೀಡಿಕೆ; ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದ ಶಶಿ ತರೂರ್​

ಕಾಂಗ್ರೆಸ್​ ನಾಯಕ ಪವನ್ ಖೇರಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.  ಶಶಿ ತರೂರ್​ ಟ್ವೀಟ್​​ಉಲ್ಲೇಖಿಸಿ ಟ್ವೀಟ್​ ಮಾಡಿದ ಅವರು, ಕೊವಿಡ್​ 19ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಬಳಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

100 ಕೋಟಿ ಡೋಸ್​ ಲಸಿಕೆ ನೀಡಿಕೆ; ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದ ಶಶಿ ತರೂರ್​
ಶಶಿ ತರೂರ್​
TV9 Web
| Updated By: Lakshmi Hegde|

Updated on:Oct 21, 2021 | 5:15 PM

Share

ದೆಹಲಿ: ಕೊವಿಡ್​ 19 ಲಸಿಕೆ ನೀಡಿಕೆ ಅಭಿಯಾನ (Covid 19 Vaccine Drive)ದಲ್ಲಿ ಇಂದು ಭಾರತ ದಾಖಲೆ ನಿರ್ಮಿಸಿದೆ. ಲಸಿಕೆ ಅಭಿಯಾನ ಶುರುವಾದ ಜನವರಿ 16ರಿಂದ ಇಲ್ಲಿಯವರೆಗೆ 100 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರ ಈ ಖುಷಿಯಲ್ಲಿ ಇರುವ ಹೊತ್ತಲ್ಲೇ ಕಾಂಗ್ರೆಸ್​ ನಾಯಕ ಶಶಿ ತರೂರ್​ ಟ್ವೀಟ್​ ಮೂಲಕ ಕೊಂಕಾಡಿದ್ದಾರೆ. ಅಂತೂ ಕೇಂದ್ರ ಸರ್ಕಾರ ಈಗ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದು ಹೇಳಿದ್ದಾರೆ. ಕೊವಿಡ್​ 19 ಎರಡನೇ ಅಲೆಯಲ್ಲಿ ಸರ್ಕಾರದ ಅವ್ಯವಸ್ಥೆಯನ್ನು ನೆನಪಿಸಿದ್ದಾರೆ.

ಇಂದು ಟ್ವೀಟ್​ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್​,  ಇಂದು ಭಾರತ 100 ಕೋಟಿ ಡೋಸ್​ ಲಸಿಕೆ ನೀಡಿಕೆ ಸಾಧನೆ ಮಾಡಿದ್ದು ನಿಜಕ್ಕೂ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಚಾರ. ನಾವು ಈ ಕ್ರೆಡಿಟ್​​ನ್ನು ಕೇಂದ್ರ ಸರ್ಕಾರಕ್ಕೆ ಕೊಡೋಣ. ಯಾಕೆಂದರೆ ಕೊವಿಡ್​ 19 ಎರಡನೇ ಅಲೆಯ ಹೊತ್ತಲ್ಲಿ ಅಸಮರ್ಪಕ ನಿರ್ವಹಣೆ ಮತ್ತು ಅದೇ ಹೊತ್ತಲ್ಲಿ ಕೊರೊನಾ ಲಸಿಕೆಯೂ ಸರಿಯಾಗಿ ಸಿಗದಂತೆ ಮಾಡಿದ ನಂತರ ಈಗ ಕೇಂದ್ರ ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರವನ್ನು ಟೀಕಾತ್ಮಕವಾಗಿಯೇ ಪ್ರಶಂಸಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್​ ನಾಯಕ ಪವನ್ ಖೇರಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.  ಶಶಿ ತರೂರ್​ ಟ್ವೀಟ್​​ನ್ನೇ ಉಲ್ಲೇಖಿಸಿ ಟ್ವೀಟ್​ ಮಾಡಿದ ಅವರು,  ಇದೀಗ 100 ಕೋಟಿ ಡೋಸ್​ ಲಸಿಕೆ ನೀಡಿಕೆ ಸಾಧನೆಯ ಮನ್ನಣೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದರೆ, ಕೊವಿಡ್​ 19ನಿಂದ ಈಗಲೂ ಬಳಲುತ್ತಿರುವ, ಸರ್ಕಾರದ ಅಸಮರ್ಪಕ ಆಡಳಿತದಿಂದ ತೊಂದರೆಗೀಡಾದ, ಪ್ರಾಣ ಕಳೆದುಕೊಂಡ ಲಕ್ಷಾಂತರ ಕುಟುಂಬಗಳಿಗೆ ಅವಮಾನ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಾವು ಸರ್ಕಾರಕ್ಕೆ ಕ್ರೆಡಿಟ್​ ಕೊಡುವುದಕ್ಕೂ ಮೊದಲು ಪ್ರಧಾನಿ ಮೋದಿ, ಅಂಥ ಸಂಕಷ್ಟಕ್ಕೀಡಾದ ಕುಟುಂಬಗಳ ಬಳಿ ಕ್ಷಮೆ ಕೇಳಬೇಕು. ಸಾಧನೆಯ ಮನ್ನಣೆ ಏನಿದ್ದರೂ ವಿಜ್ಞಾನಿಗಳು ಮತ್ತು ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗೆ ಸಲ್ಲಬೇಕು ಎಂದಿದ್ದಾರೆ.

ಇದನ್ನೂ ಓದಿ: Video: ಪತ್ರಕರ್ತನ ಮೊಬೈಲ್​ ಕದ್ದು ಮಳ್ಳಾದ ಕಳ್ಳ; ಕದ್ದ ಮರುಕ್ಷಣವೇ ಅವನಿಗೇ ಗೊತ್ತಿಲ್ಲದೆ 20 ಸಾವಿರ ಜನರಿಗೆ ಮುಖ ತೋರಿಸಿದ !

Vittal Malekudiya: ವಿಠಲ್ ಮಲೆಕುಡಿಯ ನಕ್ಸಲ್ ನಂಟಿನ ಆರೋಪದಿಂದ ಮುಕ್ತ; 9 ವರ್ಷಗಳ ಬಳಿಕ ಮಹತ್ವದ ತೀರ್ಪು ಪ್ರಕಟ

Published On - 5:15 pm, Thu, 21 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ